ಬ್ರೇಕಿಂಗ್ ನ್ಯೂಸ್
12-05-26 01:11 pm HK News Staffer ಕ್ರೈಂ
ಮಂಗಳೂರು, ಮೇ 12 : ದೇಶವ್ಯಾಪಿ ಗಮನ ಸೆಳೆದಿದ್ದ "ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ” ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ಸಲುವಾಗಿ 17 ಸ್ಥಳಗಳಲ್ಲಿ ಅಗೆಯಲು ಬಳಸಿದ್ದ ಜೆಸಿಬಿ ಮತ್ತು ಕಾರ್ಮಿಕರ ವೆಚ್ಚವನ್ನು ಇನ್ನೂ ಪಾವತಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.
2025ರ ಜುಲೈ 29ರಿಂದ ಆಗಸ್ಟ್ 13ರ ವರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ ಜೆಸಿಬಿ ಮತ್ತು ಕೂಲಿಯಾಳುಗಳನ್ನು ಬಳಸಿ ಮಳೆ, ಬಿಸಿಲು ಲೆಕ್ಕಿಸದೇ ಕೆಲಸ ಮಾಡಿಸಲಾಗಿತ್ತು. ಇದಾಗಿ 10 ತಿಂಗಳು ಕಳೆದರೂ ಜೆಸಿಬಿ ಬಾಡಿಗೆ, ವಾಹನ ಬಾಡಿಗೆ ಹಾಗೂ ಕಾರ್ಮಿಕರ ಕೂಲಿ ಸೇರಿ ಲಕ್ಷಾಂತರ ಬಿಲ್ ಬಾಕಿ ಉಳಿದಿದೆ. ಹಿಟಾಚಿ ಯಂತ್ರ ಬಳಕೆ, ಶಾಮಿಯಾನ, ಹಾರೆ, ಪಿಕಾಸು, ಕುಡಿಯುವ ನೀರು ವ್ಯವಸ್ಥೆ ಸೇರಿದಂತೆ ಹಲವು ವೆಚ್ಚಗಳಿಗೆ ಪಾವತಿ ಇನ್ನೂ ಆಗಿಲ್ಲ ಎಂದು ತಿಳಿದುಬಂದಿದೆ.
ಲಭ್ಯ ಮಾಹಿತಿಯ ಪ್ರಕಾರ, ಉತ್ಖನನ ಕಾರ್ಯಕ್ಕೆ ಸುನೀಲ್ ಕನ್ಯಾಡಿ ಎಂಬವರ ಹಿಟಾಚಿ ಯಂತ್ರ ಬಳಸಲಾಗಿತ್ತು. ಕೇವಲ 10 ದಿನಗಳಷ್ಟೇ ಯಂತ್ರವನ್ನು ಬಳಸಲಾಗಿದ್ದರೂ, ಬಳಕೆಯಾದ ದಿನಗಳಿಗಷ್ಟೇ ಬಿಲ್ ಪಾವತಿಸಬೇಕೆಂದು ಮಾಲಕರು ಮನವಿ ಮಾಡಿದ್ದರು. ಆದರೆ 9 ತಿಂಗಳಿಗೂ ಹೆಚ್ಚು ಕಾಲ ಕಳೆದರೂ ಯಾವುದೇ ಹಣ ದೊರೆತಿಲ್ಲ ಎಂಬುದು ಆರೋಪವಾಗಿದೆ.
ಬಿಲ್ ಪಾವತಿ ವಿಚಾರದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಹಾಗೂ ಎಸ್ಐಟಿ ನಡುವೆ ಗೊಂದಲ ಉಂಟಾಗಿದೆ ಎನ್ನಲಾಗುತ್ತಿದೆ. ಪಂಚಾಯತ್ ಅಧಿಕಾರಿಗಳು ಎಸ್ಐಟಿ ಕಡೆಗೆ ಬೆರಳು ತೋರಿಸುತ್ತಿದ್ದು, ಎಸ್ಐಟಿ ಮಾತ್ರ ನವೆಂಬರ್ನಲ್ಲೇ ಬಿಲ್ ಪಾವತಿಸಲಾಗಿದೆ ಎಂದು ಹೇಳುತ್ತಿರುವುದು ವಿವಾದಕ್ಕೆ ಕಾರಣವಾಗಿದೆ. ಇದೇ ವೇಳೆ, ಉತ್ಖನನ ಸಂದರ್ಭದಲ್ಲಿ ಇದ್ದ ಪಂಚಾಯತ್ ಪಿಡಿಒ ಈಗ ನಿವೃತ್ತರಾಗಿದ್ದು ಯಾರನ್ನು ಕೇಳುವುದೆಂಬ ಗೊಂದಲ ಉಂಟಾಗಿದೆ.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am