'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ ಕಮೆಂಟ್ ; ಬೆಂಗಳೂರಿನ ವ್ಯಕ್ತಿ ಬಂಧಿಸಿದ ವಿಟ್ಲ ಪೊಲೀಸರು

28-06-26 09:38 pm       HK News Staffer   ಕ್ರೈಂ

ಫೇಸ್ಬುಕ್ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, 'ಸನಾತನಿ ಸಿಂಹ' ಎಂಬ ಫೇಸ್‌ಬುಕ್‌ ಪೇಜ್‌ ಹೆಸರಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ ಪ್ರಕರಣದಲ್ಲಿ ಬೆಂಗಳೂರಿನ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು, ‌ಜೂನ್ 28: ಫೇಸ್ಬುಕ್ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, 'ಸನಾತನಿ ಸಿಂಹ' ಎಂಬ ಫೇಸ್‌ಬುಕ್‌ ಪೇಜ್‌ ಹೆಸರಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ ಪ್ರಕರಣದಲ್ಲಿ ಬೆಂಗಳೂರಿನ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. 

ಆಕ್ಷೇಪಾರ್ಹ ಕಮೆಂಟ್ ಹಾಕಿದ ಬಗ್ಗೆ ವಿಟ್ಲ ಠಾಣೆಯಲ್ಲಿ 18-09-2025 ರಂದು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಿದ ಪೊಲೀಸರು ಆರೋಪಿತ ಬೆಂಗಳೂರು ವಿದ್ಯಮಾನ್ಯ ನಗರ ನಿವಾಸಿ ಆನಂದ ಎಂಬಾತನನ್ನು 27/06/2026ರಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

ಸದ್ರಿ ಆರೋಪಿತನ ವಿರುದ್ದ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ತಿಳಿದುಬಂದಿರುತ್ತದೆ.