ಬ್ರೇಕಿಂಗ್ ನ್ಯೂಸ್
17-05-26 09:10 pm HK News Staffer ಕ್ರೈಂ
ಮಂಗಳೂರು, ಮೇ 17: ಉಳ್ಳಾಲದ ಮಹಿಳೆಯೊಬ್ಬರು ಬೇರೊಬ್ಬ ಮಹಿಳೆಯ ಹೆಸರಲ್ಲಿ ಪಾಸ್ಪೋರ್ಟ್ ಪಡೆದು ಇಸ್ರೇಲ್ ತೆರಳಿದ ಪ್ರಕರಣದಲ್ಲಿ ಪೊಲೀಸರೇ ಎಡವಟ್ಟು ಮಾಡಿಕೊಂಡ ಆರೋಪ ಕೇಳಿಬಂದಿದೆ. ಈ ಬಗ್ಗೆ ತಿಳಿಯುತ್ತಲೇ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಇಲಾಖಾ ತನಿಖೆಗೆ ಆದೇಶ ಮಾಡಿದ್ದಾರೆ.
ಉಳ್ಳಾಲಬೈಲು ನಿವಾಸಿ ಪ್ರೀತಾ ಡಿಸೋಜ ಎಂಬವರು ಯಶೋಧ ಕೇಶವ ಎಂಬ ಮಹಿಳೆಯ ಹೆಸರಲ್ಲಿ ಪಾಸ್ಪೋರ್ಟ್ ಅರ್ಜಿ ಸಲ್ಲಿಸಿ ಪ್ರತ್ಯೇಕ ಪಾಸ್ ಪೋರ್ಟ್ ಮಾಡಿಸಿಕೊಂಡಿದ್ದರು. ದಾಖಲೆಯಲ್ಲಿ ಯಶೋಧ ಎನ್ನುವ ಹೆಸರಿದ್ದರೂ, ಅರ್ಜಿಯಲ್ಲಿ ಪ್ರೀತಾ ಡಿಸೋಜ ಅವರದ್ದೇ ಫೋಟೋ ಲಗತ್ತಿಸಲಾಗಿತ್ತು. ಹೀಗಾಗಿ ಪರಿಶೀಲನೆ ಸಂದರ್ಭದಲ್ಲಿ ತಪ್ಪೆಸಗಿದ್ದು ಪೊಲೀಸರಿಗೆ ಅರಿವಿಗೆ ಬಂದಿರಲಿಲ್ಲ.
ತಪ್ಪು ಮಾಹಿತಿ ನೀಡಿ ಪಾಸ್ಪೋರ್ಟ್ ಮಾಡಿಸಿದ್ದಲ್ಲದೆ, ಅದೇ ನಕಲಿ ವಿಳಾಸದ ಮೂಲಕ ಪ್ರೀತಾ ಡಿಸೋಜ 2025ರ ಮಾರ್ಚ್ 17ರಂದು ಮುಂಬೈ ವಿಮಾನ ನಿಲ್ದಾಣದ ಮೂಲಕ ಇಸ್ರೇಲ್ ತೆರಳಿದ್ದರು. ಆದರೆ ಆ ಸಂದರ್ಭದಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಆಗಿದ್ದ ಬಾಲಕೃಷ್ಣ ಮತ್ತು ಪಾಸ್ಪೋರ್ಟ್ ಪರಿಶೀಲನೆ ಮಾಡಿದ್ದ ಹೆಡ್ ಕಾನ್ಸ್ ಟೇಬಲ್ ಅವರ ನಿರ್ಲಕ್ಷ್ಯದಿಂದಾಗಿ ಪ್ರಮಾದ ಆಗಿರುವುದು ಮೇಲ್ನೋಟಕ್ಕೆ ವ್ಯಕ್ತವಾಗಿದ್ದರಿಂದ ಪೊಲೀಸ್ ಕಮಿಷನರ್ ಇಲಾಖಾ ತನಿಖೆಗೆ ಆದೇಶ ಮಾಡಿದ್ದಾರೆ.
ಪಾಸ್ಪೋರ್ಟ್ ಸೇವಾ ಪೋರ್ಟಲ್ ದಾಖಲೆಗಳ ಪ್ರಕಾರ, ಅರ್ಜಿಯಲ್ಲಿ ಯಶೋಧ ಕೇಶವ ಎಂಬುದಾಗಿ ಕೈಬರಹದಲ್ಲಿ ನಮೂದಿಸಿದ್ದು, ಪ್ರೀತಾ ಡಿಸೋಜ ಅವರ ಫೋಟೋ ಲಗತ್ತಿಸಲಾಗಿತ್ತು. ಯಶೋಧ ಹೆಸರಿನ ಸಹಿಯನ್ನೂ ಪ್ರೀತಾ ಡಿಸೋಜ ಮಾಡಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ. ಇಷ್ಟೆಲ್ಲ ಅವಾಂತರ ಮಾಡಿದ್ದರೂ ಪರಿಶೀಲನೆ ಮಾಡಿದ್ದ ಅಂದಿನ ಪೊಲೀಸರು, ಸರಿಯಾದ ದಾಖಲೆಗಳನ್ನು ನೋಡಿಕೊಳ್ಳದೆ ನಿರ್ಲಕ್ಷ್ಯ ಮಾಡಿದ್ದು ಎದ್ದು ಕಾಣುತ್ತದೆ.
ಈ ಅಕ್ರಮಕ್ಕೆ ಉಳ್ಳಾಲ ನಿವಾಸಿ ಪ್ರೇಮ್ ಡಿಸೋಜ ಎಂಬಾತ ಸಹಕರಿಸಿದ್ದು, ಪ್ರೀತಾಳನ್ನು ಇಸ್ರೇಲ್ ಕಳುಹಿಸುವ ಉದ್ದೇಶದಿಂದ ತನ್ನ ಪರಿಚಯದ ಯಶೋಧ ಅವರ ದಾಖಲೆಗಳನ್ನು ತಯಾರಿ ಮಾಡಿಕೊಟ್ಟಿದ್ದ. ಇದೀಗ ಅಕ್ರಮ ತಿಳಿಯುತ್ತಿದ್ದಂತೆ ಉಳ್ಳಾಲ ಠಾಣೆಯಲ್ಲಿ ಪ್ರೇಮ್ ಡಿಸೋಜ, ಪ್ರೀತಾ ಡಿಸೋಜ, ಯಶೋಧ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm