ಬ್ರೇಕಿಂಗ್ ನ್ಯೂಸ್
31-05-26 08:25 pm HK News Staffer ಕ್ರೈಂ
ಹಾಸನ, ಮೇ 31: ನಗರದ ಖಾಸಗಿ ಲಾಡ್ಜ್ನಲ್ಲಿ ಉಪ ತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಆತ್ಮಹತ್ಯೆಗೂ ಮುನ್ನ ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟಿರುವುದು ತನಿಖೆಗೆ ಮಹತ್ವದ ಸುಳಿವಾಗಿದೆ.
ಮೃತರನ್ನು ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತಿಮ್ಮಯ್ಯ (52) ಎಂದು ಗುರುತಿಸಲಾಗಿದೆ. ಅವರು ಹಾಸನ ನಗರದ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಕುಟುಂಬದೊಂದಿಗೆ ಹಾಸನದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ವಾಸವಾಗಿದ್ದರು. ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಸೇವೆ ಸಲ್ಲಿಸಿದ್ದ ಅವರು, ಪ್ರಸ್ತುತ ಸಾಲಿಗ್ರಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಘಟನಾ ಸ್ಥಳದಲ್ಲಿ ನಾಲ್ಕು ಪುಟಗಳ ಡೆತ್ನೋಟ್ ಪತ್ತೆಯಾಗಿದ್ದು, ಅದರಲ್ಲಿರುವ ಮಾಹಿತಿಯ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆ ಬಳಿಕವೇ ಸ್ಪಷ್ಟವಾಗಲಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಬಡಾವಣೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm