ಬ್ರೇಕಿಂಗ್ ನ್ಯೂಸ್
29-06-26 06:45 pm HK News Staffer ಕ್ರೈಂ
ಮಂಗಳೂರು, ಜೂನ್ 29: ಸುರತ್ಕಲ್ ಠಾಣೆ ವ್ಯಾಪ್ತಿಯ ಚೊಕ್ಕಬೆಟ್ಟು ಆಸುಪಾಸಿನಲ್ಲಿ ಜೂನ್ 26 ಮತ್ತು 27ರಂದು ಮುಂಜಾನೆ ಎರಡು ಮನೆಗಳಲ್ಲಿ ನಡೆದ ಮಹಿಳೆಯರ ಸರ ಸುಲಿಗೆ ಪ್ರಕರಣದಲ್ಲಿ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಜೂನ್ 26ರಂದು ಮುಂಜಾನೆ 02 ಗಂಟೆ ವೇಳೆಗೆ ಸುರತ್ಕಲ್ ಠಾಣೆ ವ್ಯಾಪ್ತಿಯ ಚೊಕ್ಕಬೆಟ್ಟು ಅಜಾದ್ ನಗರದ 2ನೇ ಬ್ಲಾಕ್ ನಲ್ಲಿರುವ ಶ್ರೀಮತಿ ಜಾಹೀದ್ ಎಂಬವರು ತನ್ನ ಮನೆಯ ಬೆಡ್ ರೂಮ್ ನಲ್ಲಿ ಮಲಗಿದ್ದಾಗ, ಕಿಟಿಕಿ ಮೂಲಕ ಕೈ ಹಾಕಿದ ವ್ಯಕ್ತಿಯೊಬ್ಬ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಸೆಳೆದು ಸುಲಿಗೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ, ಕರಿಮಣಿ ಸರ ತುಂಡಾಗಿದ್ದು, ಸುಮಾರು 20,000/-ಮೌಲ್ಯದ ಕರಿಮಣಿ ಸರದ ತುಂಡನ್ನು ಆರೋಪಿ ಸೆಳೆದುಕೊಂಡು ಹೋಗಿದ್ದ. ಉಳಿದ ಕರಿಮಣಿ ಸರ ಮಹಿಳೆ ಬಳಿಯೇ ಉಳಿದಿದ್ದು, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ರೀತಿ ಮರುದಿನ 27ರಂದು ಮುಂಜಾನೆ 05 ಗಂಟೆಯಿಂದ 05-15 ಗಂಟೆ ನಡುವೆ ಸುರತ್ಕಲ್ ಠಾಣೆ ವ್ಯಾಪ್ತಿಯ ಚೊಕ್ಕಬೆಟ್ಟು 8ನೇ ಬ್ಲಾಕ್ ನಲ್ಲಿ ಫಯಾಜ್ ಎಂಬವರು ಮಸೀದಿಗೆ ಪ್ರಾರ್ಥನೆಗೆಂದು ಹೋದಾಗ ತನ್ನ ಮನೆಯ ಬಾಗಿಲನ್ನು ಮುಚ್ಚಿ ಹೋಗಿದ್ದರು. ಅದೇ ವೇಳೆಗೆ ಕಳ್ಳನೊಬ್ಬ ಬಾಗಿಲನ್ನು ತೆರೆದು ಮನೆಯ ಒಳಗೆ ನುಗ್ಗಿದ್ದು ಬೆಡ್ ರೂಮ್ ನಲ್ಲಿ ಮಲಗಿದ್ದ ಶ್ರೀಮತಿ ಅಪ್ರೀನಾ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಕಿತ್ತುಕೊಳ್ಳಲು ಯತ್ನಿಸಿದಾಗ ಚಿನ್ನದ ಸರ ತುಂಡಾಗಿದ್ದು, ಸುಮಾರು 1,00,000/-ಮೌಲ್ಯದ ಚಿನ್ನದ ಸರವನ್ನು ಆರೋಪಿ ಸೆಳೆದುಕೊಂಡು ಹೋಗಿದ್ದ. ಚಿನ್ನದ ಸಣ್ಣ ತುಂಡು ಹಾಗೂ ಪೆಂಡೆಂಟ್ ಮಹಿಳೆ ಬಳಿ ಉಳಿದಿತ್ತು. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಎರಡೂ ಸುಲಿಗೆ ಪ್ರಕರಣಗಳನ್ನು ತನಿಖೆ ನಡೆಸಿದ ಸುರತ್ಕಲ್ ಪೊಲೀಸರು ಆರೋಪಿ ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಅಬ್ದುಲ್ ಜಾಫರ್ (28) ನನ್ನು ಜೂನ್ 29ರಂದು ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿಯಲ್ಲಿ ಚಿನ್ನಾಭರಣಗಳನ್ನು ಮಾರಾಟ ಮಾಡಲು ಒಯ್ಯುತ್ತಿದ್ದಾಗ ದಸ್ತಗಿರಿ ಮಾಡಿದ್ದಾರೆ. ಆರೋಪಿತನಿಂದ ಎರಡೂ ಕಳವು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಚಿನ್ನಾಭರಣಗಳನ್ನು ಯಥಾಸ್ಥಿತಿಯಲ್ಲಿ ಸ್ವಾಧೀನಪಡಿಸಲಾಗಿದೆ.
ಆರೋಪಿ ಮೊಹಮ್ಮದ್ ಅಬ್ದುಲ್ ಜಾಫರ್ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮೊ.ನಂ. 36/2025 ಕಲಂ: 326 (ಎಫ್), 324(5), 352, 351(3), 3(5) ಬಿ.ಎನ್.ಎಸ್ ಮತ್ತು ಉರ್ವಾ ಪೊಲೀಸ್ ಠಾಣೆ ಮೊ.ನಂ. 123/2018 ಕಲಂ: 341, 323, 504, 506 ಐಪಿಸಿ ಅಡಿ ಪ್ರಕರಣ ದಾಖಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am