ಬ್ರೇಕಿಂಗ್ ನ್ಯೂಸ್
18-05-26 04:19 pm HK News Staffer ಕ್ರೈಂ
ಬೆಳಗಾವಿ, ಮೇ 18: ಬೆಳಗಾವಿ ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿದ್ದು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಸಲ್ಲಿಸಿದ್ದ 150 ಪುಟಗಳ ವರದಿಯನ್ನಾಧರಿಸಿ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಸಿಐಡಿ ಡಿಐಜಿ ಡಾ.ಭೀಮಾಶಂಕರ ಗುಳೇದ ನೇತೃತ್ವದ ಪೊಲೀಸರು ಬೆಳಗಾವಿಗೆ ಆಗಮಿಸಿದ್ದಾರೆ.
ಶನಿವಾರ ರಾತ್ರಿ ಆರೋಪಿ ಶಿವಾನಂದ ನೀಲಣ್ಣವರನನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಉಪ ವಿಭಾಗಾಧಿಕಾರಿ ಶ್ರವಣ ನಾಯಕ 20 ಗಂಟೆ ಕಾಲ ಪರಿಶೀಲನೆ ನಡೆಸಿ, ಸಿದ್ಧಪಡಿಸಿರುವ 150 ಪುಟಗಳ ವರದಿಯೇ ತನಿಖೆಗೆ ಮುಖ್ಯ ಆಧಾರವಾಗಿದೆ. ಸಂಸ್ಥೆ ಆರಂಭದಿಂದ ಈವರೆಗೆ ಸಂಗ್ರಹವಾಗಿರುವ ಠೇವಣಿ, 35 ಸಾವಿರ ಜನರಿಂದ ಜಮೆ ಮಾಡಿಕೊಂಡಿರುವ ಮೊತ್ತ, ಅವರ ಹೂಡಿಕೆಗೆ ಪ್ರತಿಯಾಗಿ ಪ್ರತಿ ತಿಂಗಳು ನೀಡಿರುವ ಬಡ್ಡಿ, ಇದೇ ಹಣದಿಂದ ಸಂಪಾದಿಸಲಾಗಿರುವ ಚರಾಸ್ತಿ ಮತ್ತು ಸ್ಥಿರಾಸ್ತಿ, ಬ್ಯಾಂಕ್ ವಹಿವಾಟು, ವಿವಿಧೆಡೆ ಮಾಡಿರುವ ಹೂಡಿಕೆ, ಸಿಎಸ್ಆರ್ ಅಡಿ ಮಾಡಿರುವ ವೆಚ್ಚಗಳ ಸಮಗ್ರ ಮಾಹಿತಿಯನ್ನು ವರದಿಯಲ್ಲಿ ದಾಖಲಿಸಲಾಗಿದೆ.
ಬಹುಕೋಟಿ ವಂಚನೆ ಪ್ರಕರಣಗಳು ಬೆಳಗಾವಿಗೆ ಹೊಸದೇನಲ್ಲ. 18 ವರ್ಷಗಳ ಹಿಂದೆ ಸಾಯಿ ಮಲ್ಟಿ ಸ್ಕೀಮ್ (ಎಸ್ಎಂಎಸ್) ಹೆಸರಿನಲ್ಲಿ ಸಂಜಯ ಟೆಂಗಿನಕಾಯಿ ಎಂಬಾತ, ಠೇವಣಿ ಹಣಕ್ಕೆ ಮೂರು ವರ್ಷದ ವರೆಗೆ ತಿಂಗಳಿಗೆ ಶೇ.10ರ ಬಡ್ಡಿ ಅಮಿಷ ತೋರಿಸಿ ಹಣ ಹೂಡಿಕೆ ಮಾಡಿಸಿ ಮೋಸ ಮಾಡಿದ್ದ. ಮತ್ತೊಂದು ಪ್ರಕರಣದಲ್ಲಿ ಬೆಳಗಾವಿ, ಚಿಕ್ಕೋಡಿ, ಗೋಕಾಕ, ಬೈಲಹೊಂಗಲ ಭಾಗದಲ್ಲಿ ರೈತರಿಗೆ ಎಮು ಪಕ್ಷಿ ಮಾಂಸ, ಮೊಟ್ಟೆ, ಗರಿಗಳನ್ನು ಹೆಚ್ಚಿನ ಬೆಲೆಗೆ ತೆಗೆದುಕೊಳ್ಳುತ್ತೇವೆ ಎಂದು ನಂಬಿಸಿ, ರೈತರಿಗೆ ಮರಿಗಳನ್ನು ಮಾರಲಾಗಿತ್ತು. ಎಮು ಪಕ್ಷಿ ದೊಡ್ಡದಾಗಿ ಮೊಟ್ಟೆಯಿಡುವ ಹೊತ್ತಿಗೆ, ಮರಿ ಕೊಟ್ಟವರು ನಾಪತ್ತೆಯಾಗಿದ್ದರು.
ಬಹುಕೋಟಿ ವಂಚನೆ ಪ್ರಕರಣ ಅಂತಾರಾಜ್ಯ ವ್ಯಾಪ್ತಿ ಹೊಂದಿದ್ದು 50 ಕೋಟಿಗೂ ಹೆಚ್ಚಿನ ಅವ್ಯವಹಾರ ಆಗಿರುವುದರಿಂದ ಸಿಐಡಿಗೆ ನೀಡಲಾಗಿದೆ. ಈವರೆಗಿನ ತನಿಖಾ ಮಾಹಿತಿ ಹಾಗೂ ಜಪ್ತಿ ಮಾಡಿಕೊಂಡ ದಾಖಲೆಗಳನ್ನು ಸಿಐಡಿಗೆ ಹಸ್ತಾಂತರಿಸಿದ್ದೇವೆ ಎಂದು ಬೆಳಗಾವಿ ಎಸ್ಪಿ ಭೂಷಣ ಬೋರಸೆ ತಿಳಿಸಿದ್ದಾರೆ.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm