ಬ್ರೇಕಿಂಗ್ ನ್ಯೂಸ್
04-06-26 12:49 pm HK News Staffer ಕ್ರೈಂ
ಉಡುಪಿ, ಜೂನ್ 4: ನೀರು ಸೇದುತ್ತಿದ್ದಾಗ ಆಕಸ್ಮಿಕವಾಗಿ 30 ಅಡಿ ಆಳದ ಬಾವಿಗೆ ಬಿದ್ದ ಪತ್ನಿಯನ್ನು ರಕ್ಷಿಸಲು 65 ವರ್ಷದ ಪತಿಯೇ ಸ್ವತಃ ಬಾವಿಗೆ ಹಾರಿದ್ದಲ್ಲದೆ, ಆಕೆಗೆ ಧೈರ್ಯ ತುಂಬಿ ಜೀವ ರಕ್ಷಿಸಿದ ಹೃದಯಸ್ಪರ್ಶಿ ಘಟನೆ ಇಲ್ಲಿನ ಕೆಮ್ಮಣ್ಣು ಎಂಬಲ್ಲಿ ನಡೆದಿದೆ.
ಕೆಮ್ಮಣ್ಣು ಸರ್ಕಾರಿ ಶಾಲೆ ಬಳಿಯ ನಿವಾಸಿಗಳಾದ ಗೋಪಾಲಕೃಷ್ಣ ಹೆಗ್ಡೆ (65) ಹಾಗೂ ಶ್ಯಾಮಲಾ (60) ಎಂಬವರೇ ಬಾವಿಗೆ ಬಿದ್ದು ಅಪಾಯದಿಂದ ಪಾರಾದ ದಂಪತಿ. ಬುಧವಾರ ಬೆಳಗ್ಗೆ ಶ್ಯಾಮಲಾ ಅವರು ಮನೆಯ ಬಾವಿಯಿಂದ ನೀರು ಸೇದಲು ಹೋಗಿದ್ದರು. ಬಾವಿಯ ಒಂದು ಬದಿಗೆ ಆವರಣ ಗೋಡೆ ಇರಲಿಲ್ಲ ಎನ್ನಲಾಗಿದೆ. ನೀರು ಸೇದುವ ಭರದಲ್ಲಿ ಕಾಲು ಜಾರಿ ಮಹಿಳೆ ಆಕಸ್ಮಿಕವಾಗಿ ಬಾವಿಯೊಳಗೆ ಬಿದ್ದಿದ್ದಾರೆ.
ಬಾವಿಗೆ ಬಿದ್ದು ಅಪಾಯದಲ್ಲಿರುವುದನ್ನು ಗಮನಿಸಿದ ಗೋಪಾಲಕೃಷ್ಣ ಹೆಗ್ಡೆ ಕೂಡಲೇ ಬೇರೇನೂ ಯೋಚಿಸದೆ ಆಕೆಯನ್ನು ರಕ್ಷಿಸಲು ತಾವೂ ಬಾವಿಗೆ ಧುಮುಕಿದ್ದಾರೆ. ಬಾವಿ ಆಳವಾಗಿದ್ದರಿಂದ ಇಬ್ಬರಿಗೂ ಮೇಲೆ ಬರಲು ಸಾಧ್ಯವಾಗದೆ ಒಳಗೇ ಬಂಧಿಯಾಗಿದ್ದಾರೆ. ನೀರು ಹೆಚ್ಚಿಲ್ಲದ ಕಾರಣ ಗೋಪಾಲಕೃಷ್ಣ ಅವರು ಬಾವಿಯ ತಳದಲ್ಲಿ ಪತ್ನಿಗೆ ಧೈರ್ಯ ತುಂಬುತ್ತಾ, ಯಾರಾದ್ರೂ ರಕ್ಷಣೆಗೆ ಬನ್ನಿ ಎಂದು ಕರೆಯತೊಡಗಿದ್ದಾರೆ.
ಇಬ್ಬರೂ ಬಾವಿಯೊಳಗೆ ಬಿದ್ದಿರುವುದನ್ನು ತಿಳಿದ ಮನೆಯಲ್ಲಿದ್ದ ಮತ್ತೊಬ್ಬ ಮಹಿಳೆ, ತಕ್ಷಣವೇ ಸಮೀಪದ ಶಾಲೆಗೆ ಓಡಿಹೋಗಿ ಅಲ್ಲಿನ ಶಿಕ್ಷಕರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಅಲ್ಲಿನ ಸಿಬಂದಿ ಬಂದಿದ್ದು ಅಗ್ನಿಶಾಮಕ ಸಿಬ್ಬಂದಿ ಹಾಗೂ ಆಪದ್ಬಾಂಧವ ಈಶ್ವರ ಮಲ್ಪೆ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡವು ಕಾರ್ಯಾಚರಣೆ ನಡೆಸಿ, ಶ್ಯಾಮಲಾ ಅವರನ್ನು ಹಲಗೆಯ ಸಹಾಯದಿಂದ ಹಾಗೂ ಗೋಪಾಲಕೃಷ್ಣ ಹೆಗ್ಡೆ ಅವರನ್ನು ಕುರ್ಚಿಗೆ ಕಟ್ಟಿ ಮೇಲಕ್ಕೆತ್ತಿದೆ.
ಬಾವಿಯಿಂದ ಮೇಲಕ್ಕೆ ತರುವಷ್ಟರಲ್ಲಿ ದಂಪತಿ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೈ ಕಾಲಿಗೆ ಒಂದಷ್ಟು ಪೆಟ್ಟು ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm