ಬ್ರೇಕಿಂಗ್ ನ್ಯೂಸ್
05-05-26 11:23 pm HK News Desk ಕ್ರೈಂ
ಮಂಗಳೂರು, ಮೇ 5: ಫೇಸ್ಬುಕ್, ಇನ್ಸ್ ಟಾ ಗ್ರಾಮ್ ರೀತಿಯ ಜಾಲತಾಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲೇ ನಕಲಿ ಎಐ ವಿಡಿಯೋ ಬಳಸಿ ಜನರನ್ನು ಯಾಮಾರಿಸುವ ಯತ್ನ ರಾಜಾರೋಷ ನಡೆಯುತ್ತಿದೆ. ಈ ಮೋಸದ ಜಾಲಕ್ಕೀಗ ಬುದ್ಧಿವಂತರ ಜಿಲ್ಲೆಯೆಂದು ಹಣೆಪಟ್ಟಿ ಹೊತ್ತಿರುವ ಮಂಗಳೂರಿನ ವ್ಯಕ್ತಿಯೇ ಬಲಿಯಾಗಿದ್ದಾರೆ. ನಕಲಿ ಆನ್ಲೈನ್ ಟ್ರೇಡಿಂಗ್ ಮೋಸದಲ್ಲಿ ಸಿಲುಕಿ 75 ವರ್ಷದ ಹಿರಿಯ ನಾಗರಿಕರೊಬ್ಬರು 18.81 ಲಕ್ಷ ರು. ಕಳಕೊಂಡಿರುವುದು ಬೆಳಕಿಗೆ ಬಂದಿದೆ.
ಕಳೆದ ಡಿಸೆಂಬರ್ನಲ್ಲಿ ಸಂತ್ರಸ್ತರು ಫೇಸ್ಬುಕ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಅವರ ರೀತಿಯಲ್ಲೇ ಭಾಷಣವಿರುವ ಆನ್ಲೈನ್ ಟ್ರೇಡಿಂಗ್ ಕುರಿತ ವಿಡಿಯೋವೊಂದನ್ನು ನೋಡಿದ್ದರು. ಇದನ್ನು ನಿಜವೆಂದು ನಂಬಿದ ಅವರು ವಿಡಿಯೋ ಕೆಳಗಿದ್ದ ಲಿಂಕ್ ಕ್ಲಿಕ್ ಮಾಡಿ ತಮ್ಮ ವಿವರಗಳನ್ನು ನೋಂದಾಯಿಸಿದ್ದರು. ಇದಾದ ಬೆನ್ನಲ್ಲೇ ‘ಮೀನಾಕ್ಷಿ’ ಎಂಬ ಹೆಸರಿನ ವ್ಯಕ್ತಿಯಿಂದ ಕರೆ ಬಂದಿದ್ದು, ಹೆಚ್ಚಿನ ಲಾಭದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದಾರೆ. ಹಣ ಡಬಲ್ ಆಗುತ್ತೆ, ಇದಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ಎಂದು ಹಣಕಾಸು ಸಚಿವರೇ ಹೇಳುತ್ತಿರುವ ಅಸಲಿ ರೀತಿಯಲ್ಲೇ ಇರುವ ವಿಡಿಯೋ ನಂಬಿ ವ್ಯಕ್ತಿ ತನ್ನ ನಿವೃತ್ತಿಯ ಹಣವನ್ನು ಹೂಡಿಕೆ ಮಾಡಿದ್ದರು.
ಆನಂತರ, ಅಕ್ಷರ ಗೌಡ ಎಂಬ ಹೆಸರಿನ ವ್ಯಕ್ತಿ ಆನಂದ ಉನ್ನಿಕೃಷ್ಣ ಅವರ ಅಸಿಸ್ಟೆಂಟ್ ಎಂದು ಪರಿಚಯಿಸಿಕೊಂಡು, ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ವಾಟ್ಸಪ್ ಮೂಲಕ ಹೂಡಿಕೆಗೆ ಪ್ರೇರೇಪಿಸಿದ್ದ. ಆರೋಪಿಗಳ ಮಾತು ನಂಬಿದ ವೃದ್ಧ ವ್ಯಕ್ತಿ ಡಿಸೆಂಬರ್ 18ರಂದು ₹3 ಲಕ್ಷ, ಡಿಸೆಂಬರ್ 26ರಂದು ₹7 ಲಕ್ಷ, ಜನವರಿ 6ರಂದು ₹3 ಲಕ್ಷ ಹಾಗೂ ಜನವರಿ 12ರಂದು ₹5.60 ಲಕ್ಷ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದರು.
ಒಟ್ಟು ₹18,81,000 ಹಣವನ್ನು ಹೂಡಿಕೆ ಮಾಡಿಸಿಕೊಂಡ ಆರೋಪಿಗಳು ₹1 ಕೋಟಿ ಲಾಭ ನೀಡುವುದಾಗಿ ನಂಬಿಸಿದ್ದರು. ಆದರೆ ಯಾವುದೇ ಲಾಭ ನೀಡದೆ ವಂಚಿಸಿದ್ದು ವಂಚನೆ ತಿಳಿಯುತ್ತಲೇ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am