ಬ್ರೇಕಿಂಗ್ ನ್ಯೂಸ್
18-05-26 12:37 pm HK News Staffer ಕ್ರೈಂ
ರಾಯಚೂರು, ಮೇ 18: ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಅಣ್ಣನನ್ನೇ ತಮ್ಮ ಕೊಲೆ ಮಾಡಿರುವ ಹೃದಯ ಕಲುಕುವ ಘಟನೆ ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಬಸವಸಾಗರ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಬಸವರಾಜ (37) ಎಂದು ಗುರುತಿಸಲಾಗಿದ್ದು, ಆರೋಪಿ ಶ್ರೀಧರ್ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಕೊಲೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಮಾಹಿತಿ ನೀಡಿದ್ದು, ಮೃತ ಬಸವರಾಜ ಕುಡಿದು ಮನೆಗೆ ಬಂದು ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ತಮ್ಮ ಶ್ರೀಧರ್, ಅಣ್ಣ ನಿದ್ರೆಗೆ ಜಾರಿದ ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಅಣ್ಣನನ್ನು ಕೊಲೆ ಮಾಡಿದ ಬಳಿಕ, ಘಟನೆ ಆತ್ಮಹತ್ಯೆಯಂತೆ ತೋರಿಸಲು ಶ್ರೀಧರ್ ಕುತಂತ್ರ ರೂಪಿಸಿದ್ದಾನೆ. ಸೀರೆಯನ್ನು ಬಳಸಿಕೊಂಡು ಫ್ಯಾನ್ಗೆ ಅಣ್ಣನ ಹೆಣವನ್ನು ನೇತು ಹಾಕಿ ಅಣ್ಣನೇ ನೇಣು ಹಾಕಿಕೊಂಡಿದ್ದಾನೆ ಎಂಬಂತೆ ಮನೆಯವರಿಗೆ ನಂಬಿಸಲು ಯತ್ನಿಸಿದ್ದಾನೆ. ಇದರ ಜೊತೆಗೆ, ಬಳಿಕ ಬಾಗಿಲಿನ ಚೀಲಕ ಮುರಿದಂತೆ ಮಾಡಿ ಅಣ್ಣನ ಶವವನ್ನು ಕೆಳಗೆ ಇಳಿಸಿದ ತಮ್ಮ ತದನಂತರ ಅಣ್ಣ ಬಸವರಾಜ್ ಜೀವ ಇರಬಹುದು ಎಂದು ತಾಯಿಗೆ ನಂಬಿಸಿ ಖಾಸಗಿ ವಾಹನದಲ್ಲಿ ಶವ ತೆಗೆದುಕೊಂಡು ತಾಲೂಕು ಆಸ್ಪತ್ರೆಗೆ ಹೋಗಿದ್ದಾನೆ.
ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಪರಿಶೀಲನೆ ನಡೆಸಿದಾಗ, ಬಸವರಾಜ್ ಈಗಾಗಲೇ ಮೃತಪಟ್ಟಿರುವುದು ದೃಢಪಟ್ಟಿದೆ. ಇದರಿಂದ ಘಟನೆಗೆ ಹೊಸ ತಿರುವು ಸಿಕ್ಕಿದ್ದು, ಅನುಮಾನಗಳು ಗಟ್ಟಿಯಾದವು. ಇತ್ತ ಬಸವರಾಜ್ ಸಾವಿನ ಕುರಿತು ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಮೃತನ ತಂದೆ ವಾಸುದೇವ್ ದೂರು ನೀಡಿದ್ದಾರೆ. ಮಾಹಿತಿ ದೊರಕುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಪ್ರಕರಣದ ಗಂಭೀರತೆಯನ್ನು ಗಮನಿಸಿದ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am