ಬ್ರೇಕಿಂಗ್ ನ್ಯೂಸ್
15-06-26 11:27 am HK News Staffer ಕ್ರೈಂ
ಹಾಸನ, ಜೂನ್ 15: ಧರ್ಮಸ್ಥಳದ ತೀರ್ಥಯಾತ್ರೆ ಮುಗಿಸಿ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದಾಗ ಮಾರ್ಗಮಧ್ಯೆ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಈಜಾಡಲು ಐಬ ಹೋಗಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಹಾಸನ ತಾಲೂಕಿನ ಶೆಟ್ಟಿಹಳ್ಳಿ ಚರ್ಚ್ ಸಮೀಪ ಭಾನುವಾರ ಸಂಜೆ ದುರ್ಘಟನ ಸಂಭವಿಸಿದೆ.
ಬೆಂಗಳೂರಿನ ಗಿರಿನಗರದ ಮಣಿಕಂಠ ಚರಣ (20), ಮಿಲನ್ (23) ಹಾಗೂ ಬ್ಯಾಟರಾಯನಪುರದ (20) ಮೃತ ದುರ್ವೈವಿಗಳು. ಬೆಂಗಳೂರಿನ ವಿವಿಧ ಬಡಾವಣೆಗಳ 10 ಮಂದಿ ಸ್ನೇಹಿತರು ಟೆಂಪೋ ಟ್ರಾವೆರ್ಸ್ ನಲ್ಲಿ ಶನಿವಾರ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥಸ್ವಾಮಿ ದರ್ಶನ ಪಡೆದು ಭಾನುವಾರ ಬರುವಾಗ ಮಾರ್ಗಮಧ್ಯೆ ಹಾಸನದಿಂದ 14 ಕಿ.ಮೀ. ದೂರದ ಶೆಟ್ಟಿಹಳ್ಳಿ ಬಳಿ ಹೇಮಾವತಿ ಜಲಾಶಯದ ಹಿನ್ನೀರಿನ ಐತಿಹಾಸಿಕ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ತೆರಳಿದ್ದರು.
ಮಧ್ಯಾಹ್ನ 3 ಗಂಟೆಗೆ ತೆರಳಿದ್ದು ಬಳಿಕ ಚರ್ಚ್ ಸುತ್ತಲೂ ಆವರಿಸಿರುವ ಹಿನ್ನೀರಿನಲ್ಲಿ ಈಜಾಡಲು ನೀರಿಗಿಳಿದಿದ್ದಾರೆ. ನೀರಿನ ಆಳ ತಿಳಿಯದೆ, ಈಜಾಡುತ್ತಾ ಹೋದ ಮೂವರು ಯುವಕರು ಮುಳುಗಿದ್ದಾರೆ. ಅವರನ್ನು ಸ್ನೇಹಿತರು ರಕ್ಷಿಸಲು ಹರಸಾಹಸಪಟ್ಟರೂ ಸಾಧ್ಯವಾಗದೆ ಸಹಾಯಕ್ಕಾಗಿ ಕೂಗಿದ್ದಾರೆ. ಸ್ಥಳೀಯರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಮೂವರೂ ನೀರಿನಲ್ಲಿ ಕಣ್ಮರೆಯಾಗಿದ್ದರು. ಮಾಹಿತಿ ಪಡೆದ ಗೊರೂರು ಠಾಣೆ ಪೊಲೀಸರು ಅಗ್ನಿ ಶಾಮಕ ದಳದೊಂದಿಗೆ ತೆರಳಿ ಸಂಜೆ 6 ಗಂಟೆ ವೇಳೆಗೆ ಮೂವರ ಮೃತದೇಹಗಳನ್ನೂ ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಹಾಸನದ ಹಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ತಲುಪಿಸಿದ್ದಾರೆ.
ನೀರಿಗೆ ಇಳಿದಿದ್ದ ಮೃತ ಮೂವರು ಯುವಕರಿಗೆ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ. ನೀರಿನ ಆಳ, ಸುಳಿಯ ಅರಿವಿಲ್ಲದೆ ಅವರು ನದಿಯ ಆಳಕ್ಕೆ ಇಳಿದು ಮೃತಪಟ್ಟಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm