ಬ್ರೇಕಿಂಗ್ ನ್ಯೂಸ್
29-06-26 07:25 pm HK News Staffer ಕ್ರೈಂ
ಮಂಗಳೂರು, ಜೂನ್ 29: ಮಂಗಳೂರು ನಗರದ ಕೊಡಿಯಾಲಬೈಲಿನಲ್ಲಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಕಳಿಸಿದ್ದು ಬಾಂಬ್ ಪತ್ತೆದಳ ಮತ್ತು ಶ್ವಾನದಳ ಪೊಲೀಸರು ಸ್ಥಳದಲ್ಲಿ ಶೋಧ ನಡೆಸಿದ್ದಾರೆ.
ಮಂಗಳೂರು ಜಿಲ್ಲಾ ಕೋರ್ಟಿನ ಇ-ಮೇಲ್ ವಿಳಾಸಕ್ಕೆ ಅನ್ಬನಂತನ್ ಐಯ್ಯಪ್ಪನ್ ಎಂಬ ಹೆಸರಿನಲ್ಲಿ ಇ-ಮೇಲ್ ಸಂದೇಶ ಬಂದಿದ್ದು ಕೋರ್ಟ್ ಆವರಣದಲ್ಲಿ ಕೆಮಿಕಲ್ ಬಾಂಬ್ ಇಟ್ಟು ಸ್ಟೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇಸ್ರೇಲ್ ದೂತಾವಾಸದೊಂದಿಗೆ ಮಂಗಳೂರು ನ್ಯಾಯಾಲಯವನ್ನೂ ಜೂನ್ 29ರ ಮಧ್ಯಾಹ್ನ ಒಂದು ಗಂಟೆಗೆ ಬಾಂಬಿಟ್ಟು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ.
ತನ್ನನ್ನು GenZ DMK ಲೀಡರ್ ಎಂದು ಹೇಳಿಕೊಂಡಿರುವ ಅನ್ಬನಂತನ್ ಐಯ್ಯಪ್ಪನ್, ಸಂಸದ ಎನ್. ಆರ್. ಇಳಂಗೋವನ್ ನಾಡಿಗೆ ದ್ರೋಹ ಎಸಗಿದ್ದಾರೆ, ಈ ಕಾರಣಕ್ಕಾಗಿ ಬಾಂಬ್ ಹಾಕುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಎಲ್ಲಾ ನ್ಯಾಯಾಧೀಶರ ಮೂಗು ಮತ್ತು ಬಾಯಿಗಳನ್ನು ಮುಚ್ಚಿ ಅವರನ್ನು ಕೂಡಲೇ ಸ್ಥಳಾಂತರಿಸಿ ಎಂದು ಬೆದರಿಕೆ ಹಾಕಿದ್ದಾನೆ.
ಬಾಂಬ್ ಬೆದರಿಕೆ ಹಿನ್ನೆಲೆ ನ್ಯಾಯಾಲಯ ಆವರಣದಲ್ಲಿ ಬಾಂಬ್ ಪತ್ತೆ ದಳ ಮತ್ತು ಸ್ವಾನದಳದಿಂದ ಶೋಧ ನಡೆಸಲಾಗಿದೆ. ಕೋರ್ಟ್ ಕಟ್ಟಡದ ಎಲ್ಲ ಕೊಠಡಿಗಳಲ್ಲಿ ಶೋಧ ಕಾರ್ಯಾಚರಣೆ ಮಾಡಲಾಗಿದೆ. ನಿನ್ನೆ ರಾತ್ರಿ ಇಮೇಲ್ ಬಂದಿದ್ದು ಮಂಗಳೂರು ಪೊಲೀಸರು ಮಧ್ಯಾಹ್ನ ವೇಳೆಗೆ ಕೋರ್ಟ್ ಆವರಣದಲ್ಲಿ ತಪಾಸಣೆ ನಡೆಸಿದ್ದಾರೆ. ಇದೇ ವೇಳೆ, ಚಾಮರಾಜನಗರ ಜಿಲ್ಲಾ ಕೋರ್ಟಿಗೂ ಇದೇ ರೀತಿಯ ಇಮೇಲ್ ಸಂದೇಶ ಬಂದಿದೆ. ಎರಡು ದಿನಗಳ ಹಿಂದೆ ಕಾರವಾರ ಮತ್ತು ಬಾಗಲಕೋಟ ಜಿಲ್ಲಾ ನ್ಯಾಯಾಲಯಗಳಿಗೂ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್ ಪೀಠಕ್ಕೂ ಭದ್ರತೆ ಒದಗಿಸಲಾಗಿದೆ. ಜೂನ್ 26ರಂದು ಉಡುಪಿ ಜಿಲ್ಲಾ ಕೋರ್ಟಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am