ಬ್ರೇಕಿಂಗ್ ನ್ಯೂಸ್
23-06-26 02:15 pm HK News Staffer ಕ್ರೈಂ
ಮಂಗಳೂರು, ಜೂನ್ 23: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ದಿಢೀರ್ ಆಗಿ ಮತ್ತೆ ಬಜ್ಪೆ ಠಾಣೆಗೆ ಬಂದಿದ್ದಾರೆ. ಡಿವೈಎಸ್ಪಿ ರಾಜೀವ್ ಸಿಂಗ್, ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಸೇರಿದಂತೆ ಐವರು ಅಧಿಕಾರಿಗಳ ತಂಡ ಬಜ್ಪೆಗೆ ಆಗಮಿಸಿದೆ.
ಕೆಲವರಿಗೆ ನೋಟೀಸ್ ನೀಡಿ ವಿಚಾರಣೆಗೆ ಬರುವಂತೆ ಸೂಚಿಸಿದೆ ಎನ್ನುವ ಮಾಹಿತಿ ಇದೆ. ಅಧಿಕಾರಿಗಳು ಠಾಣೆಯಲ್ಲಿ ಬೀಡು ಬಿಟ್ಟಿದ್ದು, ಕೆಲವು ದಾಖಲಾತಿಗಳನ್ನು ಮುಂದಿಟ್ಟು ಶಂಕಿತರ ಮೇಲೆ ನಿಗಾ ಇಟ್ಟಿದ್ದಾರೆ. ಕಳೆದ ವರ್ಷ 2025ರ ಆಗಸ್ಟ್ 2ರಂದು ಮಂಗಳೂರು ಹೊರವಲಯದ ಸುರತ್ಕಲ್ ಮತ್ತು ಬಜ್ಪೆ ಠಾಣೆ ವ್ಯಾಪ್ತಿಯ 14 ಸ್ಥಳಗಳ ಮೇಲೆ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಒಯ್ದಿದ್ದರು ಎನ್ನಲಾಗಿತ್ತು. ಇದೀಗ ಒಂದು ವರ್ಷದ ಬಳಿಕ ತಂಡ ಮರಳಿದ್ದು ನಿಷೇಧಿತ ಪಿಎಫ್ಐ ಸಂಘಟನೆಯೊಂದಿಗೆ ಲಿಂಕ್ ಹೊಂದಿರುವ ಕೆಲವರನ್ನು ವಿಚಾರಣೆಗೆ ಕರೆಸಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರು ಸೇರಿ 12 ಮಂದಿಯನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ವಿದೇಶದಿಂದ ಫಂಡಿಂಗ್ ಆಗಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಎನ್ಐಎ ತನಿಖೆಗೆ ವಹಿಸಲಾಗಿತ್ತು. ಪ್ರಕರಣದಲ್ಲಿ ಬಂಧಿತ ಆರೋಪಿಗಳ ಬ್ಯಾಂಕ್ ಖಾತೆಗಳನ್ನು ತನಿಖೆಗೆ ಒಳಪಡಿಸಿದ್ದು ಸಂಶಯ ಬಂದ ಅಂಶಗಳನ್ನು ಆಧರಿಸಿ ತನಿಖೆ ಮುಂದುವರಿಸಲಾಗಿತ್ತು.
ಬಜಪೆ ಠಾಣೆ ವ್ಯಾಪ್ತಿಯ 10 ಕಡೆ ಹಾಗೂ ಸುರತ್ಕಲ್ ಠಾಣೆ ವ್ಯಾಪ್ತಿಯ ನಾಲ್ಕು ಕಡೆಗಳಲ್ಲಿ ಕೊಲೆ ಆರೋಪಿಗಳ ಮನೆ ಹಾಗೂ ಎಸ್ ಡಿಪಿಐ ಮುಖಂಡರ ಮನೆಗೆಲಳಿಗೆ ದಾಳಿ ನಡೆಸಿದ್ದರು. ವಶಕ್ಕೆ ಪಡೆದಿದ್ದ ಹಲವು ದಾಖಲೆಗಳನ್ನು ಪರಿಶೀಲಿಸಿರುವ ಅಧಿಕಾರಿಗಳು ವರ್ಷದ ನಂತರ ತನಿಖೆ ಸಕ್ರಿಯಗೊಳಿಸಿದ್ದಾರೆ. 2025 ರ ಮೇ 1ರಂದು ಬಜಪೆ ಬಳಿಯ ಕಿನ್ನಿಪದವು ಎಂಬಲ್ಲಿ ರಾತ್ರಿ ಎಂಟು ಗಂಟೆ ವೇಳೆಗೆ ಸುಹಾಸ್ ಶೆಟ್ಟಿ ಬರ್ಬರ ಹತ್ಯೆಯಾಗಿತ್ತು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am