ಬ್ರೇಕಿಂಗ್ ನ್ಯೂಸ್
24-05-26 02:01 pm HK News Staffer ಕ್ರೈಂ
ಬೆಂಗಳೂರು, ಮೇ 24: ಪೊಲೀಸ್ ಕ್ವಾರ್ಟಸ್ನಲ್ಲೇ ನೇಣು ಬಿಗಿದು ಕಾನ್ಸ್ಪೇಬಲ್ ಒಬ್ಬರ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ.
ಲಕ್ಷ್ಮೀ ಪ್ರಿಯಾ (26) ಆತ್ಮಹತ್ಯೆಗೆ ಶರಣಾದ ಮಹಿಳೆ. ಮೃತಳ ತಂದೆ ಕುಮಾರ್ ಆರಾಧ್ಯ ಅವರು ನೀಡಿದ ದೂರಿನ ಮೇರೆಗೆ ಹೆಚ್ಎಎಲ್ ಠಾಣೆಯ ಕಾನ್ಸ್ಟೇಬಲ್ ರಾಜೇಶ್ ಹಾಗೂ ತಂದೆ-ತಾಯಿ ಸೇರಿದಂತೆ ನಾಲ್ವರ ವಿರುದ್ಧ ವರದಕ್ಷಿಣೆ ಪ್ರಕರಣ ದಾಖಲಾಗಿದೆ.
ಮೈಸೂರು ಮೂಲದ ಲಕ್ಷ್ಮೀ ಪ್ರಿಯಾಗೆ 2023ರಲ್ಲಿ ಕಾನ್ಸ್ಟೇಬಲ್ ರಾಜೇಶ್ ಜೊತೆ ಮದುವೆಯಾಗಿತ್ತು. ಈ ವೇಳೆ 350 ಗ್ರಾಂ ಚಿನ್ನ, 1 ಕೆ.ಜಿ. ಬೆಳ್ಳಿ ಹಾಗೂ ಗೃಹ ಬಳಕೆ ವಸ್ತುಗಳನ್ನು ನೀಡಲಾಗಿತ್ತು. ದಂಪತಿಗೆ 8 ತಿಂಗಳ ಹೆಣ್ಣು ಮಗುವಿದೆ. ಮದುವೆಯಾದ ಕೆಲ ತಿಂಗಳ ಬಳಿಕ ವರದಕ್ಷಿಣೆ ಹಣಕ್ಕಾಗಿ ಪತಿ ಪೀಡಿಸುತ್ತಿದ್ದ. ಬಾಣಂತನಕ್ಕಾಗಿ ತವರು ಮನೆಗೆ ಬಂದಾಗಲೂ ಮಾನಸಿಕ ಕಿರುಕುಳ ನೀಡಿದ್ದ.
ಇದಲ್ಲದರ, ಬೇರೊಬ್ಬ ಯುವತಿ ಜೊತೆ ಸಂಬಂಧ ಹೊಂದಿದ್ದು ಇದನ್ನು ಮಗಳು ಪ್ರಶ್ನಿಸಿದ್ದಕ್ಕೆ ಕಿರುಕುಳ ನೀಡಲಾರಂಭಿಸಿದ್ದ. ಮೇ 22ರಂದು ತನ್ನ ಮಗಳು ವಾಟ್ಸಾಪ್ನಲ್ಲಿ ಮೊಬೈಲ್ ಪಾಸ್ವರ್ಡ್ ಕಳುಹಿಸಿ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ರಾಜೇಶ್ ಹಾಗೂ ಆತನ ಮನೆಯವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮೃತಳ ತಂದೆ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ರಾಜೇಶ್ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm