ಬ್ರೇಕಿಂಗ್ ನ್ಯೂಸ್
08-06-26 12:33 pm HK News Staffer ಕ್ರೈಂ
ಹಾಸನ, ಜೂನ್ 8: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರೌಡಿಶೀಟರ್ನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ. ಜಿಲ್ಲಾ ನ್ಯಾಯಾಲಯದ ಎದುರೇ ನಡೆದ ಈ ಕೃತ್ಯ ನಗರದಲ್ಲಿ ಆತಂಕ ಸೃಷ್ಟಿಸಿದೆ.
ಹಾಸನ ನಗರದ ಚನ್ನಪಟ್ಟಣ ಪ್ರದೇಶದಲ್ಲಿರುವ ಜಿಲ್ಲಾ ನ್ಯಾಯಾಲಯದ ಮುಂಭಾಗ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಮಂಜೇಶ್ (43) ಕೊಲೆಯಾದ ರೌಡಿಶೀಟರ್ ಎಂದು ಗುರುತಿಸಲಾಗಿದೆ.
ಮಂಜೇಶ್ ಅವರ ತಾಯಿ ಹಾಸನ ಮೂಲದವರಾಗಿದ್ದು, ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು. ಬೆಂಗಳೂರಿನಲ್ಲಿ ರೌಡಿಶೀಟರ್ ಆಗಿ ಗುರುತಿಸಿಕೊಂಡಿದ್ದ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಿದ್ದಾರೆ.
ಮುಖದ ಗುರುತು ಸಿಗದಂತೆ ತೀವ್ರವಾಗಿ ಹಲ್ಲೆ ನಡೆಸಿ ಕೊಲೆಗೈದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ನಡೆದ ರೀತಿ ಹಳೆಯ ವೈಷಮ್ಯ ಅಥವಾ ಗ್ಯಾಂಗ್ವಾರ್ ಶಂಕೆಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ.
ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
08-06-26 12:37 pm
HK News Staffer
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
08-06-26 04:55 pm
HK News Staffer
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
08-06-26 04:42 pm
HK News Staffer
ರಾಜ್ಯ- ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ಕೊಡಿ...
08-06-26 03:14 pm
ಪಬ್ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ...
08-06-26 02:20 pm
ಹಾಸನದ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್ ಬರ್ಬರ...
08-06-26 12:33 pm
ಕೋಟೆಕಾರು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧ...
07-06-26 03:08 pm