ಬ್ರೇಕಿಂಗ್ ನ್ಯೂಸ್
18-05-26 04:19 pm HK News Staffer ಕ್ರೈಂ
ಬೆಳಗಾವಿ, ಮೇ 18: ಬೆಳಗಾವಿ ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿದ್ದು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಸಲ್ಲಿಸಿದ್ದ 150 ಪುಟಗಳ ವರದಿಯನ್ನಾಧರಿಸಿ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಸಿಐಡಿ ಡಿಐಜಿ ಡಾ.ಭೀಮಾಶಂಕರ ಗುಳೇದ ನೇತೃತ್ವದ ಪೊಲೀಸರು ಬೆಳಗಾವಿಗೆ ಆಗಮಿಸಿದ್ದಾರೆ.
ಶನಿವಾರ ರಾತ್ರಿ ಆರೋಪಿ ಶಿವಾನಂದ ನೀಲಣ್ಣವರನನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಉಪ ವಿಭಾಗಾಧಿಕಾರಿ ಶ್ರವಣ ನಾಯಕ 20 ಗಂಟೆ ಕಾಲ ಪರಿಶೀಲನೆ ನಡೆಸಿ, ಸಿದ್ಧಪಡಿಸಿರುವ 150 ಪುಟಗಳ ವರದಿಯೇ ತನಿಖೆಗೆ ಮುಖ್ಯ ಆಧಾರವಾಗಿದೆ. ಸಂಸ್ಥೆ ಆರಂಭದಿಂದ ಈವರೆಗೆ ಸಂಗ್ರಹವಾಗಿರುವ ಠೇವಣಿ, 35 ಸಾವಿರ ಜನರಿಂದ ಜಮೆ ಮಾಡಿಕೊಂಡಿರುವ ಮೊತ್ತ, ಅವರ ಹೂಡಿಕೆಗೆ ಪ್ರತಿಯಾಗಿ ಪ್ರತಿ ತಿಂಗಳು ನೀಡಿರುವ ಬಡ್ಡಿ, ಇದೇ ಹಣದಿಂದ ಸಂಪಾದಿಸಲಾಗಿರುವ ಚರಾಸ್ತಿ ಮತ್ತು ಸ್ಥಿರಾಸ್ತಿ, ಬ್ಯಾಂಕ್ ವಹಿವಾಟು, ವಿವಿಧೆಡೆ ಮಾಡಿರುವ ಹೂಡಿಕೆ, ಸಿಎಸ್ಆರ್ ಅಡಿ ಮಾಡಿರುವ ವೆಚ್ಚಗಳ ಸಮಗ್ರ ಮಾಹಿತಿಯನ್ನು ವರದಿಯಲ್ಲಿ ದಾಖಲಿಸಲಾಗಿದೆ.
ಬಹುಕೋಟಿ ವಂಚನೆ ಪ್ರಕರಣಗಳು ಬೆಳಗಾವಿಗೆ ಹೊಸದೇನಲ್ಲ. 18 ವರ್ಷಗಳ ಹಿಂದೆ ಸಾಯಿ ಮಲ್ಟಿ ಸ್ಕೀಮ್ (ಎಸ್ಎಂಎಸ್) ಹೆಸರಿನಲ್ಲಿ ಸಂಜಯ ಟೆಂಗಿನಕಾಯಿ ಎಂಬಾತ, ಠೇವಣಿ ಹಣಕ್ಕೆ ಮೂರು ವರ್ಷದ ವರೆಗೆ ತಿಂಗಳಿಗೆ ಶೇ.10ರ ಬಡ್ಡಿ ಅಮಿಷ ತೋರಿಸಿ ಹಣ ಹೂಡಿಕೆ ಮಾಡಿಸಿ ಮೋಸ ಮಾಡಿದ್ದ. ಮತ್ತೊಂದು ಪ್ರಕರಣದಲ್ಲಿ ಬೆಳಗಾವಿ, ಚಿಕ್ಕೋಡಿ, ಗೋಕಾಕ, ಬೈಲಹೊಂಗಲ ಭಾಗದಲ್ಲಿ ರೈತರಿಗೆ ಎಮು ಪಕ್ಷಿ ಮಾಂಸ, ಮೊಟ್ಟೆ, ಗರಿಗಳನ್ನು ಹೆಚ್ಚಿನ ಬೆಲೆಗೆ ತೆಗೆದುಕೊಳ್ಳುತ್ತೇವೆ ಎಂದು ನಂಬಿಸಿ, ರೈತರಿಗೆ ಮರಿಗಳನ್ನು ಮಾರಲಾಗಿತ್ತು. ಎಮು ಪಕ್ಷಿ ದೊಡ್ಡದಾಗಿ ಮೊಟ್ಟೆಯಿಡುವ ಹೊತ್ತಿಗೆ, ಮರಿ ಕೊಟ್ಟವರು ನಾಪತ್ತೆಯಾಗಿದ್ದರು.
ಬಹುಕೋಟಿ ವಂಚನೆ ಪ್ರಕರಣ ಅಂತಾರಾಜ್ಯ ವ್ಯಾಪ್ತಿ ಹೊಂದಿದ್ದು 50 ಕೋಟಿಗೂ ಹೆಚ್ಚಿನ ಅವ್ಯವಹಾರ ಆಗಿರುವುದರಿಂದ ಸಿಐಡಿಗೆ ನೀಡಲಾಗಿದೆ. ಈವರೆಗಿನ ತನಿಖಾ ಮಾಹಿತಿ ಹಾಗೂ ಜಪ್ತಿ ಮಾಡಿಕೊಂಡ ದಾಖಲೆಗಳನ್ನು ಸಿಐಡಿಗೆ ಹಸ್ತಾಂತರಿಸಿದ್ದೇವೆ ಎಂದು ಬೆಳಗಾವಿ ಎಸ್ಪಿ ಭೂಷಣ ಬೋರಸೆ ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm