ಬ್ರೇಕಿಂಗ್ ನ್ಯೂಸ್
29-06-26 04:45 pm HK News Staffer ಕ್ರೈಂ
ಉಡುಪಿ, ಜೂನ್ 29: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನ ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ನಂತರ ಹೆತ್ತ ತಂದ ತಾಯಿ ಮೇಲೆ ಹಲ್ಲೆ ಹಾಗೂ ಬೆದರಿಕೆ ಹಾಕಿದ ಗಂಭೀರ ಆರೋಪದಡಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ದುಷ್ಟ ಮಗನ ಮೇಲೆ ಪ್ರಕರಣ ದಾಖಲಾಗಿದೆ.
ಬದನಿಡಿಯೂರು ಗ್ರಾಮದ 69 ವರ್ಷದ ಸರಸು ಸುರ್ವರ್ಣ ನೀಡಿದ ದೂರಿನ ಪ್ರಕಾರ, ಅವರ ಎರಡನೇ ಪುತ್ರ ವಿನೋದ್ ಸುರ್ವರ್ಣ ಈ ಕೃತ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಸರಸು ಸುರ್ವರ್ಣ ಹೆಸರಿನಲ್ಲಿದ್ದ ಮನೆಯಲ್ಲಿ ಮಗನೊಂದಿಗೆ ವಾಸವಾಗಿದ್ದ ಸಂದರ್ಭ, ವಿನೋದ್ ನಿರಂತರವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸುವಂತೆ ತಾಯಿಗೆ ಒತ್ತಡ ಹೇರಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆಸ್ತಿಯನ್ನು ಮಗನ ಹೆಸರಿಗೆ ಬರೆಯಲು ಒಪ್ಪದಿದ್ದಾಗ ಹಲ್ಲೆ ಮಾಡಿ ಬೆದರಿಕೆ ಹಾಕಿ ಒತ್ತಾಯಪೂರ್ವಕವಾಗಿ ದಾಖಲೆಗಳನ್ನು ಸಹಿ ಮಾಡಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನಂತರ ಒತ್ತಾಯಪೂರ್ವಕವಾಗಿ ರಿಜಿಸ್ಟರ್ ಕಚೇರಿಗೆ ಕರೆದುಕೊಂಡು ಹೋಗಿ ಸರಸು ಸುವರ್ಣರ ಹೆಸರಿನಲ್ಲಿದ್ದ 11 ಸೆಂಟ್ಸ್ ಜಾಗ ಮತ್ತು ಮನೆಯನ್ನು ವಿನೋದ ತನ್ನ ಹೆಸರಿಗೆ ಮಾಡಿಕೊಂಡಿದ್ದು ನಂತರ ಈ ವಿಷಯವನ್ನು ಯಾರಿಗೂ ಹೇಳಿಬಾರದಾಗಿ ಬೆದರಿಕೆ ಹಾಕಿದ್ದ. ನೊಂದ ತಾಯಿ ಈ ವಿಚಾರವಾಗಿ ಕುಂದಾಪುರ ಉಪ ವಿಭಾಗಾಧಿಕಾರಿಗಳ ಕೋರ್ಟ್ನಲ್ಲಿ ಕೇಸು ದಾಖಲಿಸಿದ್ದು, ಈ ವಿಚಾರ ತಿಳಿದ ವಿನೋದ್, ಸರಸು ಸುವರ್ಣ ಮತ್ತು ಅವರ ಗಂಡ ದಾಸು, ಮಗಳು ವಿನುತರನ್ನು ಮನೆಯಿಂದ ಹೊರಗೆ ಹಾಕಿದ್ದಾನೆ.
ಈ ಘಟನೆ ಬಳಿಕ ಸರಸು ಎಸಿ ನ್ಯಾಯಾಲಯದ ಮೊರೆ ಹೋಗಿ ಕಾನೂನು ಕ್ರಮಕ್ಕೆ ಮನವಿ ಮಾಡಿದ್ದಾರೆ. ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆಸ್ತಿ ದಾಖಲೆಗಳು, ವರ್ಗಾವಣೆ ಪ್ರಕ್ರಿಯೆ ಹಾಗೂ ಹಲ್ಲೆ–ಬೆದರಿಕೆ ಆರೋಪಗಳ ಬಗ್ಗೆ ಪ್ರತ್ಯೇಕ ತನಿಖೆ ಆರಂಭಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am