ಬ್ರೇಕಿಂಗ್ ನ್ಯೂಸ್
22-06-26 12:53 pm HK News Staffer ಕ್ರೈಂ
ಮಂಗಳೂರು, ಜೂನ್ 22: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಸಮೀಪದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಟೋಲ್ಗೇಟ್ನಲ್ಲಿ ಟೋಲ್ ಶುಲ್ಕ ಪಾವತಿ ವಿಚಾರವಾಗಿ ಉದ್ಭವಿಸಿದ ವಿವಾದ ಭಾರೀ ಗಲಾಟೆಗೆ ತಿರುಗಿದ ಘಟನೆ ಬೆಳಕಿಗೆ ಬಂದಿದೆ. ಟೋಲ್ ಪಾವತಿಸುವುದನ್ನು ತಪ್ಪಿಸಲು ಕೆಲವು ವಾಹನಗಳು ಏಕಮುಖ ಸಂಚಾರ ನಿಯಮ ಉಲ್ಲಂಘಿಸಿ ನುಗ್ಗಿದಲ್ಲದೆ, ಸುರಕ್ಷತಾ ಬ್ಯಾರಿಯರ್ಗಳಿಗೆ ಡಿಕ್ಕಿ ಹೊಡೆದು ಹಾನಿಗೊಳಿಸಿರುವ ಆರೋಪ ಕೇಳಿಬಂದಿದೆ.
ಮಾಹಿತಿಯ ಪ್ರಕಾರ, ಸಿಪಿಐಎಂ ಪಕ್ಷದ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಬ್ರಹ್ಮರಕೂಟ್ಲು ಟೋಲ್ಗೇಟ್ಗೆ ಆಗಮಿಸಿತ್ತು. ಟೋಲ್ ಸಿಬ್ಬಂದಿ ನಿಯಮಾನುಸಾರ ಶುಲ್ಕ ಪಾವತಿಸುವಂತೆ ಸೂಚಿಸಿದಾಗ, ಚಾಲಕ ಮತ್ತು ವಾಹನದಲ್ಲಿದ್ದ ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ವಿವಾದ ತೀವ್ರಗೊಂಡ ಬಳಿಕ ಬಸ್ ಚಾಲಕ ಟೋಲ್ ಪಾವತಿಸದೇ ವಾಹನವನ್ನು ಮುಂದಕ್ಕೆ ಚಲಾಯಿಸಿದ್ದು, ಈ ವೇಳೆ ಟೋಲ್ಗೇಟ್ನ ಸುರಕ್ಷತಾ ಬೂಮ್ ಬ್ಯಾರಿಯರ್ಗೆ ಡಿಕ್ಕಿ ಹೊಡೆದ ಅಲ್ಲಿಂದ ತೆರಳಿದೆ.


ಇದಾದ ಬಳಿಕ ಅದೇ ತಂಡದೊಂದಿಗೆ ಸಂಚರಿಸುತ್ತಿದ್ದ ಇನ್ನೂ ಕೆಲವು ವಾಹನಗಳು ಸಹ ಟೋಲ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ, ಏಕಮುಖ ಸಂಚಾರ ಮಾರ್ಗದಲ್ಲೇ ವಾಹನಗಳನ್ನು ನುಗ್ಗಿಸಿ ನಿಯಮ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ.
ಘಟನೆಯ ವೇಳೆ ಟೋಲ್ ಸಿಬ್ಬಂದಿ ಮತ್ತು ವಾಹನದಲ್ಲಿದ್ದವರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಟೋಲ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರೂ ವಾಹನಗಳು ವೇಗವಾಗಿ ಸಾಗಿದ ಕಾರಣ ಗೊಂದಲ ಉಂಟಾಯಿತು ಎಂದು ಹೇಳಲಾಗಿದೆ.
ಇಡೀ ಘಟನೆ ಟೋಲ್ಗೇಟ್ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳ ಆಧಾರದ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಿಂದ ಟೋಲ್ಗೇಟ್ನ ಸುರಕ್ಷತಾ ವ್ಯವಸ್ಥೆಗೆ ಹಾನಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೂ ಅಡಚಣೆ ಉಂಟಾಗಿದೆ ಎನ್ನಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am