ಬ್ರೇಕಿಂಗ್ ನ್ಯೂಸ್
15-05-26 11:08 pm Mangalore Correspondent ಕ್ರೈಂ
ಮಂಗಳೂರು, ಮೇ 15: ಐಷಾರಾಮಿ ಕಾರಿನಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡುಬಿದ್ರೆ ಪೊಲೀಸರು ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಪಡು ಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಲಾಗಿದೆ.
ಮೂಡುಬಿದ್ರೆ ಹಂಡೇಲು ನಿವಾಸಿ ಮಹಮ್ಮದ್ ಆರಿಫ್ ಮತ್ತು ಗಂಟಾಲಕಟ್ಟೆಯ ಇಮ್ರಾನ್ ಅಲಿಯಾಸ್ ಇಬ್ರಾಹಿಂ ಬಂಧಿತ ಆರೋಪಿಗಳು. ಕೃತ್ಯಕ್ಕೆ ಬಳಸಿದ್ದ ಮಾರುತಿ ಬ್ರೀಜಾ ಕಾರನ್ನು ವಶಪಡಿಸಲಾಗಿದೆ. ಪೊಲೀಸರು ರೌಂಡ್ಸ್ನಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ಮೇ 14ರ ಬೆಳಗ್ಗಿನ ಹೊತ್ತಿಗೆ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬೆಳುವಾಯಿ ಅಳಿಯೂರು ಕಡೆಯಿಂದ ವೇಗವಾಗಿ ಬಂದ ಮಾರುತಿ ಬ್ರೀಜಾ ಕಾರನ್ನು ನಿಲ್ಲಿಸಲು ಸೂಚಿಸಿದಾಗ, ಆರೋಪಿಗಳು ಕಾರನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಆರೋಪಿಗಳ ಕಾರನ್ನು ಬೆನ್ನಟ್ಟಿದ್ದಾರೆ. ತಪ್ಪಿಸಿಕೊಳ್ಳಲು ದಾರಿಯಿಲ್ಲದೆ ಆರೋಪಿಗಳು ಮನೆಯೊಂದರ ಕಂಪೌಂಡ್ ಒಳಗೆ ಕಾರು ನುಗ್ಗಿಸಿ ಓಡಿಹೋಗಲು ಯತ್ನಿಸಿದ್ದು ಪೊಲೀಸರು ಅವರನ್ನು ಸುತ್ತುವರೆದು ಹಿಡಿದಿದ್ದಾರೆ.
ಕಾರಿನ ಹಿಂಬದಿ ಸೀಟ್ ತೆಗೆದು ಅದರ ಮೇಲೆ ನೀಲಿ ಬಣ್ಣದ ಪ್ಲಾಸ್ಟಿಕ್ ಹೊದಿಕೆ ಹಾಕಿ ಅದರ ಮೇಲೆ ಒಂದು ಗಂಡು ಕರುವನ್ನು ಹಿಂಸಾತ್ಮಕವಾಗಿ ಕಾಲು ಮತ್ತು ತಲೆಯನ್ನು ಹಗ್ಗದಿಂದ ಕಟ್ಟಿ ತುಂಬಿಸಿರುವುದು ಕಂಡುಬಂದಿದೆ. ಆರೋಪಿಗಳು ಒಂದು ವಾರದಿಂದ ಬೇರೆ ಬೇರೆ ಕಡೆಗಳಿಂದ ದನಗಳನ್ನು ಕಳ್ಳತನ ಮಾಡಿ ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ನಿವಾಸಿ ಸಾಹುಲ್ ಹಮೀದ್ ಎಂಬವರ ಮನೆಯ ಬಳಿ ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಸಲುವಾಗಿ ಸಂಗ್ರಹಣೆ ಮಾಡಿರುವುದಾಗಿ ತಿಳಿಸಿರುತ್ತಾರೆ.
ಮೊಹಮ್ಮದ್ ಆರಿಫ್ ವಿರುದ್ಧ ಬಜ್ಪೆ, ಉಡುಪಿ ಜಿಲ್ಲೆಯ ಬಣಕಲ್, ಮೂಡುಬಿದ್ರೆ ಠಾಣೆಯಲ್ಲಿ ದನ ಕಳ್ಳತನದ ಪ್ರಕರಣ ದಾಖಲಾಗಿದೆ. ಇಮ್ರಾನ್ ಮೇಲೆ ಮೂಡುಬಿದ್ರೆ, ಕಾರ್ಕಳ ಠಾಣೆಗಳಲ್ಲಿ ದನಕಳವು, ಗಾಂಜಾ ಸಾಗಣೆ ಸೇರಿ ಹಲವು ಕೇಸುಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm