ಬ್ರೇಕಿಂಗ್ ನ್ಯೂಸ್
13-05-26 11:44 am HK News Staffer ಕ್ರೈಂ
ಬೆಂಗಳೂರು, ಮೇ 13: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಖ್ಯಾತ ನಟ, ನಿರ್ಮಾಪಕ ಮತ್ತು ಡಬ್ಬಿಂಗ್ ಕಲಾವಿದರಾಗಿದ್ದ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಸಿನಿಮಾ ಮತ್ತು ಧಾರಾವಾಹಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ದಿಲೀಪ್ ರಾಜ್ ಅಕಾಲಿಕ ನಿಧನ ಚಂದನವನಕ್ಕೆ ದೊಡ್ಡ ಆಘಾತ ಉಂಟುಮಾಡಿದೆ.
ಮನೆಯಲ್ಲಿದ್ದ ವೇಳೆ ದಿಲೀಪ್ ರಾಜ್ ಅವರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಚಿತ್ರರಂಗದ ಅನೇಕ ಕಲಾವಿದರು, ತಂತ್ರಜ್ಞರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದಾರೆ.
2005ರಲ್ಲಿ ಬಿಡುಗಡೆಯಾದ ‘ಬಾಯ್ಫ್ರೆಂಡ್’ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ದಿಲೀಪ್ ರಾಜ್, ತಮ್ಮ ಸಹಜ ಅಭಿನಯದಿಂದಲೇ ಗಮನ ಸೆಳೆದಿದ್ದರು. ಬಳಿಕ ‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’, ‘ಪಂಚಾಮೃತ’, ‘ಪರಿಚಯ’, ‘ಬಾರ್ಡರ್’ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಪ್ರೇಕ್ಷಕರ ಮನಗೆದ್ದಿದ್ದರು. ವಿಶೇಷವಾಗಿ ‘ಮಿಲನ’ ಚಿತ್ರದಲ್ಲಿ ನಟ ಪುನೀತ್ ರಾಜ್ಕುಮಾರ್ ಅವರ ಸಹೋದರನ ಪಾತ್ರದಲ್ಲಿ ಅಭಿನಯಿಸಿ ಅಪಾರ ಜನಪ್ರಿಯತೆ ಗಳಿಸಿದ್ದರು.
ಚಿತ್ರರಂಗದ ಜೊತೆಗೆ ಕಿರುತೆರೆಯಲ್ಲೂ ದಿಲೀಪ್ ರಾಜ್ ತಮ್ಮದೇ ಆದ ಛಾಪು ಮೂಡಿಸಿದ್ದರು. ‘ಜನನಿ’ ಧಾರಾವಾಹಿಯ ಮೂಲಕ ಕಿರುತೆರೆಯಲ್ಲಿ ಪಯಣ ಆರಂಭಿಸಿದ ಅವರು, ನಂತರ ಯಶಸ್ವಿ ನಿರ್ಮಾಪಕರಾಗಿಯೂ ಹೊರಹೊಮ್ಮಿದರು. ಪತ್ನಿ ಶ್ರೀವಿದ್ಯಾ ಅವರೊಂದಿಗೆ ಸೇರಿ ಡಿ2ಆರ್ ಮೀಡಿಯಾ ಪ್ರೊಡಕ್ಷನ್ಸ್ ಮೂಲಕ ಹಲವು ಜನಪ್ರಿಯ ಧಾರಾವಾಹಿಗಳನ್ನು ನಿರ್ಮಿಸಿದ್ದರು. ಜೀ ಕನ್ನಡ ವಾಹಿನಿಯ ಸೂಪರ್ ಹಿಟ್ ಧಾರಾವಾಹಿ ‘ಹಿಟ್ಲರ್ ಕಲ್ಯಾಣ’ ಅವರ ನಿರ್ಮಾಣದ ಅತಿದೊಡ್ಡ ಯಶಸ್ಸಾಗಿದ್ದು, ಅದರಲ್ಲಿ ‘ಅಭಿರಾಮ್ ಜಯಶಂಕರ್’ ಪಾತ್ರದಲ್ಲಿ ನಟಿಸಿ ಮನೆಮಾತಾಗಿದ್ದರು. ‘ಪಾರು’, ‘ನಾ ನಿನ್ನ ಬಿಡಲಾರೆ’, ‘ಕೃಷ್ಣ ರುಕ್ಕು’ ಸೇರಿದಂತೆ ಹಲವು ಧಾರಾವಾಹಿಗಳ ಮೂಲಕವೂ ಅವರು ಕಿರುತೆರೆ ಪ್ರೇಕ್ಷಕರ ಹೃದಯ ಗೆದ್ದಿದ್ದರು.
ನಟನೆ ಮಾತ್ರವಲ್ಲದೆ, ಡಬ್ಬಿಂಗ್ ಕಲಾವಿದರಾಗಿಯೂ ಅವರು ಗುರುತಿಸಿಕೊಂಡಿದ್ದರು. ಶಿಸ್ತು, ಸಮಯಪ್ರಜ್ಞೆ ಮತ್ತು ಸ್ನೇಹಪರ ವ್ಯಕ್ತಿತ್ವದಿಂದ ದಿಲೀಪ್ ರಾಜ್ ಎಲ್ಲರ ಮೆಚ್ಚುಗೆ ಪಡೆದಿದ್ದರು.
ಹಿರಿಯ ನಟ ದೊಡ್ಡಣ್ಣ ಅವರು ದಿಲೀಪ್ ರಾಜ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದು, “ದಿಲೀಪ್ ರಾಜ್ ಅವರ ತಂದೆ ಹೆಚ್.ಎಂ. ಶಿವರುದ್ರಪ್ಪ ಅವರು ನಮ್ಮ ಕುಟುಂಬದ ಆತ್ಮೀಯರು. ದಿಲೀಪ್ ರಾಜ್ ನಮ್ಮ ಮಕ್ಕಳಂತಿದ್ದರು. ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು” ಎಂದು ಹೇಳಿದ್ದಾರೆ.
ಕಲಾಭಿಮಾನಿಗಳ ಹೃದಯದಲ್ಲಿ ಸದಾ ಜೀವಂತವಾಗಿರುವ ದಿಲೀಪ್ ರಾಜ್ ಅವರ ನಗುಮುಖ, ಸರಳತೆ ಮತ್ತು ಕಲಾಪ್ರೇಮ ಕನ್ನಡ ಚಿತ್ರರಂಗಕ್ಕೆ ಎಂದಿಗೂ ಮರೆಯಲಾಗದ ನೆನಪಾಗಿ ಉಳಿಯಲಿದೆ.
ಕಿರುತೆರೆ ಮತ್ತು ಬೆಳ್ಳಿತೆರೆ ಎರಡರಲ್ಲೂ ಸಮಾನವಾಗಿ ಯಶಸ್ಸು ಕಂಡ ದಿಲೀಪ್ ರಾಜ್, ತಮ್ಮ ಪ್ರತಿಭೆ ಮತ್ತು ಪರಿಶ್ರಮದಿಂದ ಕನ್ನಡ ಮನಗಳಿಗೆ ಹತ್ತಿರವಾದ ಕಲಾವಿದರಾಗಿದ್ದರು. ಅವರ ಅಗಲಿಕೆ ಕನ್ನಡ ಮನರಂಜನಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am