ಬ್ರೇಕಿಂಗ್ ನ್ಯೂಸ್
27-05-26 12:42 pm HK News Staffer ಕ್ರೈಂ
ಬೆಂಗಳೂರು, ಮೇ 27: ಮುಂಬೈನಲ್ಲಿ ರೇಡಿಯೊ ಜಾಕಿ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನಗರದ ಮಾನ್ಯತಾ ಟೆಕ್ ಪಾರ್ಕ್ ಆವರಣದಲ್ಲಿರುವ ತಮ್ಮ ಫ್ಲ್ಯಾಟ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮುಂಬೈ ಮೂಲದ ಮನೀಷಾ ಪ್ರಸಾದ್ (48) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಘಟನೆಗೆ ಸಂಬಂಧಿಸಿ ಆಕೆಯ ಪ್ರಿಯಕರ ಹರ್ಷವರ್ಧನ್ ಸಿಂಗ್ ಬನ್ಸಾಲ್ ಎಂಬಾತನ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೀಷಾ ಪ್ರಸಾದ್ ಅವರು ಮುಂಬೈನಲ್ಲಿ ರೇಡಿಯೊ ಜಾಕಿಯಾಗಿದ್ದರು. ಕೌಟುಂಬಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ 2024 ರಲ್ಲಿ ಅವರು ತಮ್ಮ ಪತಿಯಿಂದ ವಿಚ್ಛೇದನ ಪಡೆದಿದ್ದರು. ವಿಚ್ಛೇದನ ಬಳಿಕ ಮುಂಬೈನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಿಮಾಚಲ ಪ್ರದೇಶ ಮೂಲದ ಹರ್ಷವರ್ಧನ್ ಸಿಂಗ್ ಬನ್ಸಾಲ್ ಎಂಬಾತನ ಪರಿಚಯವಾಗಿ, ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು. ನಂತರ ಇಬ್ಬರೂ ಲಿವ್-ಇನ್ ರಿಲೇಶನ್ಶಿಪ್ನಲ್ಲಿ ಇದ್ದರು ಎನ್ನಲಾಗಿದೆ.
ಸಹ ಜೀವನ ನಡೆಸುತ್ತಿದ್ದ ವೇಳೆ ಪ್ರಿಯಕರ ಹರ್ಷವರ್ಧನ್ ಸಿಂಗ್, ಮನೀಷಾ ಅವರಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಘಾಸಿಗೊಂಡ ಮನೀಷಾ ಆತನಿಂದ ದೂರವಿರಲು ನಿರ್ಧರಿಸಿ, ಕಳೆದ ಏಪ್ರಿಲ್ ತಿಂಗಳಲ್ಲಿ ಬೆಂಗಳೂರಿಗೆ ಬಂದಿದ್ದರು. ಮಾನ್ಯತಾ ಟೆಕ್ ಪಾರ್ಕಿನ ಅಪಾರ್ಟ್ಮೆಂಟ್ನಲ್ಲಿ ಹೊಸದಾಗಿ ಫ್ಲ್ಯಾಟ್ ಖರೀದಿಸಿ, ಒಂಟಿಯಾಗಿ ವಾಸಿಸುತ್ತಿದ್ದರು.
ಕಳೆದ ಕೆಲವು ದಿನಗಳಿಂದ ಮನೀಷಾ ಸಂಬಂಧಿಕರ ಫೋನ್ ಕರೆಗಳನ್ನೂ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಆತಂಕಗೊಂಡ ಸಂಬಂಧಿಕರು ನಿನ್ನೆ ಬೆಂಗಳೂರಿನ ಫ್ಲ್ಯಾಟ್ಗೆ ಬಂದು ಪರಿಶೀಲಿಸಿದಾಗ ಮನೀಷಾ ನೇಣು ಬಿಗಿದು ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಅಮೃತಹಳ್ಳಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಮೂರು ಪುಟಗಳ ಡೆತ್ನೋಟ್
ಆತ್ಮಹತ್ಯೆಗೂ ಮುನ್ನ ಮನೀಷಾ ಅವರು ಮೂರು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟಿದ್ದಾರೆ. ಅದರಲ್ಲಿ, “ನನ್ನ ಸಾವಿಗೆ ಹಿಮಾಚಲ ಪ್ರದೇಶದ ಹರ್ಷವರ್ಧನ್ ಸಿಂಗ್ ಬನ್ಸಾಲ್ ನೀಡಿದ ಕಿರುಕುಳವೇ ನೇರ ಕಾರಣ” ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಮೃತಹಳ್ಳಿ ಪೊಲೀಸರು ಮರಣಪತ್ರ ಹಾಗೂ ಮನೀಷಾ ಅವರ ಮೊಬೈಲ್ ಫೋನ್ ವಶಪಡಿಸಿದ್ದಾರೆ. ಆರೋಪಿ ಹರ್ಷವರ್ಧನ್ ಸಿಂಗ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಮೊಕದ್ದಮೆ ದಾಖಲಾಗಿದ್ದು, ಪೊಲೀಸರು ಆತನಿಗಾಗಿ ಶೋಧ ಕೈಗೊಂಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am