ಬ್ರೇಕಿಂಗ್ ನ್ಯೂಸ್
04-06-26 12:49 pm HK News Staffer ಕ್ರೈಂ
ಉಡುಪಿ, ಜೂನ್ 4: ನೀರು ಸೇದುತ್ತಿದ್ದಾಗ ಆಕಸ್ಮಿಕವಾಗಿ 30 ಅಡಿ ಆಳದ ಬಾವಿಗೆ ಬಿದ್ದ ಪತ್ನಿಯನ್ನು ರಕ್ಷಿಸಲು 65 ವರ್ಷದ ಪತಿಯೇ ಸ್ವತಃ ಬಾವಿಗೆ ಹಾರಿದ್ದಲ್ಲದೆ, ಆಕೆಗೆ ಧೈರ್ಯ ತುಂಬಿ ಜೀವ ರಕ್ಷಿಸಿದ ಹೃದಯಸ್ಪರ್ಶಿ ಘಟನೆ ಇಲ್ಲಿನ ಕೆಮ್ಮಣ್ಣು ಎಂಬಲ್ಲಿ ನಡೆದಿದೆ.
ಕೆಮ್ಮಣ್ಣು ಸರ್ಕಾರಿ ಶಾಲೆ ಬಳಿಯ ನಿವಾಸಿಗಳಾದ ಗೋಪಾಲಕೃಷ್ಣ ಹೆಗ್ಡೆ (65) ಹಾಗೂ ಶ್ಯಾಮಲಾ (60) ಎಂಬವರೇ ಬಾವಿಗೆ ಬಿದ್ದು ಅಪಾಯದಿಂದ ಪಾರಾದ ದಂಪತಿ. ಬುಧವಾರ ಬೆಳಗ್ಗೆ ಶ್ಯಾಮಲಾ ಅವರು ಮನೆಯ ಬಾವಿಯಿಂದ ನೀರು ಸೇದಲು ಹೋಗಿದ್ದರು. ಬಾವಿಯ ಒಂದು ಬದಿಗೆ ಆವರಣ ಗೋಡೆ ಇರಲಿಲ್ಲ ಎನ್ನಲಾಗಿದೆ. ನೀರು ಸೇದುವ ಭರದಲ್ಲಿ ಕಾಲು ಜಾರಿ ಮಹಿಳೆ ಆಕಸ್ಮಿಕವಾಗಿ ಬಾವಿಯೊಳಗೆ ಬಿದ್ದಿದ್ದಾರೆ.
ಬಾವಿಗೆ ಬಿದ್ದು ಅಪಾಯದಲ್ಲಿರುವುದನ್ನು ಗಮನಿಸಿದ ಗೋಪಾಲಕೃಷ್ಣ ಹೆಗ್ಡೆ ಕೂಡಲೇ ಬೇರೇನೂ ಯೋಚಿಸದೆ ಆಕೆಯನ್ನು ರಕ್ಷಿಸಲು ತಾವೂ ಬಾವಿಗೆ ಧುಮುಕಿದ್ದಾರೆ. ಬಾವಿ ಆಳವಾಗಿದ್ದರಿಂದ ಇಬ್ಬರಿಗೂ ಮೇಲೆ ಬರಲು ಸಾಧ್ಯವಾಗದೆ ಒಳಗೇ ಬಂಧಿಯಾಗಿದ್ದಾರೆ. ನೀರು ಹೆಚ್ಚಿಲ್ಲದ ಕಾರಣ ಗೋಪಾಲಕೃಷ್ಣ ಅವರು ಬಾವಿಯ ತಳದಲ್ಲಿ ಪತ್ನಿಗೆ ಧೈರ್ಯ ತುಂಬುತ್ತಾ, ಯಾರಾದ್ರೂ ರಕ್ಷಣೆಗೆ ಬನ್ನಿ ಎಂದು ಕರೆಯತೊಡಗಿದ್ದಾರೆ.
ಇಬ್ಬರೂ ಬಾವಿಯೊಳಗೆ ಬಿದ್ದಿರುವುದನ್ನು ತಿಳಿದ ಮನೆಯಲ್ಲಿದ್ದ ಮತ್ತೊಬ್ಬ ಮಹಿಳೆ, ತಕ್ಷಣವೇ ಸಮೀಪದ ಶಾಲೆಗೆ ಓಡಿಹೋಗಿ ಅಲ್ಲಿನ ಶಿಕ್ಷಕರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಅಲ್ಲಿನ ಸಿಬಂದಿ ಬಂದಿದ್ದು ಅಗ್ನಿಶಾಮಕ ಸಿಬ್ಬಂದಿ ಹಾಗೂ ಆಪದ್ಬಾಂಧವ ಈಶ್ವರ ಮಲ್ಪೆ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡವು ಕಾರ್ಯಾಚರಣೆ ನಡೆಸಿ, ಶ್ಯಾಮಲಾ ಅವರನ್ನು ಹಲಗೆಯ ಸಹಾಯದಿಂದ ಹಾಗೂ ಗೋಪಾಲಕೃಷ್ಣ ಹೆಗ್ಡೆ ಅವರನ್ನು ಕುರ್ಚಿಗೆ ಕಟ್ಟಿ ಮೇಲಕ್ಕೆತ್ತಿದೆ.
ಬಾವಿಯಿಂದ ಮೇಲಕ್ಕೆ ತರುವಷ್ಟರಲ್ಲಿ ದಂಪತಿ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೈ ಕಾಲಿಗೆ ಒಂದಷ್ಟು ಪೆಟ್ಟು ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm