ಬ್ರೇಕಿಂಗ್ ನ್ಯೂಸ್
05-05-26 11:23 pm HK News Desk ಕ್ರೈಂ
ಮಂಗಳೂರು, ಮೇ 5: ಫೇಸ್ಬುಕ್, ಇನ್ಸ್ ಟಾ ಗ್ರಾಮ್ ರೀತಿಯ ಜಾಲತಾಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲೇ ನಕಲಿ ಎಐ ವಿಡಿಯೋ ಬಳಸಿ ಜನರನ್ನು ಯಾಮಾರಿಸುವ ಯತ್ನ ರಾಜಾರೋಷ ನಡೆಯುತ್ತಿದೆ. ಈ ಮೋಸದ ಜಾಲಕ್ಕೀಗ ಬುದ್ಧಿವಂತರ ಜಿಲ್ಲೆಯೆಂದು ಹಣೆಪಟ್ಟಿ ಹೊತ್ತಿರುವ ಮಂಗಳೂರಿನ ವ್ಯಕ್ತಿಯೇ ಬಲಿಯಾಗಿದ್ದಾರೆ. ನಕಲಿ ಆನ್ಲೈನ್ ಟ್ರೇಡಿಂಗ್ ಮೋಸದಲ್ಲಿ ಸಿಲುಕಿ 75 ವರ್ಷದ ಹಿರಿಯ ನಾಗರಿಕರೊಬ್ಬರು 18.81 ಲಕ್ಷ ರು. ಕಳಕೊಂಡಿರುವುದು ಬೆಳಕಿಗೆ ಬಂದಿದೆ.
ಕಳೆದ ಡಿಸೆಂಬರ್ನಲ್ಲಿ ಸಂತ್ರಸ್ತರು ಫೇಸ್ಬುಕ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಅವರ ರೀತಿಯಲ್ಲೇ ಭಾಷಣವಿರುವ ಆನ್ಲೈನ್ ಟ್ರೇಡಿಂಗ್ ಕುರಿತ ವಿಡಿಯೋವೊಂದನ್ನು ನೋಡಿದ್ದರು. ಇದನ್ನು ನಿಜವೆಂದು ನಂಬಿದ ಅವರು ವಿಡಿಯೋ ಕೆಳಗಿದ್ದ ಲಿಂಕ್ ಕ್ಲಿಕ್ ಮಾಡಿ ತಮ್ಮ ವಿವರಗಳನ್ನು ನೋಂದಾಯಿಸಿದ್ದರು. ಇದಾದ ಬೆನ್ನಲ್ಲೇ ‘ಮೀನಾಕ್ಷಿ’ ಎಂಬ ಹೆಸರಿನ ವ್ಯಕ್ತಿಯಿಂದ ಕರೆ ಬಂದಿದ್ದು, ಹೆಚ್ಚಿನ ಲಾಭದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದಾರೆ. ಹಣ ಡಬಲ್ ಆಗುತ್ತೆ, ಇದಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ಎಂದು ಹಣಕಾಸು ಸಚಿವರೇ ಹೇಳುತ್ತಿರುವ ಅಸಲಿ ರೀತಿಯಲ್ಲೇ ಇರುವ ವಿಡಿಯೋ ನಂಬಿ ವ್ಯಕ್ತಿ ತನ್ನ ನಿವೃತ್ತಿಯ ಹಣವನ್ನು ಹೂಡಿಕೆ ಮಾಡಿದ್ದರು.
ಆನಂತರ, ಅಕ್ಷರ ಗೌಡ ಎಂಬ ಹೆಸರಿನ ವ್ಯಕ್ತಿ ಆನಂದ ಉನ್ನಿಕೃಷ್ಣ ಅವರ ಅಸಿಸ್ಟೆಂಟ್ ಎಂದು ಪರಿಚಯಿಸಿಕೊಂಡು, ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ವಾಟ್ಸಪ್ ಮೂಲಕ ಹೂಡಿಕೆಗೆ ಪ್ರೇರೇಪಿಸಿದ್ದ. ಆರೋಪಿಗಳ ಮಾತು ನಂಬಿದ ವೃದ್ಧ ವ್ಯಕ್ತಿ ಡಿಸೆಂಬರ್ 18ರಂದು ₹3 ಲಕ್ಷ, ಡಿಸೆಂಬರ್ 26ರಂದು ₹7 ಲಕ್ಷ, ಜನವರಿ 6ರಂದು ₹3 ಲಕ್ಷ ಹಾಗೂ ಜನವರಿ 12ರಂದು ₹5.60 ಲಕ್ಷ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದರು.
ಒಟ್ಟು ₹18,81,000 ಹಣವನ್ನು ಹೂಡಿಕೆ ಮಾಡಿಸಿಕೊಂಡ ಆರೋಪಿಗಳು ₹1 ಕೋಟಿ ಲಾಭ ನೀಡುವುದಾಗಿ ನಂಬಿಸಿದ್ದರು. ಆದರೆ ಯಾವುದೇ ಲಾಭ ನೀಡದೆ ವಂಚಿಸಿದ್ದು ವಂಚನೆ ತಿಳಿಯುತ್ತಲೇ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am