ಬ್ರೇಕಿಂಗ್ ನ್ಯೂಸ್
13-05-26 09:25 pm HK News Desk ಕ್ರೈಂ
ಮುಂಬೈ, ಮೇ 13: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯವೆಂದು ವಿಪಕ್ಷಗಳು ಟೀಕೆ ಮಾಡಿದ್ದರೆ, ವಿದ್ಯಾರ್ಥಿ ಸಂಘಟನೆಗಳು ದೇಶಾದ್ಯಂತ ಪ್ರತಿಭಟನೆ ಆರಂಭಿಸಿವೆ. ಇದೇ ವೇಳೆ, ರಾಜಸ್ಥಾನ ಪೊಲೀಸರು ಪ್ರಕರಣ ಸಂಬಂಧಿಸಿ 15ಕ್ಕು ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಪ್ರಶ್ನೆಪತ್ರಿಕೆ ಮಹಾರಾಷ್ಟ್ರದ ನಾಸಿಕ್ ಅಥವಾ ಪುಣೆಯಿಂದ ಸೋರಿಕೆಯಾಗಿದೆ ಎಂದು ಹೇಳಲಾಗಿದ್ದು, 30 ಸಾವಿರದಿಂದ 28 ಲಕ್ಷ ರು. ವರೆಗಿನ ದರದಲ್ಲಿ ಬೇಕಾಬಿಟ್ಟಿ ಮಾರಾಟವಾಗಿದೆ. 410 ಪ್ರಶ್ನೆಗಳ ಅಭ್ಯಾಸ ಪ್ರಶ್ನೆಪತ್ರಿಕೆಗಳ ರೂಪದಲ್ಲಿ ವಿದ್ಯಾರ್ಥಿಗಳಿಗೆ ಇದನ್ನು ಹಂಚಿಕೆ ಮಾಡಲಾಗಿದ್ದು, ಇದರಲ್ಲಿದ್ದ 120 ಪ್ರಶ್ನೆಗಳು ನೀಟ್ ಪರೀಕ್ಷೆಯಲ್ಲಿ ಬಂದಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಎನ್ಟಿಎಯು ಅನಿವಾರ್ಯವಾಗಿ ಪರೀಕ್ಷೆಯನ್ನೇ ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದೆ.
ಈ ಹಿಂದೆಯೂ ನೀಟ್ ಪರೀಕ್ಷೆ ವೇಳೆ ಅಕ್ರಮದ ಆರೋಪ ಕೇಳಿಬಂದಿತ್ತಾದರೂ ಈ ರೀತಿ ಪರೀಕ್ಷೆ ರದ್ದು ಮಾಡುತ್ತಿರುವುದು ಇದೇ ಮೊದಲು. ಮರುಪರೀಕ್ಷೆ ದಿನಾಂಕವನ್ನು ಮುಂದಿನ 8-10 ದಿನಗಳಲ್ಲಿ ಪ್ರಕಟಿಸುವುದಾಗಿ ಎನ್ಟಿಎ ತಿಳಿಸಿದೆ. 'ಪರೀಕ್ಷೆ ರದ್ದು ಮಾಡುವ ನಿರ್ಧಾರವನ್ನು ಪಾರದರ್ಶಕತೆ ಕಾಯ್ದುಕೊಳ್ಳುವ ಮತ್ತು ರಾಷ್ಟ್ರೀಯ ಪರೀಕ್ಷಾ ವ್ಯವಸ್ಥೆ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಕೈಗೊಳ್ಳಲಾಗಿದೆ' ಎಂದು ಎನ್ಟಿಎ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹೇಳಿಕೊಂಡಿದೆ. ಮೇ 3ರಂದು ಬೆಂಗಳೂರು ಸೇರಿ ದೇಶದ 551 ನಗರಗಳಲ್ಲಿ ಮತ್ತು ವಿದೇಶದ 14 ನಗರಗಳಲ್ಲಿ ನಡೆದಿದ್ದ ನೀಟ್ ಪರೀಕ್ಷೆಗೆ ಸುಮಾರು 23 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದರು.

ನಾಸಿಕ್ ಪ್ರಿಂಟಿಂಗ್ ಪ್ರೆಸ್ನಲ್ಲಿ ಲೀಕ್ ?
ನೀಟ್ ಪ್ರಶ್ನೆಪತ್ರಿಕೆ ನಾಸಿಕ್ನಲ್ಲಿ ಪ್ರಶ್ನೆಪತ್ರಿಕೆ ಮುದ್ರಿಸುವ ಪ್ರೆಸ್ನಿಂದಲೇ ಲೀಕ್ ಆಗಿರುವ ಶಂಕೆ ಇದೆ. ಪ್ರೆಸ್ಗೆ ಸಂಬಂಧಿಸಿದ ವ್ಯಕ್ತಿಯೊಬ್ಬರು ಒಂದು ಪ್ರತಿಯನ್ನು ಆರೋಪಿಗಳಿಗೆ ವರ್ಗಾಯಿಸಿದ್ದಾರೆ. ಆ ಬಳಿಕ ಅದು ಹರ್ಯಾಣದ ಗುರುಗ್ರಾಮದ ವೈದ್ಯರೊಬ್ಬರನ್ನು ತಲುಪಿದೆ. ವೈದ್ಯನಿಂದ ಜೈಪುರದ ಜಾಮ್ವಾ ರಾಮಗಢ ಮೂಲದ ವ್ಯಕ್ತಿಗೆ, ಅಲ್ಲಿಂದ ರಾಜಸ್ಥಾನದ ಸಿಕಾರ್ನ ರಾಕೇಶ್ ಕುಮಾರ್ ಎಂಬ ವ್ಯಕ್ತಿಯನ್ನು ತಲುಪಿತ್ತು. ಆತ ಪ್ರಮುಖ ಕೋಚಿಂಗ್ ಸಂಸ್ಥೆಗಳಿಗೆ ತಲುಪಿಸಿದ್ದಾನೆ. ಪರೀಕ್ಷೆಗೆ 4 ದಿನ ಮೊದಲು ನಾಗ್ಪುರದಿಂದ ಸಿಕಾರ್ಗೆ ಆಗಮಿಸಿದ್ದ ವಿದ್ಯಾರ್ಥಿಯೊಬ್ಬ 28 ಲಕ್ಷ ರು. ಕೊಟ್ಟು ಪ್ರಶ್ನೆಪತ್ರಿಕೆ ಖರೀದಿಸಿದ್ದ ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.
ಇದೇ ವೇಳೆ, ಆರೋಪಿ ರಾಕೇಶ್ ಮೂಲಕ ಪ್ರಶ್ನೆಪತ್ರಿಕೆಯು ಕೇರಳದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳಿಗೆ ಪರೀಕ್ಷೆಯ ಮುನ್ನಾ ದಿನ ತಲುಪಿತ್ತು. ಪಿಡಿಎಫ್ ರೂಪದಲ್ಲಿದ್ದ ಇದನ್ನು ಆಕೆ ಸಿಕಾರ್ನಲ್ಲಿ ಪಿಜಿ ನಡೆಸುತ್ತಿದ್ದ ತನ್ನ ತಂದೆಗೆ ಕಳುಹಿಸಿಕೊಟ್ಟಿದ್ದಾಳೆ. 'ಅಪ್ಪಾ, ನಾಳೆಯ ಪರೀಕ್ಷೆಯಲ್ಲಿ ಇದರಲ್ಲಿರುವ ಪ್ರಶ್ನೆಗಳೇ ಬರಲಿವೆ. ಪಿಜಿಯಲ್ಲಿರುವ ಹುಡುಗಿಯರಿಗೆ ಇದನ್ನು ಹಂಚಿ' ಎಂದೂ ತಿಳಿಸಿದ್ದಳು. ಅದರಂತೆ ಯುವಕನ ತಂದೆ ತಕ್ಷಣ ಅದನ್ನು ಪಿಜಿ ವಿದ್ಯಾರ್ಥಿಗಳಿಗೆ ಹಂಚಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿನಿಯ ತಂದೆ ಪರಿಚಿತ ಶಿಕ್ಷಕರೊಬ್ಬರ ಮೂಲಕ ಪ್ರಶ್ನೆ ಪತ್ರಿಕೆಯನ್ನು ತಾಳೆ ಹಾಕಿಸಿದ್ದಾರೆ. ಆಗ ಅಭ್ಯಾಸ ಪತ್ರಿಕೆಯಲ್ಲಿದ್ದ 45 ರಸಾಯನಶಾಸ್ತ್ರ ಪ್ರಶ್ನೆಗಳು ನೀಟ್ ಪರೀಕ್ಷೆಯಲ್ಲಿ ಒಂದೇ ಅನುಕ್ರಮದಲ್ಲಿ ಬಂದಿದ್ದವು.
ಪ್ರಶ್ನೆಪತ್ರಿಕೆ ಸೋರಿಕೆ ಖಚಿತವಾಗುತ್ತಿದ್ದಂತೆ ವಿದ್ಯಾರ್ಥಿನಿಯ ತಂದೆ, ತಕ್ಷಣ ಸಿಕಾರ್ನ ಉದ್ಯೋಗ್ ನಗರ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಲು ನಿರಾಕರಿಸಿದಾಗ ಪರೀಕ್ಷೆ ನಡೆಸಿದ ಎನ್ಟಿಎಗೆ ಮಾಹಿತಿ ನೀಡಿದ್ದಾರೆ. ಎನ್ಟಿಎ ಈ ಮಾಹಿತಿಯನ್ನು ಇಂಟೆಲಿಜೆನ್ಸ್ ಬ್ಯುರೋಗೆ (ಐಬಿ) ಕಳುಹಿಸಿಕೊಟ್ಟಿದ್ದು, ಬಳಿಕ ರಾಜಸ್ಥಾನದಲ್ಲಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಬಳಿಕ ರಾಜಸ್ಥಾನ ಪೊಲೀಸರು ತನಿಖೆ ನಡೆಸಿ, ಸುಮಾರು 15 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am