ಬ್ರೇಕಿಂಗ್ ನ್ಯೂಸ್
09-05-26 10:29 pm HK News Desk ಕ್ರೈಂ
ಮಂಗಳೂರು, ಮೇ 9: ನಗರದ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ತಪಾಸಣೆ ನಡೆಸಿದಾಗ ಆತನ ಕೈಯಲ್ಲಿ ಅಪಾರ ಪ್ರಮಾಣದ ಚಿನ್ನದ ಆಭರಣಗಳು ಪತ್ತೆಯಾಗಿದ್ದು ವಿಚಾರಣೆಯಲ್ಲಿ ಅವುಗಳನ್ನು ತ್ರಿಶ್ಶೂರಿನಿಂದ ಕದ್ದು ತಂದದ್ದೆಂದು ತಿಳಿಸಿದ್ದರಿಂದ ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾಞಂಗಾಡ್ ನಿವಾಸಿ ಆಶಿಫ್ ಪಿ.ಎಚ್. (25) ಬಂಧಿತ ಆರೋಪಿ. ರೈಲು ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಆತನ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದಾಗ, 93.5 ಗ್ರಾಂ ತೂಕದ ಚಿನ್ನಾಭರಣಗಳು ಪತ್ತೆಯಾಗಿವೆ. ಇದರಲ್ಲಿ 4 ಬಳೆಗಳು, 3 ಹಾರಗಳು, 4 ಉಂಗುರಗಳು, ಚೈನ್, ಬ್ರೇಸ್ಲೆಟ್ ಹಾಗೂ ಸ್ಟಡ್ಗಳಿದ್ದವು.
ಕೇರಳದ ತ್ರಿಶೂರ್ ಜಿಲ್ಲೆಯ ಪಾವರಟ್ಟಿ ಠಾಣೆಯಲ್ಲಿ ಮೇ 6ರಂದು ದಾಖಲಾದ ಕಳ್ಳತನ ಪ್ರಕರಣದಲ್ಲಿ ಹತ್ತು ಪವನ್ ಬಂಗಾರ ಕಳವಾಗಿರುವುದು ತಿಳಿದುಬಂದಿತ್ತು. ಬಳಿಕ ಕೇರಳ ಪೊಲೀಸರನ್ನು ಸಂಪರ್ಕಿಸಿ, ಆರೋಪಿಯನ್ನು ವಿಚಾರಣೆ ನಡೆಸಿದಾಗ ಮನೆ ಕಳವು ಪ್ರಕರಣ ಒಪ್ಪಿಕೊಂಡಿದ್ದಾನೆ. ಎರ್ನಾಕುಳಂ ಮತ್ತು ಕಾಸರಗೋಡು ಜಿಲ್ಲೆಯ ವ್ಯಾಪ್ತಿಯಲ್ಲಿ 12ಕ್ಕೂ ಹೆಚ್ಚು ಮನೆ ಕಳವು ಪ್ರಕರಣಗಳಲ್ಲಿ ಅಶ್ರಫ್ ಆರೋಪಿಯಾಗಿದ್ದು ಕೋರ್ಟಿನಿಂದ ವಾರಂಟ್ಗಳಿದ್ದರೂ, ತಲೆಮರೆಸಿಕೊಂಡು ಓಡಾಡುತ್ತಿದ್ದ. ಪಾವರಟ್ಟಿ ಪೊಲೀಸರು ಮಂಗಳೂರಿಗೆ ಬಂದು ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am