ಬ್ರೇಕಿಂಗ್ ನ್ಯೂಸ್
13-06-26 08:43 pm HK News Staffer ಕ್ರೈಂ
ಬೆಂಗಳೂರು, ಜೂನ್ 13: ನಿವೇಶನ ಇರುವುದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಹಕಾರಿ ಬ್ಯಾಂಕಿನಿಂದ 70 ಲಕ್ಷ ರೂಪಾಯಿ ಸಾಲ ಪಡೆದು ಕಂತು ಪಾವತಿಸದೆ ವಂಚಿಸಿದ ಆರೋಪದಡಿ ಸಾಲಗಾರ ಹಾಗೂ ಮಾಜಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ ಮೂವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ ನೀಡಿದ ದೂರಿನ ಮೇರೆಗೆ ಸಾಲ ಪಡೆದಿದ್ದ ಪ್ರಕಾಶ್, ಹೆಚ್. ರಘು ಎಂ. ಆರ್., ಅಂದಿನ ಶಾಖಾ ವ್ಯವಸ್ಥಾಪಕ (ಪ್ರಭಾರ) ನಾಗರಾಜು ವಿರುದ್ಧ ಪ್ರಕರಣ ದಾಖಲಾಗಿದೆ.
ಸಹಕಾರಿ ಬ್ಯಾಂಕ್ ಸದಸ್ಯನಾಗಿದ್ದ ಪ್ರಕಾಶ್, 2023ರಲ್ಲಿ ಒಂದು ಕೋಟಿ ರೂಪಾಯಿ ಸಾಲ ನೀಡುವಂತೆ ಅರ್ಜಿ ಹಾಕಿದ್ದರು. ಈ ಕುರಿತು ಆಡಳಿತ ಮಂಡಳಿಯು ಸಭೆ ನಡೆಸಿ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ಕಾನೂನು ಅಭಿಪ್ರಾಯಕ್ಕೆ ಒಳಪಟ್ಟು ಮಂಜೂರು ಮಾಡಿತ್ತು. ದಾಖಲಾತಿ ಪರಿಶೀಲಿಸಿ ಸಾಲ ಮಂಜೂರು ಮಾಡದಂತೆ ಬ್ಯಾಂಕಿನ ಕಾನೂನು ಸಲಹೆಗಾರ ರಮೇಶ್ ವರದಿ ನೀಡಿದ್ದರು. ಈ ವರದಿಯನ್ನು ನಾಗರಾಜ್ ಅವರು ಆಡಳಿತ ಮಂಡಳಿ ಮುಂದೆ ಪ್ರಸ್ತಾಪಿಸದೆ ಎರಡನೇ ಕಾನೂನು ವರದಿಗಾಗಿ ಮತ್ತೋರ್ವ ಕಾನೂನು ಸಲಹೆಗಾರರನ್ನ ಸಂಪರ್ಕಿಸಿ ಅವರಿಂದ ತಮಗೆ ಪೂರಕ ರೀತಿ ವರದಿ ತರಿಸಿಕೊಂಡಿದ್ದರು.
ಸಾಲ ನೀಡುವಾಗ ಅರ್ಜಿದಾರರಿಂದ ಅಗತ್ಯ ದಾಖಲಾತಿ ಪಡೆಯದೆ 70 ಲಕ್ಷ ಸಾಲ ಮಂಜೂರು ಮಾಡಿದ್ದರು. ಸಾಲ ಪಡೆದ ಆರೋಪಿಯು ಮಾಸಿಕ ಕಂತು ಸರಿಯಾಗಿ ಕಟ್ಟದಿದ್ದಾಗ ಸಾಲ ಪಡೆಯಲು ಅಡ ಇಟ್ಟಿದ್ದ ನಿವೇಶನ ಪರಿಶೀಲನೆಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಕಳುಹಿಸಲಾಗಿತ್ತು.
ಪರಿಶೀಲನೆ ವೇಳೆ ನಿವೇಶನವು ಅರ್ಜಿದಾರನ ಮಾಲೀಕತ್ವ ನಿವೇಶನ ಇಲ್ಲದಿರುವುದು ಗೊತ್ತಾಗಿದೆ. ಆರೋಪಿ ಪ್ರಕಾಶ್, ನಿವೇಶನವಿದೆ ಎಂದು ರಮೇಶ್ ಎಂಬುವರಿಂದ ನಕಲಿ ಆರ್ ಟಿಸಿ ಸೃಷ್ಟಿಸಿದರೆ, ರಘು ಎಂಬಾತನ ಮೂಲಕ ಕ್ರಯಪತ್ರ ತಯಾರಿಸಿಕೊಂಡಿದ್ದರು. ಆರ್.ಆರ್. ನಗರದ ಜಿಬಿಎ ಸಿಬ್ಬಂದಿಗಳೊಂದಿಗೆ ಶಾಮೀಲಾಗಿ ನಕಲಿ ಬಿಬಿಎಂಪಿ ಖಾತಾ ಮಾಡಿಸಿಕೊಂಡು ನಿವೇಶನ ಕೊಳ್ಳಲು ಬ್ಯಾಂಕಿಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸಿರುವುದು ಕಂಡು ಬಂದಿದೆ.
ಜಾಗವೇ ಇಲ್ಲದ ನಿವೇಶನಕ್ಕೆ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಿಗೆ ವಂಚನೆ ಮಾಡಲಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಪ್ರಸನ್ನ ಅವರು ಕೋರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ಧಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am