ಬ್ರೇಕಿಂಗ್ ನ್ಯೂಸ್
15-05-26 11:08 pm Mangalore Correspondent ಕ್ರೈಂ
ಮಂಗಳೂರು, ಮೇ 15: ಐಷಾರಾಮಿ ಕಾರಿನಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡುಬಿದ್ರೆ ಪೊಲೀಸರು ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಪಡು ಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಲಾಗಿದೆ.
ಮೂಡುಬಿದ್ರೆ ಹಂಡೇಲು ನಿವಾಸಿ ಮಹಮ್ಮದ್ ಆರಿಫ್ ಮತ್ತು ಗಂಟಾಲಕಟ್ಟೆಯ ಇಮ್ರಾನ್ ಅಲಿಯಾಸ್ ಇಬ್ರಾಹಿಂ ಬಂಧಿತ ಆರೋಪಿಗಳು. ಕೃತ್ಯಕ್ಕೆ ಬಳಸಿದ್ದ ಮಾರುತಿ ಬ್ರೀಜಾ ಕಾರನ್ನು ವಶಪಡಿಸಲಾಗಿದೆ. ಪೊಲೀಸರು ರೌಂಡ್ಸ್ನಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ಮೇ 14ರ ಬೆಳಗ್ಗಿನ ಹೊತ್ತಿಗೆ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬೆಳುವಾಯಿ ಅಳಿಯೂರು ಕಡೆಯಿಂದ ವೇಗವಾಗಿ ಬಂದ ಮಾರುತಿ ಬ್ರೀಜಾ ಕಾರನ್ನು ನಿಲ್ಲಿಸಲು ಸೂಚಿಸಿದಾಗ, ಆರೋಪಿಗಳು ಕಾರನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಆರೋಪಿಗಳ ಕಾರನ್ನು ಬೆನ್ನಟ್ಟಿದ್ದಾರೆ. ತಪ್ಪಿಸಿಕೊಳ್ಳಲು ದಾರಿಯಿಲ್ಲದೆ ಆರೋಪಿಗಳು ಮನೆಯೊಂದರ ಕಂಪೌಂಡ್ ಒಳಗೆ ಕಾರು ನುಗ್ಗಿಸಿ ಓಡಿಹೋಗಲು ಯತ್ನಿಸಿದ್ದು ಪೊಲೀಸರು ಅವರನ್ನು ಸುತ್ತುವರೆದು ಹಿಡಿದಿದ್ದಾರೆ.
ಕಾರಿನ ಹಿಂಬದಿ ಸೀಟ್ ತೆಗೆದು ಅದರ ಮೇಲೆ ನೀಲಿ ಬಣ್ಣದ ಪ್ಲಾಸ್ಟಿಕ್ ಹೊದಿಕೆ ಹಾಕಿ ಅದರ ಮೇಲೆ ಒಂದು ಗಂಡು ಕರುವನ್ನು ಹಿಂಸಾತ್ಮಕವಾಗಿ ಕಾಲು ಮತ್ತು ತಲೆಯನ್ನು ಹಗ್ಗದಿಂದ ಕಟ್ಟಿ ತುಂಬಿಸಿರುವುದು ಕಂಡುಬಂದಿದೆ. ಆರೋಪಿಗಳು ಒಂದು ವಾರದಿಂದ ಬೇರೆ ಬೇರೆ ಕಡೆಗಳಿಂದ ದನಗಳನ್ನು ಕಳ್ಳತನ ಮಾಡಿ ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ನಿವಾಸಿ ಸಾಹುಲ್ ಹಮೀದ್ ಎಂಬವರ ಮನೆಯ ಬಳಿ ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಸಲುವಾಗಿ ಸಂಗ್ರಹಣೆ ಮಾಡಿರುವುದಾಗಿ ತಿಳಿಸಿರುತ್ತಾರೆ.
ಮೊಹಮ್ಮದ್ ಆರಿಫ್ ವಿರುದ್ಧ ಬಜ್ಪೆ, ಉಡುಪಿ ಜಿಲ್ಲೆಯ ಬಣಕಲ್, ಮೂಡುಬಿದ್ರೆ ಠಾಣೆಯಲ್ಲಿ ದನ ಕಳ್ಳತನದ ಪ್ರಕರಣ ದಾಖಲಾಗಿದೆ. ಇಮ್ರಾನ್ ಮೇಲೆ ಮೂಡುಬಿದ್ರೆ, ಕಾರ್ಕಳ ಠಾಣೆಗಳಲ್ಲಿ ದನಕಳವು, ಗಾಂಜಾ ಸಾಗಣೆ ಸೇರಿ ಹಲವು ಕೇಸುಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
15-05-26 04:16 pm
HK News Staffer
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 11:08 pm
Mangalore Correspondent
ಬಿಜಿ ವೆಲ್ತ್ ಷೇರಿಂಗ್ ಹೆಸರಲ್ಲಿ ಮತ್ತೊಂದು ನೆಟ್ವರ್...
15-05-26 09:19 pm
ಉಡುಪಿಯಲ್ಲಿ ಕಾರು ಡಿಕ್ಕಿ; ರಸ್ತೆ ದಾಟುತ್ತಿದ್ದ 12...
15-05-26 05:45 pm
ಉಳ್ಳಾಲ ರಸ್ತೆಯಲ್ಲಿ ಫಿಶ್ ಮೀಲ್ ಆಯಿಲ್ ಸೋರಿಕೆ ; ಫ್...
15-05-26 12:21 pm
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm