ಬ್ರೇಕಿಂಗ್ ನ್ಯೂಸ್
24-06-26 05:57 pm HK News Staffer ಕ್ರೈಂ
ಲಕ್ನೋ, ಜೂನ್ 24: ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಸಂಗ್ರಹದಲ್ಲಿ 200 ಕೋಟಿ ಗೋಲ್ಮಾಲ್ ಆಗಿದೆಯೆಂಬ ವರದಿಗಳ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡವು 150 ಪುಟಗಳ ಪ್ರಾಥಮಿಕ ವರದಿಯನ್ನು ಉತ್ತರ ಪದೇಶ ಸರ್ಕಾರಕ್ಕೆ ಸಲ್ಲಿಸಿದೆ. ಮೂಲಗಳ ಪ್ರಕಾರ, ಅಯೋಧ್ಯೆ ಶ್ರೀರಾಮ ತೀರ್ಥಕ್ಷೇತ್ರ ಟ್ರಸ್ಟ್ನ ಯಾರಿಗೂ ಕ್ಲೀನ್ ಚಿಟ್ ನೀಡಿಲ್ಲ. ಜೊತೆಗೆ, 20ಕ್ಕೂ ಹೆಚ್ಚು ಜನರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಶಿಫಾರಸು ಮಾಡಿದೆ.
ಇದಲ್ಲದ, ಕಾಶಿ ವಿಶ್ವನಾಥ ಮಂದಿರದ ಮಾದರಿಯಲ್ಲಿ ಅಯೋಧ್ಯೆ ಆಡಳಿತದ ಮೇಲ್ವಿಚಾರಣೆಗೆ ಪ್ರತ್ಯೇಕ ಟ್ರಸ್ಟ್ ಪುನಾರಚಿಸಿ ಸಿಇಒ
ಮಾದರಿಯಲ್ಲಿ ಆಡಳಿತಾಧಿಕಾರಿ ನೇಮಕ ಮಾಡುವಂತೆ ಸೂಚಿಸಿದೆ. ಅಯೋಧ್ಯೆ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸಹಾಯಕ ರಾಮಶಂಕರ್ ಆಲಿಯಾಸ್ ಚಿನ್ನು ನಿವಾಸದಲ್ಲಿ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣ ವಶಪಡಿಸಿರುವುದನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮಂದಿರದಲ್ಲಿ 200 ಕೋಟಿ ರೂ. ಕಳವಾಗಿರುವ ಬಗ್ಗೆಯೂ ಅಂದಾಜಿಸಲಾಗಿದೆ.
ಇದು ಗೌಪ್ಯ ತನಿಖೆಯ ಪ್ರಾಥಮಿಕ ವರದಿಯಾಗಿದ್ದರಿಂದ ತನಿಖೆಯಲ್ಲಿ ಕಂಡುಬಂದ ಅಂಶಗಳನ್ನು ತನಿಖಾ ತಂಡ ಬಹಿರಂಗ ಮಾಡಿಲ್ಲ. ಹಾಗೆಯೇ ದೇಣಿಗೆ ಸಂಗ್ರಹ, ಎಣಿಕೆ ಹಾಗೂ ಮೇಲ್ವಿಚಾರಣೆಯಲ್ಲಿ ಲೋಪ ಎಸಗಿದವರ ವಿರುದ್ಧ ಕ್ರಮ ಜರುಗಿಸಲು ಶಿಫಾರಸು ಮಾಡಲಾಗಿದೆ. ಇದೇ ವೇಳೆ, ಒಂದು ವಾರದೊಳಗಾಗಿ ಅಂತಿಮ ವರದಿಯನ್ನು ಸಲ್ಲಿಸುವುದಾಗಿ ಲಖ್ನೋ ವಿಭಾಗದ ಆಯುಕ್ತ ವಿಜಯ್ ವಿಶ್ವಾಸ್ ನೇತೃತ್ವದ ಮೂವರು ಸದಸ್ಯರ ವಿಶೇಷ ತನಿಖಾ ತಂಡ ತಿಳಿಸಿದೆ.
ಅಯೋಧ್ಯೆ ರಾಮ ಮಂದಿರದ ದೇಣಿಗೆ ದುರುಪಯೋಗವಾಗಿದೆ ಎಂದು ಆರೋಪ ಭಾರೀ ವಿವಾದ ರೂಪ ಪಡೆಯುತ್ತಿದ್ದಂತೆ ಉತ್ತರ ಪ್ರದೇಶ ಸರ್ಕಾರ ತನಿಖಾ ತಂಡವನ್ನು ನೇಮಿಸಿ ವರದಿ ಸಲ್ಲಿಸಲು ಸೂಚಿಸಿತ್ತು. ಆದರೆ ತನಿಖಾ ವರದಿ ಬಗ್ಗೆ ಆಕ್ಷೇಯ ವ್ಯಕ್ತಪಡಿಸಿರುವ ಎಸ್ಪಿ ನಾಯಕ ದೀಪಕ್ ರಂಜನ್, ತನಿಖೆಯಲ್ಲಿ ಕೆಳಮಟ್ಟದ ವ್ಯಕ್ತಿಗಳನ್ನು ಮಾತ್ರ ಗುರಿಯಾಗಿಸಲಾಗಿದೆ. ಉನ್ನತ ಹಾಗೂ ಪ್ರಭಾವಿ ವ್ಯಕ್ತಿಗಳ ಬಗ್ಗೆ ತನಿಖೆ ನಡೆಸುವ ಗೊಡವೆಗೆ ಹೋಗಿಲ್ಲ. ಆದ್ದರಿಂದ ತನಿಖಾ ವರದಿಯಲ್ಲಿ ತಮಗೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ.
ತನಿಖಾ ವರದಿಯು ಅಯೋಧ್ಯೆ ರಾಮಮಂದಿರದ ಮೇಲ್ವಿಚಾರಣೆ ವ್ಯವಸ್ಥೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟಿಸಿದೆ. ಟ್ರಸ್ಟ್ ಅಧಿಕಾರಿಗಳು ಹುಂಡಿ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿರುವುದು ಗೋಚರಿಸಿರುವುದನ್ನು ಬೊಟ್ಟು ಮಾಡಿದೆ. ಅಲ್ಲದೆ, ದೇಗುಲಕ್ಕೆ ಟ್ರಸ್ಟ್ ಸಂಬಂಧಿಗಳೇ ಅಧಿಕಾರಿಗಳಾಗಿ ನೇಮಕವಾಗಿದ್ದು ಇವರಿಗೆ ಹಣ ಎಣಿಕೆ ಸಿಬ್ಬಂದಿ ನಡುವೆ ಸಂಪರ್ಕ ಇರುವ ಬಗ್ಗೆ ಪರಿಶೀಲಿಸಲಾಗಿದೆ. ಪ್ರಕರಣದ ಸಮಗ್ರ ತನಿಖೆಗಾಗಿ ಹೆಚ್ಚುವರಿ ಸಮಯವನ್ನೂ ಎಸ್ಐಟಿ ಕೇಳಿದ್ದು ಇದೇ ವೇಳೆ, ಕಾಣಿಕೆ ನಗದು ಎಣಿಸುತ್ತಿದ್ದ 40ಕ್ಕೂ ಹೆಚ್ಚು ಸಿಬ್ಬಂದಿಯನ್ನು ಪ್ರಕರಣ ಹೊರಬಂದ ಬಳಿಕ ಕೆಲಸದಿಂದ ತೆಗೆದು ಹಾಕಲಾಗಿದೆ. ಅಯೋಧ್ಯೆ ಮಂದಿರ ಹೆಸರಲ್ಲಿ ದೇಶಾದ್ಯಂತ ದೇಣಿಗೆ ಸಂಗ್ರಹ ಮಾಡಲಾಗಿದ್ದು 3500 ಕೋಟಿಗೂ ಹೆಚ್ಚು ಹಣ ಸಂಗ್ರಹವಾಗಿದೆ ಎನ್ನಲಾಗಿತ್ತು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am