ಬ್ರೇಕಿಂಗ್ ನ್ಯೂಸ್
22-06-26 12:53 pm HK News Staffer ಕ್ರೈಂ
ಮಂಗಳೂರು, ಜೂನ್ 22: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಸಮೀಪದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಟೋಲ್ಗೇಟ್ನಲ್ಲಿ ಟೋಲ್ ಶುಲ್ಕ ಪಾವತಿ ವಿಚಾರವಾಗಿ ಉದ್ಭವಿಸಿದ ವಿವಾದ ಭಾರೀ ಗಲಾಟೆಗೆ ತಿರುಗಿದ ಘಟನೆ ಬೆಳಕಿಗೆ ಬಂದಿದೆ. ಟೋಲ್ ಪಾವತಿಸುವುದನ್ನು ತಪ್ಪಿಸಲು ಕೆಲವು ವಾಹನಗಳು ಏಕಮುಖ ಸಂಚಾರ ನಿಯಮ ಉಲ್ಲಂಘಿಸಿ ನುಗ್ಗಿದಲ್ಲದೆ, ಸುರಕ್ಷತಾ ಬ್ಯಾರಿಯರ್ಗಳಿಗೆ ಡಿಕ್ಕಿ ಹೊಡೆದು ಹಾನಿಗೊಳಿಸಿರುವ ಆರೋಪ ಕೇಳಿಬಂದಿದೆ.
ಮಾಹಿತಿಯ ಪ್ರಕಾರ, ಸಿಪಿಐಎಂ ಪಕ್ಷದ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಬ್ರಹ್ಮರಕೂಟ್ಲು ಟೋಲ್ಗೇಟ್ಗೆ ಆಗಮಿಸಿತ್ತು. ಟೋಲ್ ಸಿಬ್ಬಂದಿ ನಿಯಮಾನುಸಾರ ಶುಲ್ಕ ಪಾವತಿಸುವಂತೆ ಸೂಚಿಸಿದಾಗ, ಚಾಲಕ ಮತ್ತು ವಾಹನದಲ್ಲಿದ್ದ ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ವಿವಾದ ತೀವ್ರಗೊಂಡ ಬಳಿಕ ಬಸ್ ಚಾಲಕ ಟೋಲ್ ಪಾವತಿಸದೇ ವಾಹನವನ್ನು ಮುಂದಕ್ಕೆ ಚಲಾಯಿಸಿದ್ದು, ಈ ವೇಳೆ ಟೋಲ್ಗೇಟ್ನ ಸುರಕ್ಷತಾ ಬೂಮ್ ಬ್ಯಾರಿಯರ್ಗೆ ಡಿಕ್ಕಿ ಹೊಡೆದ ಅಲ್ಲಿಂದ ತೆರಳಿದೆ.


ಇದಾದ ಬಳಿಕ ಅದೇ ತಂಡದೊಂದಿಗೆ ಸಂಚರಿಸುತ್ತಿದ್ದ ಇನ್ನೂ ಕೆಲವು ವಾಹನಗಳು ಸಹ ಟೋಲ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ, ಏಕಮುಖ ಸಂಚಾರ ಮಾರ್ಗದಲ್ಲೇ ವಾಹನಗಳನ್ನು ನುಗ್ಗಿಸಿ ನಿಯಮ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ.
ಘಟನೆಯ ವೇಳೆ ಟೋಲ್ ಸಿಬ್ಬಂದಿ ಮತ್ತು ವಾಹನದಲ್ಲಿದ್ದವರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಟೋಲ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರೂ ವಾಹನಗಳು ವೇಗವಾಗಿ ಸಾಗಿದ ಕಾರಣ ಗೊಂದಲ ಉಂಟಾಯಿತು ಎಂದು ಹೇಳಲಾಗಿದೆ.
ಇಡೀ ಘಟನೆ ಟೋಲ್ಗೇಟ್ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳ ಆಧಾರದ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಿಂದ ಟೋಲ್ಗೇಟ್ನ ಸುರಕ್ಷತಾ ವ್ಯವಸ್ಥೆಗೆ ಹಾನಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೂ ಅಡಚಣೆ ಉಂಟಾಗಿದೆ ಎನ್ನಲಾಗಿದೆ.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm