ಬ್ರೇಕಿಂಗ್ ನ್ಯೂಸ್
06-01-21 05:24 pm Headline Karnataka News Network ಕ್ರೈಂ
ಲಕ್ನೋ, ಜ.6: ದೆಹಲಿಯ ನಿರ್ಭಯಾ ಪ್ರಕರಣದ ರೀತಿಯಲ್ಲೇ ಮತ್ತೊಂದು ಅತ್ಯಾಚಾರ, ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ದೇವಸ್ಥಾನಕ್ಕೆ ತೆರಳಿದ್ದ 50 ವರ್ಷದ ಮಹಿಳೆಯನ್ನು ಗ್ಯಾಂಗ್ ರೇಪ್ ಮಾಡಿ, ವಿಕೃತವಾಗಿ ಕೊಲೆಗೈದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬದೌನ್ ಜಿಲ್ಲೆಯ ಉಘೈಟಿ ಗ್ರಾಮದಲ್ಲಿ ಜ.3ರಂದು ಘಟನೆ ನಡೆದಿದೆ. ಅಂಗನವಾಡಿ ಕಾರ್ಯಕರ್ತೆಯಾಗಿರುವ ಮಹಿಳೆ ಜ.3ರಂದು ಸಂಜೆ ದೇವಸ್ಥಾನಕ್ಕೆ ತೆರಳಿದ್ದರು. ಆದರೆ, ದೇಗುಲಕ್ಕೆ ತೆರಳಿದ್ದ ಮಹಿಳೆ ಬಂದಿರಲಿಲ್ಲ. ಮರುದಿನ ದೇವಸ್ಥಾನದ ಅರ್ಚಕ ಮತ್ತು ಇತರ ಇಬ್ಬರು ಸೇರಿ ಮಹಿಳೆಯ ಶವವನ್ನು ಆಕೆಯ ಮನೆಗೆ ತಂದು ಇರಿಸಿದ್ದಾರೆ. ಈ ಬಗ್ಗೆ ಮನೆಯವರು ಕೇಳಿದಾಗ, ಮಹಿಳೆ ದೇವಸ್ಥಾನದ ಬಳಿಯ ಬಾವಿಗೆ ಬಿದ್ದಿದ್ದಳು. ರಕ್ಷಣೆಗಾಗಿ ಬೊಬ್ಬೆ ಹಾಕಿದ್ದು ನಾವು ಹೋಗಿ ರಕ್ಷಿಸಲು ಪ್ರಯತ್ನಿಸಿದ್ದೆವು. ಆದರೆ ಸಾಧ್ಯವಾಗಲಿಲ್ಲ. ಮಹಿಳೆಯ ಮನೆಯವರ ನಂಬರ್ ಏನೂ ಇರಲಿಲ್ಲ. ಹೀಗಾಗಿ ಶವ ತಂದಿದ್ದೇವೆ ಎಂಬುದಾಗಿ ಅರ್ಚಕ ಹೇಳಿದ್ದಾಗಿ ಮಹಿಳೆಯ ಮಗ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.
ಆದರೆ, ಮಹಿಳೆಯ ಮನೆಯವರು ಅರ್ಚಕ ಮತ್ತು ಇತರ ಇಬ್ಬರು ಸೇರಿ ಅತ್ಯಾಚಾರ ಮಾಡಿ ಕೊಲೆಗೈದಿದ್ದಾರೆಂದು ಆರೋಪಿಸಿದ್ದಾರೆ. ಇದಲ್ಲದೆ, ಈ ಬಗ್ಗೆ ಪೊಲೀಸರಿಗೆ ತಿಳಿಸಿದರೆ ಎಫ್ಐಆರ್ ಮಾಡುವುದಕ್ಕೆ ನಿರ್ಲಕ್ಷ್ಯ ತೋರಿದ್ದಾಗಿ ಹೇಳಿದ್ದಾರೆ. ಊರ ಗ್ರಾಮಸ್ಥರ ಆಕ್ರೋಶ ಕೇಳಿಬಂದ ಬಳಿಕ ಪೊಲೀಸರು ಶವವನ್ನು ಪೋಸ್ಟ್ ಮಾರ್ಟಂ ಮಾಡಲು ಕಳಿಸಿದ್ದಾರೆ. ಪೋಸ್ಟ್ ಮಾರ್ಟಂ ವರದಿಯಲ್ಲಿ ಮಹಿಳೆಯನ್ನು ಅತ್ಯಾಚಾರಗೈದು ಕೊಲೆಗೈದಿದ್ದಲ್ಲದೆ, ಗುಪ್ತಾಂಗ ಮತ್ತು ಕಾಲುಗಳಿಗೆ ಗಾಯಗೊಳಿಸಿರುವುದು ಕಂಡುಬಂದಿದೆ.
ಆಬಳಿಕ ಮಹಿಳೆಯ ಗ್ಯಾಂಗ್ ರೇಪ್ ಮತ್ತು ಕೊಲೆಗೈದಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಟುಂಬ ನೀಡಿದ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ ಠಾಣಾಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಪ್ರಕರಣ ಸಂಬಂಧಿಸಿ ಇಬ್ಬರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಆಕ್ರೋಶ ಕೇಳಿಬರುತ್ತಿದ್ದಂತೆ, ಬಧೌನ್ ಜಿಲ್ಲೆಯ ಎಸ್ಪಿ ಸಂಕಲ್ಪ್ ಶರ್ಮಾ, ಘಟನೆಯ ತನಿಖೆಗೆ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಿದ್ದಾರೆ.
A 50-year-old woman was allegedly gang-raped and brutalised in the Ughaiti area of Uttar Pradesh's Badaun district, police have said. The woman had gone to the temple but never returned. The post-mortem report of the deceased confirmed rape, injury in her private parts, and fracture in her legs.
10-08-25 06:27 pm
Bangalore Correspondent
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm