ಬ್ರೇಕಿಂಗ್ ನ್ಯೂಸ್
01-06-26 12:40 pm HK News Staffer ಕ್ರೈಂ
ಬಂಟ್ವಾಳ, ಜೂನ್ 1: ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ಭಾನುವಾರ ರಾತ್ರಿ ಸಣ್ಣ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಯುವಕನೊಬ್ಬ ತನ್ನ ಚಿಕ್ಕಪ್ಪನ ಕುತ್ತಿಗೆಗೆ ಬಿಯರ್ ಬಾಟಲಿಯಿಂದ ಇರಿದು ಕೊಲೆಗೈದಿದ್ದಾನೆ.
ಮನೆಯಲ್ಲಿ ದೈವಿಕ ಕಾರ್ಯಕ್ರಮ ನಡೆಸಿದ ಬಳಿಕ ಊಟದ ವೇಳೆ ಮದ್ಯದ ಅಮಲಿನಲ್ಲಿ ಯುವಕರು ಮಾತಾಡಿಕೊಂಡಿದ್ದು ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ತನ್ನ ಸ್ವಂತ ಚಿಕ್ಕಪ್ಪನಿಗೇ ಇರಿದಿದ್ದಾನೆ. ಕಾಡಬೆಟ್ಟು ನಿವಾಸಿ ಮಧುಸೂಧನ ( 38) ಕೊಲೆಯಾದವರಾಗಿದ್ದು, ಅವರ ಅಣ್ಣ ಕೇಶವ ಪೂಜಾರಿಯ ಪುತ್ರ ರಾಹುಲ್ (23) ಕೊಲೆಗೈದ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾನೆ. ಕೇಶವ ಪೂಜಾರಿ ಅವರ ಮನೆಯಲ್ಲಿ ನಿನ್ನೆ ರಾತ್ರಿ ದೈವಕ್ಕೆ ವಾರ್ಷಿಕ ತಂಬಿಲ ಸೇವೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕೇಶವ ಪೂಜಾರಿ ಅವರ ಪುತ್ರ ರಾಹುಲ್ (23) ಮತ್ತು ಆತನ ಸ್ನೇಹಿತರು ಮನೆಯ ಹೊರಗಡೆ ಮದ್ಯಸೇವಿಸಿ ಗದ್ದಲ ಎಬ್ಬಿಸುತ್ತಿದ್ದರು. ಮನೆಯಲ್ಲಿ ದೈವದ ಕಾರ್ಯಕ್ರಮ ನಡೆಯುತ್ತಿರುವುದರಿಂದ ಹೊರಗೆ ಗಲಾಟೆ ಮಾಡದಂತೆ ಚಿಕ್ಕಪ್ಪ, ವೃತ್ತಿಯಲ್ಲಿ ಇಲೆಕ್ಟ್ರಿಷಿಯನ್ ಆಗಿದ್ದ ಮಧುಸೂಧನ (38) ಆಕ್ಷೇಪ ವ್ಯಕ್ತಪಡಿಸಿ ಬುದ್ಧಿವಾದ ಹೇಳಿದ್ದಾರೆ.
ಚಿಕ್ಕಪ್ಪ ಜೊತೆಗೆ ಮಾತಿಗೆ ಮಾತು ಬೆಳೆಸುತ್ತ ಕೋಪಗೊಂಡ ರಾಹುಲ್ ತನ್ನ ಕೈಯಲ್ಲಿದ್ದ ಬಿಯರ್ ಬಾಟಲಿಯಿಂದ ಮಧುಸೂಧನ ಅವರ ಕುತ್ತಿಗೆಯ ಭಾಗಕ್ಕೆ ಬಲವಾಗಿ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ. ಬಿಯರ್ ಬಾಟಲಿ ಚುಚ್ಚಿದ ರಭಸಕ್ಕೆ ತೀವ್ರ ರಕ್ತಸ್ರಾವ ಉಂಟಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮಧುಸೂಧನ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರೂ, ಅತಿಯಾದ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.
ಮಧುಸೂಧನ ಅವರು ಅವಿವಾಹಿತರಾಗಿದ್ದು, ಇಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ರಾಹುಲ್ ಪೆಟ್ರೋಲ್ ಬಂಕ್ ಉದ್ಯೋಗಿಯಾಗಿದ್ದ. ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm