ಬ್ರೇಕಿಂಗ್ ನ್ಯೂಸ್
20-06-26 09:13 pm HK News Staffer ಕ್ರೈಂ
ಮಂಗಳೂರು, ಜೂನ್ 20 : ಪತ್ನಿಯನ್ನು ಪತಿಯೇ ಕತ್ತಿಯಿಂದ ಕಡಿದು ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಪೇಟೆಯ ಕಜೆ ಎಂಬಲ್ಲಿ ನಡೆದಿದ್ದು ಎರಡು ವರ್ಷದ ಕಂದಮ್ಮ ಅನಾಥವಾಗಿ ಪರಿಣಮಿಸಿದೆ.
ಬಜಗೋಳಿ ನಿವಾಸಿ ದಿನೇಶ್ ಹಾಗೂ ಸಿದ್ದಕಟ್ಟೆ ನಿವಾಸಿ ಸಂಗೀತಾ ಮೃತಪಟ್ಟ ದಂಪತಿ. ಪತಿ ದಿನೇಶ್ ಮತ್ತು ಪತ್ನಿ ಸಂಗೀತಾ ನಡುವೆ ಆಗಿಂದಾಗ್ಗೆ ಕೌಟುಂಬಿಕ ಕಲಹ ನಡೆಯುತ್ತಿದ್ದು ಜೂನ್ 19ರ ರಾತ್ರಿ ಪತಿಯೇ ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ದಂಪತಿ ಇಬ್ಬರೂ ಸೇರಿಕೊಂಡು ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದರು. ಎರಡು ವರ್ಷದ ಮಗುವಿನೊಂದಿಗೆ ಕಜೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಒಂದು ತಿಂಗಳ ಹಿಂದೆ ಹೊಟೇಲ್ ಬಂದ್ ಮಾಡಿದ್ದು ದಂಪತಿ ನಡುವೆ ವೈಮನಸ್ಸಿನಿಂದ ಕಲಹ ಉಂಟಾಗಿತ್ತು. ಹೀಗಾಗಿ ಒಂದು ತಿಂಗಳಿನಿಂದ ದಿನೇಶ್ ಮನೆ ಬಿಟ್ಟು ತೆರಳಿದ್ದ. ನಿನ್ನೆ ಏಕಾಏಕಿ ಮನೆಗೆ ಮರಳಿದ್ದು ಪತ್ನಿಯ ಜೊತೆಗೆ ಜಗಳವಾಡಿ ಕತ್ತಿಯಿಂದ ಕಡಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ಇಂದು ಬೆಳಗ್ಗೆ ಮನೆಯಲ್ಲಿ ಯಾವುದೇ ಚಲನವಲನ ಇರಲಿಲ್ಲ. ಸಂಗೀತಾ ತವರು ಮನೆಯಿಂದ ಕರೆ ಮಾಡಿದಾಗ ಮೊಬೈಲ್ ಸ್ವೀಕರಿಸಿರಲಿಲ್ಲ. ಸಂಶಯದಿಂದ ಇವರ ಮನೆ ಕಡೆಗೆ ಬಂದಿದ್ದು ಒಳಗಿನಿಂದ ಬಾಗಿಲು ಹಾಕಿದ್ದನ್ನು ಒಡೆದು ನೋಡಿದಾಗ ಸಂಗೀತಾ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ, ದಿನೇಶ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಗು ತಾಯಿ ಮೃತಪಟ್ಟಿರುವುದನ್ನು ತಿಳಿಯದೆ ಎರಡು ವರ್ಷದ ಮಗು ಅತ್ತು ಅತ್ತು ಶವದ ಪಕ್ಕದಲ್ಲಿಯೇ ಮಲಗಿತ್ತು. ಕಡಬ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ದಂಪತಿ ದುರಂತ ಸಾವಿಗೀಡಾದ ಹಿನ್ನೆಲೆಯಲ್ಲಿ ಎರಡು ವರ್ಷದ ಹೆಣ್ಣು ಮಗು ಅನಾಥವಾಗಿದೆ.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm