ಬ್ರೇಕಿಂಗ್ ನ್ಯೂಸ್
13-06-26 08:43 pm HK News Staffer ಕ್ರೈಂ
ಬೆಂಗಳೂರು, ಜೂನ್ 13: ನಿವೇಶನ ಇರುವುದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಹಕಾರಿ ಬ್ಯಾಂಕಿನಿಂದ 70 ಲಕ್ಷ ರೂಪಾಯಿ ಸಾಲ ಪಡೆದು ಕಂತು ಪಾವತಿಸದೆ ವಂಚಿಸಿದ ಆರೋಪದಡಿ ಸಾಲಗಾರ ಹಾಗೂ ಮಾಜಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ ಮೂವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ ನೀಡಿದ ದೂರಿನ ಮೇರೆಗೆ ಸಾಲ ಪಡೆದಿದ್ದ ಪ್ರಕಾಶ್, ಹೆಚ್. ರಘು ಎಂ. ಆರ್., ಅಂದಿನ ಶಾಖಾ ವ್ಯವಸ್ಥಾಪಕ (ಪ್ರಭಾರ) ನಾಗರಾಜು ವಿರುದ್ಧ ಪ್ರಕರಣ ದಾಖಲಾಗಿದೆ.
ಸಹಕಾರಿ ಬ್ಯಾಂಕ್ ಸದಸ್ಯನಾಗಿದ್ದ ಪ್ರಕಾಶ್, 2023ರಲ್ಲಿ ಒಂದು ಕೋಟಿ ರೂಪಾಯಿ ಸಾಲ ನೀಡುವಂತೆ ಅರ್ಜಿ ಹಾಕಿದ್ದರು. ಈ ಕುರಿತು ಆಡಳಿತ ಮಂಡಳಿಯು ಸಭೆ ನಡೆಸಿ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ಕಾನೂನು ಅಭಿಪ್ರಾಯಕ್ಕೆ ಒಳಪಟ್ಟು ಮಂಜೂರು ಮಾಡಿತ್ತು. ದಾಖಲಾತಿ ಪರಿಶೀಲಿಸಿ ಸಾಲ ಮಂಜೂರು ಮಾಡದಂತೆ ಬ್ಯಾಂಕಿನ ಕಾನೂನು ಸಲಹೆಗಾರ ರಮೇಶ್ ವರದಿ ನೀಡಿದ್ದರು. ಈ ವರದಿಯನ್ನು ನಾಗರಾಜ್ ಅವರು ಆಡಳಿತ ಮಂಡಳಿ ಮುಂದೆ ಪ್ರಸ್ತಾಪಿಸದೆ ಎರಡನೇ ಕಾನೂನು ವರದಿಗಾಗಿ ಮತ್ತೋರ್ವ ಕಾನೂನು ಸಲಹೆಗಾರರನ್ನ ಸಂಪರ್ಕಿಸಿ ಅವರಿಂದ ತಮಗೆ ಪೂರಕ ರೀತಿ ವರದಿ ತರಿಸಿಕೊಂಡಿದ್ದರು.
ಸಾಲ ನೀಡುವಾಗ ಅರ್ಜಿದಾರರಿಂದ ಅಗತ್ಯ ದಾಖಲಾತಿ ಪಡೆಯದೆ 70 ಲಕ್ಷ ಸಾಲ ಮಂಜೂರು ಮಾಡಿದ್ದರು. ಸಾಲ ಪಡೆದ ಆರೋಪಿಯು ಮಾಸಿಕ ಕಂತು ಸರಿಯಾಗಿ ಕಟ್ಟದಿದ್ದಾಗ ಸಾಲ ಪಡೆಯಲು ಅಡ ಇಟ್ಟಿದ್ದ ನಿವೇಶನ ಪರಿಶೀಲನೆಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಕಳುಹಿಸಲಾಗಿತ್ತು.
ಪರಿಶೀಲನೆ ವೇಳೆ ನಿವೇಶನವು ಅರ್ಜಿದಾರನ ಮಾಲೀಕತ್ವ ನಿವೇಶನ ಇಲ್ಲದಿರುವುದು ಗೊತ್ತಾಗಿದೆ. ಆರೋಪಿ ಪ್ರಕಾಶ್, ನಿವೇಶನವಿದೆ ಎಂದು ರಮೇಶ್ ಎಂಬುವರಿಂದ ನಕಲಿ ಆರ್ ಟಿಸಿ ಸೃಷ್ಟಿಸಿದರೆ, ರಘು ಎಂಬಾತನ ಮೂಲಕ ಕ್ರಯಪತ್ರ ತಯಾರಿಸಿಕೊಂಡಿದ್ದರು. ಆರ್.ಆರ್. ನಗರದ ಜಿಬಿಎ ಸಿಬ್ಬಂದಿಗಳೊಂದಿಗೆ ಶಾಮೀಲಾಗಿ ನಕಲಿ ಬಿಬಿಎಂಪಿ ಖಾತಾ ಮಾಡಿಸಿಕೊಂಡು ನಿವೇಶನ ಕೊಳ್ಳಲು ಬ್ಯಾಂಕಿಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸಿರುವುದು ಕಂಡು ಬಂದಿದೆ.
ಜಾಗವೇ ಇಲ್ಲದ ನಿವೇಶನಕ್ಕೆ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಿಗೆ ವಂಚನೆ ಮಾಡಲಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಪ್ರಸನ್ನ ಅವರು ಕೋರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ಧಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm