ಬ್ರೇಕಿಂಗ್ ನ್ಯೂಸ್
17-06-26 01:41 pm HK News Staffer ಕ್ರೈಂ
ಉಳ್ಳಾಲ, ಜೂ.17: ನಾಲ್ಕು ಮುಸ್ಲಿಂ ಯುವತಿಯರು ಚಲಿಸುತ್ತಿದ್ದ ಸ್ಕೂಟರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಾರ್ಕಿಂಗ್ ಮಾಡಲಾಗಿದ್ದ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಘಟನೆ ನಿನ್ನೆ ರಾತ್ರಿ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ. ಯುವತಿಯರು ಹೆಲ್ಮೆಟ್ ಧರಿಸದೆ ಸ್ಕೂಟರಲ್ಲಿ ನಾಲ್ವರು ಸವಾರಿ ಮಾಡಿ ಹುಚ್ಚಾಟ ಮೆರೆದಿದ್ದಲ್ಲದೆ, ರಸ್ತೆ ಬದಿಗೆ ಬಿದ್ದಿರುವ ಘಟನೆಯ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಿನ್ನೆ ರಾತ್ರಿ ಒಂಭತ್ತು ಗಂಟೆ ಸುಮಾರಿಗೆ ತೊಕ್ಕೊಟ್ಟು ಒಳಪೇಟೆಯ ಎಬಿಸಿ ಕ್ಲಬ್ ಬಳಿ ಘಟನೆ ನಡೆದಿದೆ. ಉಳ್ಳಾಲ ಮೇಲಂಗಡಿಯಿಂದ ಟಿ.ಸಿ ರೋಡ್ ಮಾರ್ಗವಾಗಿ ತೊಕ್ಕೊಟ್ಟು ಒಳಪೇಟೆಗೆ ಸ್ಕೂಟರಲ್ಲಿ ಬರುತ್ತಿದ್ದ ಯುವತಿಯರು ರಸ್ತೆಯ ಹಂಪ್ಸ್ ದಾಟುವಾಗ ನಿಯಂತ್ರಣ ತಪ್ಪಿದ್ದು, ಸ್ಕೂಟರನ್ನ ಎಬಿಸಿ ಕ್ಲಬ್ ಕಡೆಗೆ ನುಗ್ಗಿಸಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆಸಿ, ಕೆಳಗಡೆ ಬಿದ್ದಿದ್ದಾರೆ.




ಘಟನೆ ನಡೆದ ವೇಳೆ ಎಬಿಸಿ ಕ್ಲಬ್ ಒಳಗಡೆ ಸೇರಿದ್ದ ಯುವಕರು ಹೊರಗೆ ಓಡಿ ಬಂದಿದ್ದು, ಸ್ಕೂಟರಿಂದ ಕೆಳಗಡೆ ಬಿದ್ದಿದ್ದ ಯುವತಿಯರನ್ನ ಮೇಲಕ್ಕೆತ್ತಿ ಉಪಚರಿಸಿದ್ದಾರೆ.
ಘಟನೆಯ ವೀಡಿಯೋ ಸಿಸಿ ಕ್ಯಾಮೆರದಲ್ಲಿ ದಾಖಲಾಗಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ. ಉಳ್ಳಾಲ ಮೇಲಂಗಡಿಯ ಅಪ್ರಾಪ್ತ ಕಾಲೇಜು ಯುವತಿಯರು ಸ್ಕೂಟರಲ್ಲಿ ಸವಾರಿ ನಡೆಸಿರುವುದಾಗಿ ಮಾಹಿತಿ ಲಭಿಸಿದೆ. ಏನೋ ಅದೃಷ್ಟವಶಾತ್ ಘಟನೆಯಿಂದ ಸ್ಕೂಟರ್ ನಲ್ಲಿದ್ದ ಯುವತಿಯರು ಸೇರಿದಂತೆ ಪಾದಚಾರಿಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ.
ಘಟನೆಯಿಂದ ಎಬಿಸಿ ಕ್ಲಬ್ ಸದಸ್ಯರ ಎರಡು ದ್ವಿಚಕ್ರ ವಾಹನಗಳಿಗೆ ಹಾನಿಯುಂಟಾಗಿದೆ. ಸಂಚಾರಿ ನಿಯಮಗಳನ್ನ ಗಾಳಿಗೆ ತೂರಿ ಹುಚ್ಚಾಟ ಮೆರೆದ ಯುವತಿಯರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am