ಬ್ರೇಕಿಂಗ್ ನ್ಯೂಸ್
13-05-26 06:36 pm HK News Staffer ಕ್ರೈಂ
ಹಾಸನ, ಮೇ 13: ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಭುಜ ತಾಗಿದ ವಿಚಾರಕ್ಕೆ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾಸನ ನಗರದ ಕುವೆಂಪುನಗರದಲ್ಲಿರುವ ಎಂ.ಜೆ ಫಿಟ್ನೆಸ್ ಸ್ಟುಡಿಯೋದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಈ ಹಲ್ಲೆ ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಯಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡ ಯುವಕನನ್ನು ಕೀರ್ತನ್ ಎಂದು ಗುರುತಿಸಲಾಗಿದ್ದು, ಹಲ್ಲೆ ನಡೆಸಿದ ಆರೋಪಿಯನ್ನು ವರುಣ್ ಎಂದು ಹೇಳಲಾಗಿದೆ. ಇಬ್ಬರೂ ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ, ಒಂದು ಬದಿಯಿಂದ ಮತ್ತೊಂದು ಬದಿಗೆ ತೆರಳುವಾಗ ಕೀರ್ತನ್ ಅವರ ಭುಜ ವರುಣ್ ಭುಜಕ್ಕೆ ತಾಗಿತ್ತು ಎನ್ನಲಾಗಿದೆ. ಈ ಸಣ್ಣ ವಿಚಾರವೇ ದೊಡ್ಡ ಗಲಾಟೆಗೆ ಕಾರಣವಾಗಿದೆ.
ಭುಜ ತಾಗಿದ್ದಕ್ಕೆ ಕೋಪಗೊಂಡ ವರುಣ್, ಕೀರ್ತನ್ನನ್ನು ಕರೆದು ಅವಾಜ್ ಹಾಕಿದ ಬಳಿಕ ಏಕಾಏಕಿ ತಲೆ ಭಾಗಕ್ಕೆ ಬಲವಾಗಿ ಹೊಡೆದಿದ್ದಾನೆ. ಹಲ್ಲೆಯ ತೀವ್ರತೆಗೆ ಕೀರ್ತನ್ ಅವರ ತಲೆಬರುಡೆಗೆ ಪೆಟ್ಟು ಬಿದ್ದ ಕಾರಣ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯರ ಮಾಹಿತಿ ಪ್ರಕಾರ, ಕೀರ್ತನ್ ಅವರ ತಲೆಬುರುಡೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಕೋಮಾಗೆ ಜಾರಿದ್ದಾರೆ ಎನ್ನಲಾಗಿದೆ. ಸದ್ಯ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಘಟನೆ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದರ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕೋಪ ಮತ್ತು ಅಹಂಕಾರ ಕೆಲವೇ ಕ್ಷಣಗಳಲ್ಲಿ ಜೀವ ಹಾನಿಗೂ ಕಾರಣವಾಗಬಹುದು. ಕ್ಷುಲ್ಲಕ ವಿಚಾರಗಳನ್ನು ಮಾತಿನ ಮೂಲಕ ಬಗೆಹರಿಸಿಕೊಳ್ಳುವ ಬದಲು ಹಿಂಸೆಗೆ ಮೊರೆಹೋದರೆ ಅದರ ಪರಿಣಾಮ ಭೀಕರವಾಗಿರುತ್ತದೆ. ಯುವಕರು ಕೋಪ ನಿಯಂತ್ರಣ, ಸಹನೆ ಮತ್ತು ಪರಸ್ಪರ ಗೌರವವನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ.
Shocking gym assault in Hassan, Karnataka: At M.J. Fitness, a minor shoulder bump led to Varun kicking Kirthan in the head, causing skull fracture & coma. Victim in ICU, police investigating. pic.twitter.com/pUu6w1rvET
— Ghar Ke Kalesh (@gharkekalesh) May 13, 2026
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am