ಬ್ರೇಕಿಂಗ್ ನ್ಯೂಸ್
17-05-26 09:10 pm HK News Staffer ಕ್ರೈಂ
ಮಂಗಳೂರು, ಮೇ 17: ಉಳ್ಳಾಲದ ಮಹಿಳೆಯೊಬ್ಬರು ಬೇರೊಬ್ಬ ಮಹಿಳೆಯ ಹೆಸರಲ್ಲಿ ಪಾಸ್ಪೋರ್ಟ್ ಪಡೆದು ಇಸ್ರೇಲ್ ತೆರಳಿದ ಪ್ರಕರಣದಲ್ಲಿ ಪೊಲೀಸರೇ ಎಡವಟ್ಟು ಮಾಡಿಕೊಂಡ ಆರೋಪ ಕೇಳಿಬಂದಿದೆ. ಈ ಬಗ್ಗೆ ತಿಳಿಯುತ್ತಲೇ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಇಲಾಖಾ ತನಿಖೆಗೆ ಆದೇಶ ಮಾಡಿದ್ದಾರೆ.
ಉಳ್ಳಾಲಬೈಲು ನಿವಾಸಿ ಪ್ರೀತಾ ಡಿಸೋಜ ಎಂಬವರು ಯಶೋಧ ಕೇಶವ ಎಂಬ ಮಹಿಳೆಯ ಹೆಸರಲ್ಲಿ ಪಾಸ್ಪೋರ್ಟ್ ಅರ್ಜಿ ಸಲ್ಲಿಸಿ ಪ್ರತ್ಯೇಕ ಪಾಸ್ ಪೋರ್ಟ್ ಮಾಡಿಸಿಕೊಂಡಿದ್ದರು. ದಾಖಲೆಯಲ್ಲಿ ಯಶೋಧ ಎನ್ನುವ ಹೆಸರಿದ್ದರೂ, ಅರ್ಜಿಯಲ್ಲಿ ಪ್ರೀತಾ ಡಿಸೋಜ ಅವರದ್ದೇ ಫೋಟೋ ಲಗತ್ತಿಸಲಾಗಿತ್ತು. ಹೀಗಾಗಿ ಪರಿಶೀಲನೆ ಸಂದರ್ಭದಲ್ಲಿ ತಪ್ಪೆಸಗಿದ್ದು ಪೊಲೀಸರಿಗೆ ಅರಿವಿಗೆ ಬಂದಿರಲಿಲ್ಲ.
ತಪ್ಪು ಮಾಹಿತಿ ನೀಡಿ ಪಾಸ್ಪೋರ್ಟ್ ಮಾಡಿಸಿದ್ದಲ್ಲದೆ, ಅದೇ ನಕಲಿ ವಿಳಾಸದ ಮೂಲಕ ಪ್ರೀತಾ ಡಿಸೋಜ 2025ರ ಮಾರ್ಚ್ 17ರಂದು ಮುಂಬೈ ವಿಮಾನ ನಿಲ್ದಾಣದ ಮೂಲಕ ಇಸ್ರೇಲ್ ತೆರಳಿದ್ದರು. ಆದರೆ ಆ ಸಂದರ್ಭದಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಆಗಿದ್ದ ಬಾಲಕೃಷ್ಣ ಮತ್ತು ಪಾಸ್ಪೋರ್ಟ್ ಪರಿಶೀಲನೆ ಮಾಡಿದ್ದ ಹೆಡ್ ಕಾನ್ಸ್ ಟೇಬಲ್ ಅವರ ನಿರ್ಲಕ್ಷ್ಯದಿಂದಾಗಿ ಪ್ರಮಾದ ಆಗಿರುವುದು ಮೇಲ್ನೋಟಕ್ಕೆ ವ್ಯಕ್ತವಾಗಿದ್ದರಿಂದ ಪೊಲೀಸ್ ಕಮಿಷನರ್ ಇಲಾಖಾ ತನಿಖೆಗೆ ಆದೇಶ ಮಾಡಿದ್ದಾರೆ.
ಪಾಸ್ಪೋರ್ಟ್ ಸೇವಾ ಪೋರ್ಟಲ್ ದಾಖಲೆಗಳ ಪ್ರಕಾರ, ಅರ್ಜಿಯಲ್ಲಿ ಯಶೋಧ ಕೇಶವ ಎಂಬುದಾಗಿ ಕೈಬರಹದಲ್ಲಿ ನಮೂದಿಸಿದ್ದು, ಪ್ರೀತಾ ಡಿಸೋಜ ಅವರ ಫೋಟೋ ಲಗತ್ತಿಸಲಾಗಿತ್ತು. ಯಶೋಧ ಹೆಸರಿನ ಸಹಿಯನ್ನೂ ಪ್ರೀತಾ ಡಿಸೋಜ ಮಾಡಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ. ಇಷ್ಟೆಲ್ಲ ಅವಾಂತರ ಮಾಡಿದ್ದರೂ ಪರಿಶೀಲನೆ ಮಾಡಿದ್ದ ಅಂದಿನ ಪೊಲೀಸರು, ಸರಿಯಾದ ದಾಖಲೆಗಳನ್ನು ನೋಡಿಕೊಳ್ಳದೆ ನಿರ್ಲಕ್ಷ್ಯ ಮಾಡಿದ್ದು ಎದ್ದು ಕಾಣುತ್ತದೆ.
ಈ ಅಕ್ರಮಕ್ಕೆ ಉಳ್ಳಾಲ ನಿವಾಸಿ ಪ್ರೇಮ್ ಡಿಸೋಜ ಎಂಬಾತ ಸಹಕರಿಸಿದ್ದು, ಪ್ರೀತಾಳನ್ನು ಇಸ್ರೇಲ್ ಕಳುಹಿಸುವ ಉದ್ದೇಶದಿಂದ ತನ್ನ ಪರಿಚಯದ ಯಶೋಧ ಅವರ ದಾಖಲೆಗಳನ್ನು ತಯಾರಿ ಮಾಡಿಕೊಟ್ಟಿದ್ದ. ಇದೀಗ ಅಕ್ರಮ ತಿಳಿಯುತ್ತಿದ್ದಂತೆ ಉಳ್ಳಾಲ ಠಾಣೆಯಲ್ಲಿ ಪ್ರೇಮ್ ಡಿಸೋಜ, ಪ್ರೀತಾ ಡಿಸೋಜ, ಯಶೋಧ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am