ಬ್ರೇಕಿಂಗ್ ನ್ಯೂಸ್
01-07-26 08:59 am HK News Staffer ಕ್ರೈಂ
ಮಂಗಳೂರು, ಜುಲೈ 1: ಭಾರೀ ಮಳೆಗೆ ನಗರದ ಕಂಕನಾಡಿ ನಾಗುರಿ ಬಳಿಯ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಹಳೆಯ ಹಂಚಿನ ಕಟ್ಟಡದ ಮೇಲೆ ಗುಡ್ಡ ಕುಸಿದು ಬಿದ್ದಿದ್ದು ಎರಡು ಕುಟುಂಬಗಳಿಗೆ ಸೇರಿದ ಇಬ್ಬರು ಮಕ್ಕಳು ಮತ್ತು ಒಬ್ಬರು ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.
ನಿನ್ನೆ ರಾತ್ರಿಯಿಂದ ಮಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಮಳೆಯ ತೀವ್ರತೆಗೆ ಮನೆ ಹಿಂಭಾಗದಲ್ಲಿದ್ದ ಗುಡ್ಡ ಕುಸಿದು ಬಿದ್ದಿದೆ. ಇದರಿಂದಾಗಿ ಕೆಳ ಭಾಗದಲ್ಲಿ ನಾಲ್ಕು ಪ್ರತ್ಯೇಕ ಕುಟುಂಬಗಳು ವಾಸವಿದ್ದ ಹಳೆ ಮನೆಯ ಕಟ್ಟಡಕ್ಕೆ ಮಣ್ಣು ಬಿದ್ದಿದ್ದು ಒಂದು ಭಾಗ ತೀವ್ರ ಹಾನಿಯಾಗಿದೆ. ಬಿಹಾರ ಮೂಲದ ಲಾಲ್ ಬಾಬು (37) ಮತ್ತು ಆತನ ಪತ್ನಿ ಇಂದು (34) ಹಾಗೂ ಅವರ ನಾಲ್ಕು ಮಕ್ಕಳು ಒಂದು ಮನೆಯಲ್ಲಿ ಎಂಟು ವರ್ಷಗಳಿಂದ ನೆಲೆಸಿದ್ದರು. ಅಲ್ಕಾ(14), ಅನುಷ್ಕಾ(11), ಅನಾಮಿಕ (7) ಮತ್ತು ತನು (3) ಎಂಬ ಮಕ್ಕಳಿದ್ದು ಈ ಪೈಕಿ ಇಬ್ಬರು ಮಕ್ಕಳು ಸಾವನ್ನಪ್ಪಿದ ಬಗ್ಗೆ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಸಿಬಂದಿ ಶಂಕಿಸಿದ್ದಾರೆ. ಅನಾಮಿಕ ಮತ್ತು ತನು ಎಂಬ ಇಬ್ಬರು ಸಣ್ಣ ಮಕ್ಕಳು ದುರಂತದಲ್ಲಿ ಸಾವನ್ನಪ್ಪಿದ್ದಾಗಿ ಪೊಲೀಸರು ತಿಳಿಸಿದ್ದಾರೆ.




ಹಾನಿಗೀಡಾದ ಮತ್ತೊಂದು ಮನೆಯಲ್ಲಿ ಉಡುಪಿ ಜಿಲ್ಲೆಯ ಮೂಲದ ಬಾಲಕೃಷ್ಣ (40) ಮತ್ತು ಅವರ ಪತ್ನಿ ಶಾಂತ (35) ಎಂಬವರು ಕಳೆದ ಎಂಟು ತಿಂಗಳಿನಿಂದ ನೆಲೆಸಿದ್ದು ಈ ಪೈಕಿ ಶಾಂತ ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಶಂಕೆ ಇದೆ. ಇವರ ದೇಹವನ್ನು ಅಗ್ನಿಶಾಮಕ ಸಿಬಂದಿ ಹೊರಕ್ಕೆ ತಂದಿದ್ದು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಒಯ್ಯಲಾಗಿದೆ.
ನಸುಕಿನ ವೇಳೆಗೆ ಮಣ್ಣು ಕುಸಿದ ಘಟನೆ ನಡೆದಿದ್ದು ಮನೆಯಲ್ಲಿ ಬೆಚ್ಚಗೆ ಮಲಗಿದ್ದ ಕುಟುಂಬಸ್ಥರು ಹಠಾತ್ ಘಟನೆಯಲ್ಲಿ ಮಣ್ಣಿನಡಿಗೆ ಬಿದ್ದಿದ್ದರು. ಉದ್ದಕ್ಕೆ ಒಂದೇ ಕಟ್ಟಡದಲ್ಲಿರುವ ಹಳೆಯ ಹಂಚಿನ ಮನೆಯನ್ನು ನಾಲ್ಕು ಬಾಡಿಗೆ ಮನೆಗಳನ್ನಾಗಿಸಿ ಪ್ರತ್ಯೇಕ ಬಾಡಿಗೆ ಕೊಡಲಾಗಿತ್ತು. ಭಾರೀ ಮಳೆಗೆ ಹಿಂಬದಿಯಿದ್ದ ಗುಡ್ಡ ಕುಸಿದು ಮನೆ ಮೇಲೆ ಬಿದ್ದು ದುರಂತ ಸಂಭವಿಸಿದೆ. ನಾಗುರಿಯಲ್ಲಿರುವ ಕಂಕನಾಡಿ ನಗರ ಠಾಣೆಯ ಹಿಂಭಾಗದಲ್ಲೇ ಘಟನೆ ನಡೆದಿದ್ದು ಮೊದಲಿಗೆ ಪೊಲೀಸರು ಮತ್ತು ಸ್ಥಳೀಯರು ಸೇರಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಬಳಿಕ ಅಗ್ನಿಶಾಮಕ ಸಿಬಂದಿ ಆಗಮಿಸಿ ರಕ್ಷಣಾ ಕಾರ್ಯಕ್ಕೆ ಕೈಜೋಡಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm