ಬ್ರೇಕಿಂಗ್ ನ್ಯೂಸ್
15-06-26 11:27 am HK News Staffer ಕ್ರೈಂ
ಹಾಸನ, ಜೂನ್ 15: ಧರ್ಮಸ್ಥಳದ ತೀರ್ಥಯಾತ್ರೆ ಮುಗಿಸಿ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದಾಗ ಮಾರ್ಗಮಧ್ಯೆ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಈಜಾಡಲು ಐಬ ಹೋಗಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಹಾಸನ ತಾಲೂಕಿನ ಶೆಟ್ಟಿಹಳ್ಳಿ ಚರ್ಚ್ ಸಮೀಪ ಭಾನುವಾರ ಸಂಜೆ ದುರ್ಘಟನ ಸಂಭವಿಸಿದೆ.
ಬೆಂಗಳೂರಿನ ಗಿರಿನಗರದ ಮಣಿಕಂಠ ಚರಣ (20), ಮಿಲನ್ (23) ಹಾಗೂ ಬ್ಯಾಟರಾಯನಪುರದ (20) ಮೃತ ದುರ್ವೈವಿಗಳು. ಬೆಂಗಳೂರಿನ ವಿವಿಧ ಬಡಾವಣೆಗಳ 10 ಮಂದಿ ಸ್ನೇಹಿತರು ಟೆಂಪೋ ಟ್ರಾವೆರ್ಸ್ ನಲ್ಲಿ ಶನಿವಾರ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥಸ್ವಾಮಿ ದರ್ಶನ ಪಡೆದು ಭಾನುವಾರ ಬರುವಾಗ ಮಾರ್ಗಮಧ್ಯೆ ಹಾಸನದಿಂದ 14 ಕಿ.ಮೀ. ದೂರದ ಶೆಟ್ಟಿಹಳ್ಳಿ ಬಳಿ ಹೇಮಾವತಿ ಜಲಾಶಯದ ಹಿನ್ನೀರಿನ ಐತಿಹಾಸಿಕ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ತೆರಳಿದ್ದರು.
ಮಧ್ಯಾಹ್ನ 3 ಗಂಟೆಗೆ ತೆರಳಿದ್ದು ಬಳಿಕ ಚರ್ಚ್ ಸುತ್ತಲೂ ಆವರಿಸಿರುವ ಹಿನ್ನೀರಿನಲ್ಲಿ ಈಜಾಡಲು ನೀರಿಗಿಳಿದಿದ್ದಾರೆ. ನೀರಿನ ಆಳ ತಿಳಿಯದೆ, ಈಜಾಡುತ್ತಾ ಹೋದ ಮೂವರು ಯುವಕರು ಮುಳುಗಿದ್ದಾರೆ. ಅವರನ್ನು ಸ್ನೇಹಿತರು ರಕ್ಷಿಸಲು ಹರಸಾಹಸಪಟ್ಟರೂ ಸಾಧ್ಯವಾಗದೆ ಸಹಾಯಕ್ಕಾಗಿ ಕೂಗಿದ್ದಾರೆ. ಸ್ಥಳೀಯರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಮೂವರೂ ನೀರಿನಲ್ಲಿ ಕಣ್ಮರೆಯಾಗಿದ್ದರು. ಮಾಹಿತಿ ಪಡೆದ ಗೊರೂರು ಠಾಣೆ ಪೊಲೀಸರು ಅಗ್ನಿ ಶಾಮಕ ದಳದೊಂದಿಗೆ ತೆರಳಿ ಸಂಜೆ 6 ಗಂಟೆ ವೇಳೆಗೆ ಮೂವರ ಮೃತದೇಹಗಳನ್ನೂ ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಹಾಸನದ ಹಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ತಲುಪಿಸಿದ್ದಾರೆ.
ನೀರಿಗೆ ಇಳಿದಿದ್ದ ಮೃತ ಮೂವರು ಯುವಕರಿಗೆ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ. ನೀರಿನ ಆಳ, ಸುಳಿಯ ಅರಿವಿಲ್ಲದೆ ಅವರು ನದಿಯ ಆಳಕ್ಕೆ ಇಳಿದು ಮೃತಪಟ್ಟಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm