ಬ್ರೇಕಿಂಗ್ ನ್ಯೂಸ್
18-05-26 04:19 pm HK News Staffer ಕ್ರೈಂ
ಬೆಳಗಾವಿ, ಮೇ 18: ಬೆಳಗಾವಿ ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿದ್ದು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಸಲ್ಲಿಸಿದ್ದ 150 ಪುಟಗಳ ವರದಿಯನ್ನಾಧರಿಸಿ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಸಿಐಡಿ ಡಿಐಜಿ ಡಾ.ಭೀಮಾಶಂಕರ ಗುಳೇದ ನೇತೃತ್ವದ ಪೊಲೀಸರು ಬೆಳಗಾವಿಗೆ ಆಗಮಿಸಿದ್ದಾರೆ.
ಶನಿವಾರ ರಾತ್ರಿ ಆರೋಪಿ ಶಿವಾನಂದ ನೀಲಣ್ಣವರನನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಉಪ ವಿಭಾಗಾಧಿಕಾರಿ ಶ್ರವಣ ನಾಯಕ 20 ಗಂಟೆ ಕಾಲ ಪರಿಶೀಲನೆ ನಡೆಸಿ, ಸಿದ್ಧಪಡಿಸಿರುವ 150 ಪುಟಗಳ ವರದಿಯೇ ತನಿಖೆಗೆ ಮುಖ್ಯ ಆಧಾರವಾಗಿದೆ. ಸಂಸ್ಥೆ ಆರಂಭದಿಂದ ಈವರೆಗೆ ಸಂಗ್ರಹವಾಗಿರುವ ಠೇವಣಿ, 35 ಸಾವಿರ ಜನರಿಂದ ಜಮೆ ಮಾಡಿಕೊಂಡಿರುವ ಮೊತ್ತ, ಅವರ ಹೂಡಿಕೆಗೆ ಪ್ರತಿಯಾಗಿ ಪ್ರತಿ ತಿಂಗಳು ನೀಡಿರುವ ಬಡ್ಡಿ, ಇದೇ ಹಣದಿಂದ ಸಂಪಾದಿಸಲಾಗಿರುವ ಚರಾಸ್ತಿ ಮತ್ತು ಸ್ಥಿರಾಸ್ತಿ, ಬ್ಯಾಂಕ್ ವಹಿವಾಟು, ವಿವಿಧೆಡೆ ಮಾಡಿರುವ ಹೂಡಿಕೆ, ಸಿಎಸ್ಆರ್ ಅಡಿ ಮಾಡಿರುವ ವೆಚ್ಚಗಳ ಸಮಗ್ರ ಮಾಹಿತಿಯನ್ನು ವರದಿಯಲ್ಲಿ ದಾಖಲಿಸಲಾಗಿದೆ.
ಬಹುಕೋಟಿ ವಂಚನೆ ಪ್ರಕರಣಗಳು ಬೆಳಗಾವಿಗೆ ಹೊಸದೇನಲ್ಲ. 18 ವರ್ಷಗಳ ಹಿಂದೆ ಸಾಯಿ ಮಲ್ಟಿ ಸ್ಕೀಮ್ (ಎಸ್ಎಂಎಸ್) ಹೆಸರಿನಲ್ಲಿ ಸಂಜಯ ಟೆಂಗಿನಕಾಯಿ ಎಂಬಾತ, ಠೇವಣಿ ಹಣಕ್ಕೆ ಮೂರು ವರ್ಷದ ವರೆಗೆ ತಿಂಗಳಿಗೆ ಶೇ.10ರ ಬಡ್ಡಿ ಅಮಿಷ ತೋರಿಸಿ ಹಣ ಹೂಡಿಕೆ ಮಾಡಿಸಿ ಮೋಸ ಮಾಡಿದ್ದ. ಮತ್ತೊಂದು ಪ್ರಕರಣದಲ್ಲಿ ಬೆಳಗಾವಿ, ಚಿಕ್ಕೋಡಿ, ಗೋಕಾಕ, ಬೈಲಹೊಂಗಲ ಭಾಗದಲ್ಲಿ ರೈತರಿಗೆ ಎಮು ಪಕ್ಷಿ ಮಾಂಸ, ಮೊಟ್ಟೆ, ಗರಿಗಳನ್ನು ಹೆಚ್ಚಿನ ಬೆಲೆಗೆ ತೆಗೆದುಕೊಳ್ಳುತ್ತೇವೆ ಎಂದು ನಂಬಿಸಿ, ರೈತರಿಗೆ ಮರಿಗಳನ್ನು ಮಾರಲಾಗಿತ್ತು. ಎಮು ಪಕ್ಷಿ ದೊಡ್ಡದಾಗಿ ಮೊಟ್ಟೆಯಿಡುವ ಹೊತ್ತಿಗೆ, ಮರಿ ಕೊಟ್ಟವರು ನಾಪತ್ತೆಯಾಗಿದ್ದರು.
ಬಹುಕೋಟಿ ವಂಚನೆ ಪ್ರಕರಣ ಅಂತಾರಾಜ್ಯ ವ್ಯಾಪ್ತಿ ಹೊಂದಿದ್ದು 50 ಕೋಟಿಗೂ ಹೆಚ್ಚಿನ ಅವ್ಯವಹಾರ ಆಗಿರುವುದರಿಂದ ಸಿಐಡಿಗೆ ನೀಡಲಾಗಿದೆ. ಈವರೆಗಿನ ತನಿಖಾ ಮಾಹಿತಿ ಹಾಗೂ ಜಪ್ತಿ ಮಾಡಿಕೊಂಡ ದಾಖಲೆಗಳನ್ನು ಸಿಐಡಿಗೆ ಹಸ್ತಾಂತರಿಸಿದ್ದೇವೆ ಎಂದು ಬೆಳಗಾವಿ ಎಸ್ಪಿ ಭೂಷಣ ಬೋರಸೆ ತಿಳಿಸಿದ್ದಾರೆ.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am