ಬ್ರೇಕಿಂಗ್ ನ್ಯೂಸ್
17-05-26 05:51 pm HK News Staffer ಕ್ರೈಂ
ಭೋಪಾಲ್, ಮೇ 17: ತಿರುವನಂತಪುರಂನಿಂದ ರಾಜಧಾನಿ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ರೈಲು ಸಾಗುತ್ತಿದ್ದಾಗ ಭಾನುವಾರ ನಸುಕಿನ 5:15 ರ ವೇಳೆಗೆ ರೈಲು ಸಂಖ್ಯೆ 12431ರ ಬಿ-1 (B-1) ಎಸಿ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲು ಚಲಿಸುತ್ತಿದ್ದಾಗ ಬಿ-1 ಬೋಗಿಯಿಂದ ದಟ್ಟವಾದ ಹೊಗೆ ಹಾಗೂ ಬೆಂಕಿ ಬರುತ್ತಿರುವುದನ್ನು ರೈಲಿನ ಗಾರ್ಡ್ ಗಮನಿಸಿದ್ದು, ತಕ್ಷಣವೇ ಲೋಕೋ ಪೈಲಟ್ಗೆ ಮಾಹಿತಿ ರವಾನಿಸಿದ್ದಾರೆ. ತಕ್ಷಣ ರೈಲನ್ನು ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದು ರೈಲ್ವೆ ರಕ್ಷಣಾ ಪಡೆ ಮತ್ತು ರೈಲ್ವೆ ಸಿಬ್ಬಂದಿ, ತುರ್ತು ಕಾರ್ಯಾಚರಣೆ ಮೂಲಕ ಬೋಗಿಯಲ್ಲಿದ್ದ ಎಲ್ಲಾ 68 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಇದೇ ವೇಳೆ ಮುನ್ನೆಚ್ಚರಿಕಾ ಕ್ರಮವಾಗಿ ಓವರ್ ಹೆಡ್ ವಿದ್ಯುತ್ ಸರಬರಾಜನ್ನು ತಕ್ಷಣವೇ ಸ್ಥಗಿತಗೊಳಿಸಿ, ಬೆಂಕಿ ಹತ್ತಿಕೊಂಡಿದ್ದ ಬೋಗಿಗಳನ್ನು ರೈಲಿನ ಉಳಿದ ಭಾಗದಿಂದ ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಪ್ರಾಣಹಾನಿ ತಪ್ಪಿದರೂ, ಪ್ರಯಾಣಿಕರು ತಮ್ಮ ಲಗೇಜ್ಗಳನ್ನು ಬೋಗಿಯಲ್ಲೇ ಬಿಟ್ಟು ಓಡಿ ಬಂದಿದ್ದರಿಂದ ಕೆಲವು ಅತ್ಯಮೂಲ್ಯ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಲ್ಲದೆ ಹಳಿಯ ಪಕ್ಕದಲ್ಲಿದ್ದ ಒಣ ಮರಗಳಿಗೂ ಬೆಂಕಿ ವ್ಯಾಪಿಸಿದ್ದು, ಸ್ಥಳಕ್ಕೆ ಧಾವಿಸಿದ ಮೂರು ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿವೆ.
ರೈಲ್ವೆ ತಾಂತ್ರಿಕ ತಂಡದ ಪ್ರಾಥಮಿಕ ತನಿಖೆಯ ಪ್ರಕಾರ, ಬಿ-1 ಎಸಿ ಕೋಚ್ನ ಬ್ಯಾಟರಿ ಬಾಕ್ಸ್ ಅಥವಾ ಎಲೆಕ್ಟ್ರಿಕಲ್ ಕಂಟ್ರೋಲ್ ಪ್ಯಾನೆಲ್ನಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಅಗ್ನಿ ಅವಘಡಕ್ಕೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am