ಬ್ರೇಕಿಂಗ್ ನ್ಯೂಸ್
16-06-26 08:32 pm HK News Staffer ಕ್ರೈಂ
ನಾಗ್ಪುರ, ಜೂನ್ 16: ಭಾರತೀಯ ವಾಯುಪಡೆ ಅಧಿಕಾರಿಯೊಬ್ಬರ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದಲ್ಲದೆ, ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಸಂತ್ರಸ್ತ ಮಹಿಳೆ (24) ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದು, ಆಕೆಯ ಹಳೆಯ ಸಹಪಾಠಿ ಅಯಾಜ್ ತಾಜ್ ಮದಾರೆ (26) ಎಂಬಾತ ಆಸ್ತಿ ವ್ಯವಹಾರದ ನೆಪದಲ್ಲಿ ಹೋಟೆಲ್ ಒಂದಕ್ಕೆ ಕರೆಸಿಕೊಂಡಿದ್ದ. ಅಲ್ಲಿ ಮಹಿಳೆಗೆ ಅಮಲು ಪದಾರ್ಥ ಬೆರೆಸಿದ ಜ್ಯೂಸ್ ನೀಡಿ, ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಈ ಸಂದರ್ಭದ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಚಿತ್ರೀಕರಿಸಿಕೊಂಡು ಬ್ಲಾಕ್ಮೇಲ್ ಮಾಡಿದ್ದಾಗಿ ದೂರು ನೀಡಲಾಗಿದೆ.
ಆರೋಪಿ ಅಯಾಜ್ ಅಶ್ಲೀಲ ವಿಡಿಯೋಗಳನ್ನು ಇಟ್ಟುಕೊಂಡು ಮಹಿಳೆಯನ್ನು ಬ್ಲ್ಯಾಕ್ಮೇಲ್ ಮಾಡಿದ್ದು, ಹಲವು ಬಾರಿ ಲೈಂಗಿಕ ಶೋಷಣೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ ಆಕೆಯಿಂದ ಬರೋಬ್ಬರಿ 3.09 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದಾನೆ. ಮೇ 2025 ರಲ್ಲಿ ಆರೋಪಿಯು ಮಹಿಳೆಯನ್ನು ಕಲ್ಮೇಶ್ವರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ತನ್ನ ಸಹಚರರಾದ ಅಮೀನ್ ಶೇಖ್ ಮತ್ತು ಹಜರತ್ ಮೌಲಾನಾ ಎಂಬವರ ಜೊತೆ ಸೇರಿ ಬಲವಂತ ಮತಾಂತರಿಸಲು ವಿಧಿ ವಿಧಾನಗಳನ್ನು ನೆರವೇರಿಸಿದ್ದಾನೆ. ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯು 'ನನ್ನನ್ನು ಬಿಟ್ಟುಬಿಡಿ' ಎಂದು ಗೋಗರೆಯುತ್ತಿದ್ದರೂ, ಆರೋಪಿ ಆಕೆಯ ಕೈಗಳನ್ನು ಬಲವಂತವಾಗಿ ಹಿಡಿದು ಧಾರ್ಮಿಕ ಶ್ಲೋಕಗಳನ್ನು ಪಠಿಸುತ್ತಿರುವುದು ಕಂಡುಬಂದಿದೆ.
ಇತ್ತೀಚೆಗೆ ಕರ್ತವ್ಯ ಮುಗಿಸಿ ಮನೆಗೆ ಮರಳಿದ ತನ್ನ ಪತಿಗೆ ಮಹಿಳೆ ಈ ಎಲ್ಲಾ ವಿಷಯಗಳನ್ನು ತಿಳಿಸಿದ್ದು, ತಕ್ಷಣವೇ ಸೋನೆಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಅತ್ಯಾಚಾರ, ಸುಲಿಗೆ, ಬಲವಂತದ ಧರ್ಮಾಂತರ ಹಾಗೂ ಮಹಾರಾಷ್ಟ್ರದ ಬ್ಲ್ಯಾಕ್ ಮ್ಯಾಜಿಕ್ (ಮಾಟಮಂತ್ರ ನಿಷೇಧ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಪ್ರಮುಖ ಆರೋಪಿ ಅಯಾಜ್ ಮದಾರೆ ಮತ್ತು ಅಮೀನ್ ಶೇಖ್ನನ್ನು ಬಂಧಿಸಲಾಗಿದ್ದು, ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ತಲೆಮರೆಸಿಕೊಂಡ ಮೂರನೇ ಆರೋಪಿ ಹಜರತ್ ಮೌಲಾನಾ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am