ಬ್ರೇಕಿಂಗ್ ನ್ಯೂಸ್
08-06-26 11:10 pm HK News Desk ಕ್ರೈಂ
ಮಂಗಳೂರು, ಜೂನ್ 8: ಬಂಟ ಮತ್ತು ಬಿಲ್ಲವ ಜಾತಿಗಳನ್ನು ಗುರಿಯಾಗಿಸಿ ಅವಮಾನಕಾರಿ ರೀತಿಯಲ್ಲಿ ಹೇಳಿಕೆ ನೀಡಿ ಜಾಲತಾಣದಲ್ಲಿ ವೈರಲ್ ಮಾಡಿರುವ ಆರೋಪದಲ್ಲಿ ಅನಿತಾ ಕಾಸರಗೋಡು ಎಂಬ ಮಹಿಳೆಯ ವಿರುದ್ಧ ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಬಿರುವೆರ್ ಕುಡ್ಲ ಸಂಘಟನೆಯ ರಾಕೇಶ್ ಎಂಬವರು ಬರ್ಕೆ ಠಾಣೆಗೆ ದೂರು ನೀಡಿ, ಅನಿತಾ ಎಂಬ ಮಹಿಳೆ ತನ್ನ ಫೇಸ್ಬುಕ್ ನಲ್ಲಿ ವಿಡಿಯೋ ಹರಿಯಬಿಟ್ಟು ಶೆಟ್ಟಿ ಮತ್ತು ಬಿಲ್ಲವ ಜಾತಿಯವರಷ್ಟು ಹಲ್ಕಟ್ ಬೇರೆ ಯಾರೂ ಇಲ್ಲ. ಇವರಿಗಿಂತ ಮುಸ್ಲಿಮರು ಆಗಬಹುದು, ಏನಾದ್ರೂ ಸಹಾಯ ಮಾಡುತ್ತಾರೆ ಎಂದು ನಿಂದಿಸಿ ವಿಡಿಯೋ ಮಾಡಿದ್ದಾರೆ. ಜಾತಿಗಳ ಮಧ್ಯೆ ವೈಷಮ್ಯ ಮೂಡಿಸಿ ಪ್ರಚೋದನಕಾರಿ ರೀತಿಯಲ್ಲಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.


ಇದರಂತೆ ಬರ್ಕೆ ಠಾಣೆಯಲ್ಲಿ ಅನಿತಾ ಕಾಸರಗೋಡು ಎಂಬ ಮಹಿಳೆ ವಿರುದ್ಧ ಕಲಂ 196, 353(2) ಮತ್ತು 352 ಅಡಿ ಪೊಲೀಸರು ಕೇಸು ದಾಖಲಿಸಿದ್ದಾರೆ.
ಇದೇ ವೇಳೆ, ಬಿರುವೆರ್ ಕುಡ್ಲ ಸಂಸ್ಥಾಪಕ, ಅಧ್ಯಕ್ಷ ಉದಯ ಪೂಜಾರಿ ಅವರು ಅನಿತಾ ಕಾಸರಗೋಡು ಅವರನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಅವರ ಹೇಳಿಕೆಯಿಂದ ಲಕ್ಷಾಂತರ ಬಿಲ್ಲವ ಹಾಗೂ ಬಂಟ ಸಮುದಾಯದ ಜನರ ಧಾರ್ಮಿಕ ಮತ್ತು ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವಂತಹ ಹೇಳಿಕೆಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಪ್ರಕಾರ ತ್ವರಿತ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am