ಬ್ರೇಕಿಂಗ್ ನ್ಯೂಸ್
12-06-26 11:58 am HK News Staffer ಕ್ರೈಂ
ಶಿವಮೊಗ್ಗ, ಜೂನ್ 12: ಜೈಲಿನಲ್ಲಿರುವ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕೊಲೆಗೆ ಸುಪಾರಿ ನೀಡಿದ್ದು, ಬುರ್ಖಾ ಧರಿಸಿ ಮಹಿಳೆ ಹತ್ಯೆಗೆ ಬಂದಿದ್ದ ಮೂವರು ಯುವಕರನ್ನು ಸಾರ್ವಜನಿಕರೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ನಗರದ ಕೆ.ಆರ್ ಪುರಂ ರಸ್ತೆಯಲ್ಲಿ ನಡೆದಿದೆ.
ಕೊಲೆ ಪ್ರಕರಣವೊಂದರಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿರುವ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕೊಲೆಗೆ ಸುಪಾರಿ ನೀಡಿದ್ದ. ಆತನ ಸಹಚರರಾದ ಅಸ್ಲಾಂ(25), ಮಹೇಶ್ (20), ದರ್ಶನ್ (20) ಮತ್ತು ಮುನ್ನಾ(24) ಎಂಬ ನಾಲ್ವರು ಯುವಕರು ತಮ್ಮ ಗುರುತು ತಿಳಿಯದಂತೆ ಬುರ್ಖಾ ಧರಿಸಿ ಕೆ.ಆರ್. ಪುರಂನಲ್ಲಿರುವ ಮಹಿಳೆಯ ಮನೆ ಬಳಿ ಬಂದಿದ್ದಾರೆ.
ಆದರೆ, ಇವರ ವಿಚಿತ್ರ ನಡವಳಿಕೆ ಮತ್ತು ಚಲನವಲನಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳಿಗೆ ಅನುಮಾನ ಬಂದಿದೆ. ಕೂಡಲೇ ಸಾರ್ವಜನಿಕರು ಒಟ್ಟು ಸೇರಿ ನಾಲ್ವರನ್ನು ಸುತ್ತುವರೆದು ತರಾಟೆಗೆ ತೆಗೆದುಕೊಂಡಿದ್ದಾರೆ. ತಪಾಸಣೆ ನಡೆಸಿದಾಗ ಬುರ್ಖಾ ಒಳಗಿದ್ದ ಗಂಡಸರ ಅಸಲಿ ಮುಖವಾಡ ಬಯಲಾಗಿದ್ದು, ನಾಲ್ವರಿಗೂ ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಈ ನಡುವೆ ಮುನ್ನಾ ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾನೆ. ಉಳಿದ ಮೂವರು ಆರೋಪಿಗಳಾದ ಅಸ್ಲಾಂ, ಮಹೇಶ್ ಮತ್ತು ದರ್ಶನ್ನನ್ನು ಹಿಡಿದು ದೊಡ್ಡಪೇಟೆ ಪೊಲೀಸರಿಗೆ ಒಪ್ಪಿಸಲಾಗಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದಾಗಿ ಮಹಿಳೆಯ ಪ್ರಾಣ ಉಳಿದಿದೆ ಎಂದು ಕುಟುಂಬದವರು ಹೇಳಿದ್ದಾರೆ. ಬುರ್ಖಾ ಧರಿಸಿ ಇಂತಹ ಅಪರಾಧ ಕೃತ್ಯಗಳಿಗೆ ಮುಂದಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಪತ್ನಿ ತನ್ನನ್ನು ನೋಡಲು ಜೈಲಿಗೆ ಬರುತ್ತಿಲ್ಲ ಮತ್ತು ಖರ್ಚಿಗೆ ಹಣ ನೀಡುತ್ತಿಲ್ಲ ಎಂಬ ಕಾರಣಕ್ಕೆ ಜೈಲಿನಲ್ಲಿರುವ ಪತಿ, ತನ್ನ ಪತ್ನಿ ತಬಸ್ಸುಮ್ ಬಾನು ವಿರುದ್ಧ ತೀವ್ರ ಆಕ್ರೋಶಗೊಂಡಿದ್ದ. ಸೇಡು ತೀರಿಸಿಕೊಳ್ಳಲು ಜೈಲಿನಿಂದಲೇ ತನ್ನ ಸಹಚರರಿಗೆ ಪತ್ನಿಯ ಹತ್ಯೆಗೆ ಸುಪಾರಿ ನೀಡಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತಲೆಮರೆಸಿಕೊಂಡ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am