ಬ್ರೇಕಿಂಗ್ ನ್ಯೂಸ್
09-05-26 09:54 am HK News Staffer ಕ್ರೈಂ
ಪುತ್ತೂರು, ಮೇ 09 : ಬೇಸಿಗೆ ರಜೆಯ ಸಂಭ್ರಮದಲ್ಲಿ ಸ್ನೇಹಿತೆಯರೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ನಡೆದಿದೆ.
ಮೃತರನ್ನು ಅರ್ಪಿತಾ (15) ಹಾಗೂ ಸುನೀತಾ (21) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಅರ್ಪಿತಾ ಅವರ ತಂದೆ ಹರೀಶ್ ಪಿ.ಕೆ. ಅವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸ್ನೇಹಿತರೊಂದಿಗೆ ತೆರಳಿದ್ದ ವೇಳೆ ದುರಂತ
ಮೇ 8ರಂದು ಮಧ್ಯಾಹ್ನ ಅರ್ಪಿತಾ, ಸುನೀತಾ, ಅಕ್ಷತಾ ಹಾಗೂ ನೆಟ್ಟಣದ ಶ್ರೇಯಾ ಸೇರಿದಂತೆ ಸ್ನೇಹಿತರ ಬಳಗ ಕೊಲ್ಯದಕಟ್ಟದ ಗುಂಡ್ಯ ಹೊಳೆಗೆ ಸ್ನಾನಕ್ಕೆ ತೆರಳಿತ್ತು. ಸಂಜೆ ಸುಮಾರು 4:30ರ ವೇಳೆಗೆ ಎಲ್ಲರೂ ನದಿಯಲ್ಲಿ ಈಜಾಡುತ್ತಿದ್ದಾಗ, ಅರ್ಪಿತಾ ಮತ್ತು ಸುನೀತಾ ನೀರಿನ ಆಳಕ್ಕೆ ಸಿಲುಕಿ ಮುಳುಗತೊಡಗಿದ್ದಾರೆ. ಜೊತೆಯಲ್ಲಿದ್ದವರು ಇಬ್ಬರನ್ನೂ ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.

ಸ್ಥಳೀಯರಿಂದ ಶೋಧ ಕಾರ್ಯ
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿ ಜಾರ್ಜ್ ಎಂಬವರು ನೀರಿನಲ್ಲಿ ಹುಡುಕಾಟ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಕುಟ್ರುಪ್ಪಾಡಿ ಭಾಗದ ನದಿ ಪ್ರದೇಶ ಈ ಹಿಂದೆಯೂ ಅಪಾಯಕಾರಿಯಾಗಿತ್ತು ಎನ್ನಲಾಗಿದೆ. ಇದೇ ಸ್ಥಳದಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗ್ರಾಮಸ್ಥರ ನೆನಪಿನಲ್ಲಿ ಇನ್ನೂ ಹಸಿರಾಗಿರುವಾಗಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ.
ಕನಸುಗಳೇ ನೀರಿನಲ್ಲಿ ಕರಗಿ ಹೋಯ್ತು
ರಜೆಯ ದಿನಗಳನ್ನು ಖುಷಿಯಿಂದ ಕಳೆಯಲು ತೆರಳಿದ್ದ ಈ ಬಾಲಕಿಯರು, ಮುಂದಿನ ಭವಿಷ್ಯದ ಅನೇಕ ಕನಸುಗಳನ್ನು ಹೊತ್ತಿದ್ದರು. ಆದರೆ ಕ್ಷಣ ಮಾತ್ರದ ಅಜಾಗರೂಕತೆ ಅವರ ಬದುಕನ್ನೇ ಕಸಿದುಕೊಂಡಿದೆ. ನಗುನಗುತ್ತಾ ಹೊರಟಿದ್ದ ಮಕ್ಕಳು ಶವವಾಗಿ ಮನೆಗೆ ಮರಳಿರುವ ದೃಶ್ಯ ಪೋಷಕರ ಆಕ್ರಂದನಕ್ಕೆ ಕಾರಣವಾಗಿದ್ದು, ಗ್ರಾಮದಲ್ಲಿ ಶೋಕ ಆವರಿಸಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am