ಬ್ರೇಕಿಂಗ್ ನ್ಯೂಸ್
09-05-26 10:29 pm HK News Desk ಕ್ರೈಂ
ಮಂಗಳೂರು, ಮೇ 9: ನಗರದ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ತಪಾಸಣೆ ನಡೆಸಿದಾಗ ಆತನ ಕೈಯಲ್ಲಿ ಅಪಾರ ಪ್ರಮಾಣದ ಚಿನ್ನದ ಆಭರಣಗಳು ಪತ್ತೆಯಾಗಿದ್ದು ವಿಚಾರಣೆಯಲ್ಲಿ ಅವುಗಳನ್ನು ತ್ರಿಶ್ಶೂರಿನಿಂದ ಕದ್ದು ತಂದದ್ದೆಂದು ತಿಳಿಸಿದ್ದರಿಂದ ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾಞಂಗಾಡ್ ನಿವಾಸಿ ಆಶಿಫ್ ಪಿ.ಎಚ್. (25) ಬಂಧಿತ ಆರೋಪಿ. ರೈಲು ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಆತನ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದಾಗ, 93.5 ಗ್ರಾಂ ತೂಕದ ಚಿನ್ನಾಭರಣಗಳು ಪತ್ತೆಯಾಗಿವೆ. ಇದರಲ್ಲಿ 4 ಬಳೆಗಳು, 3 ಹಾರಗಳು, 4 ಉಂಗುರಗಳು, ಚೈನ್, ಬ್ರೇಸ್ಲೆಟ್ ಹಾಗೂ ಸ್ಟಡ್ಗಳಿದ್ದವು.
ಕೇರಳದ ತ್ರಿಶೂರ್ ಜಿಲ್ಲೆಯ ಪಾವರಟ್ಟಿ ಠಾಣೆಯಲ್ಲಿ ಮೇ 6ರಂದು ದಾಖಲಾದ ಕಳ್ಳತನ ಪ್ರಕರಣದಲ್ಲಿ ಹತ್ತು ಪವನ್ ಬಂಗಾರ ಕಳವಾಗಿರುವುದು ತಿಳಿದುಬಂದಿತ್ತು. ಬಳಿಕ ಕೇರಳ ಪೊಲೀಸರನ್ನು ಸಂಪರ್ಕಿಸಿ, ಆರೋಪಿಯನ್ನು ವಿಚಾರಣೆ ನಡೆಸಿದಾಗ ಮನೆ ಕಳವು ಪ್ರಕರಣ ಒಪ್ಪಿಕೊಂಡಿದ್ದಾನೆ. ಎರ್ನಾಕುಳಂ ಮತ್ತು ಕಾಸರಗೋಡು ಜಿಲ್ಲೆಯ ವ್ಯಾಪ್ತಿಯಲ್ಲಿ 12ಕ್ಕೂ ಹೆಚ್ಚು ಮನೆ ಕಳವು ಪ್ರಕರಣಗಳಲ್ಲಿ ಅಶ್ರಫ್ ಆರೋಪಿಯಾಗಿದ್ದು ಕೋರ್ಟಿನಿಂದ ವಾರಂಟ್ಗಳಿದ್ದರೂ, ತಲೆಮರೆಸಿಕೊಂಡು ಓಡಾಡುತ್ತಿದ್ದ. ಪಾವರಟ್ಟಿ ಪೊಲೀಸರು ಮಂಗಳೂರಿಗೆ ಬಂದು ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am