ಬ್ರೇಕಿಂಗ್ ನ್ಯೂಸ್
05-05-26 11:23 pm HK News Desk ಕ್ರೈಂ
ಮಂಗಳೂರು, ಮೇ 5: ಫೇಸ್ಬುಕ್, ಇನ್ಸ್ ಟಾ ಗ್ರಾಮ್ ರೀತಿಯ ಜಾಲತಾಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲೇ ನಕಲಿ ಎಐ ವಿಡಿಯೋ ಬಳಸಿ ಜನರನ್ನು ಯಾಮಾರಿಸುವ ಯತ್ನ ರಾಜಾರೋಷ ನಡೆಯುತ್ತಿದೆ. ಈ ಮೋಸದ ಜಾಲಕ್ಕೀಗ ಬುದ್ಧಿವಂತರ ಜಿಲ್ಲೆಯೆಂದು ಹಣೆಪಟ್ಟಿ ಹೊತ್ತಿರುವ ಮಂಗಳೂರಿನ ವ್ಯಕ್ತಿಯೇ ಬಲಿಯಾಗಿದ್ದಾರೆ. ನಕಲಿ ಆನ್ಲೈನ್ ಟ್ರೇಡಿಂಗ್ ಮೋಸದಲ್ಲಿ ಸಿಲುಕಿ 75 ವರ್ಷದ ಹಿರಿಯ ನಾಗರಿಕರೊಬ್ಬರು 18.81 ಲಕ್ಷ ರು. ಕಳಕೊಂಡಿರುವುದು ಬೆಳಕಿಗೆ ಬಂದಿದೆ.
ಕಳೆದ ಡಿಸೆಂಬರ್ನಲ್ಲಿ ಸಂತ್ರಸ್ತರು ಫೇಸ್ಬುಕ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಅವರ ರೀತಿಯಲ್ಲೇ ಭಾಷಣವಿರುವ ಆನ್ಲೈನ್ ಟ್ರೇಡಿಂಗ್ ಕುರಿತ ವಿಡಿಯೋವೊಂದನ್ನು ನೋಡಿದ್ದರು. ಇದನ್ನು ನಿಜವೆಂದು ನಂಬಿದ ಅವರು ವಿಡಿಯೋ ಕೆಳಗಿದ್ದ ಲಿಂಕ್ ಕ್ಲಿಕ್ ಮಾಡಿ ತಮ್ಮ ವಿವರಗಳನ್ನು ನೋಂದಾಯಿಸಿದ್ದರು. ಇದಾದ ಬೆನ್ನಲ್ಲೇ ‘ಮೀನಾಕ್ಷಿ’ ಎಂಬ ಹೆಸರಿನ ವ್ಯಕ್ತಿಯಿಂದ ಕರೆ ಬಂದಿದ್ದು, ಹೆಚ್ಚಿನ ಲಾಭದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದಾರೆ. ಹಣ ಡಬಲ್ ಆಗುತ್ತೆ, ಇದಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ಎಂದು ಹಣಕಾಸು ಸಚಿವರೇ ಹೇಳುತ್ತಿರುವ ಅಸಲಿ ರೀತಿಯಲ್ಲೇ ಇರುವ ವಿಡಿಯೋ ನಂಬಿ ವ್ಯಕ್ತಿ ತನ್ನ ನಿವೃತ್ತಿಯ ಹಣವನ್ನು ಹೂಡಿಕೆ ಮಾಡಿದ್ದರು.
ಆನಂತರ, ಅಕ್ಷರ ಗೌಡ ಎಂಬ ಹೆಸರಿನ ವ್ಯಕ್ತಿ ಆನಂದ ಉನ್ನಿಕೃಷ್ಣ ಅವರ ಅಸಿಸ್ಟೆಂಟ್ ಎಂದು ಪರಿಚಯಿಸಿಕೊಂಡು, ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ವಾಟ್ಸಪ್ ಮೂಲಕ ಹೂಡಿಕೆಗೆ ಪ್ರೇರೇಪಿಸಿದ್ದ. ಆರೋಪಿಗಳ ಮಾತು ನಂಬಿದ ವೃದ್ಧ ವ್ಯಕ್ತಿ ಡಿಸೆಂಬರ್ 18ರಂದು ₹3 ಲಕ್ಷ, ಡಿಸೆಂಬರ್ 26ರಂದು ₹7 ಲಕ್ಷ, ಜನವರಿ 6ರಂದು ₹3 ಲಕ್ಷ ಹಾಗೂ ಜನವರಿ 12ರಂದು ₹5.60 ಲಕ್ಷ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದರು.
ಒಟ್ಟು ₹18,81,000 ಹಣವನ್ನು ಹೂಡಿಕೆ ಮಾಡಿಸಿಕೊಂಡ ಆರೋಪಿಗಳು ₹1 ಕೋಟಿ ಲಾಭ ನೀಡುವುದಾಗಿ ನಂಬಿಸಿದ್ದರು. ಆದರೆ ಯಾವುದೇ ಲಾಭ ನೀಡದೆ ವಂಚಿಸಿದ್ದು ವಂಚನೆ ತಿಳಿಯುತ್ತಲೇ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am