ಬ್ರೇಕಿಂಗ್ ನ್ಯೂಸ್
02-07-26 08:40 pm HK News Staffer ಕ್ರೈಂ
ಉಡುಪಿ, ಜು. 2: ಶಂಕರಪುರ ಸಮೀಪದ ಕುರ್ಕಾಲು ಪೆಟ್ರೋಲ್ ಬಂಕ್ನಲ್ಲಿ ಏಕೋ ಸ್ಪೋರ್ಟ್ ಕಾರಿಗೆ 4,711ರೂ. ಡೀಸೆಲ್ ತುಂಬಿಸಿಕೊಂಡು ಹಣ ನೀಡದೆ ಪರಾರಿಯಾಗಿದ್ದ ಮೂವರು ಯುವಕರನ್ನ ಶಿರ್ವ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಶಿರ್ವದ ಕೋಟೆಕಾರ ನಿವಾಸಿ ಮೊಹಮ್ಮದ್ ರಿಯಾಜ್ (26), ಶಿರ್ವದ ಭೂತಬೆಟ್ಟು ನಿವಾಸಿ ಮೊಹಮ್ಮದ್ ಅಫ್ರಾಜ್ (23) ಹಾಗೂ ಉಡುಪಿಯ ಅಂಬಾಗಿಲು ನಿವಾಸಿ ಆಶಿಲ್ (21) ಎಂದು ಗುರುತಿಸಲಾಗಿದೆ.

ಜೂನ್ 27ರಂದು ರಾತ್ರಿ ಸುಮಾರು 9.10ಕ್ಕೆ ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಸುಭಾಷ್ ನಗರದ ಪೆಟ್ರೋಲ್ ಪಂಪ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿಯಲ್ಲಿ ದೃಶ್ಯ ಸೆರೆಯಾಗಿತ್ತು.
4,711 ರೂ.ಗೆ ಡೀಸೆಲ್ ತುಂಬಿದ ಬಳಿಕ ಸಿಬ್ಬಂದಿ ಕ್ಯೂಆರ್ ಕೋಡ್ ತೋರಿಸಿದ್ದಾನೆ. ಆರೋಪಿಗಳು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಂತೆ ನಾಟಕವಾಡಿ, ಬಿಲ್ ನೀಡುವಂತೆ ಕೇಳಿದ್ದಾರೆ. ಸಿಬ್ಬಂದಿ ಬಿಲ್ ಕೊಡುವಷ್ಟರಲ್ಲಿ ಹಣ ಪಾವತಿಸದೇ ಪರಾರಿಯಾಗಿದ್ರು.
ತಾಂತ್ರಿಕ ಮಾಹಿತಿ, ಕಾರ್ ನಂಬರ್ ಆಧರಿಸಿ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಮಾರ್ಗದರ್ಶನದಲ್ಲಿ, ಶಿರ್ವ ಪಿಎಸ್ಐ ಮಂಜುನಾಥ ಮರಬಾಡ, ಪಿಎಸ್ಐ ಲೋಹಿತ್ ಕುಮಾರ್ ಸಿ.ಎಸ್. ಹಾಗೂ ಸಿಬ್ಬಂದಿಗಳಾದ ಹರ್ಷ ಭಟ್, ಬಸವರಾಜ್ ಮತ್ತು ದಾರಿಯಪ್ಪ ತಂಡ ಬೆಂಗಳೂರಿನಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದೆ.
ಪ್ರಕರಣಕ್ಕೆ ಬಳಸಲಾಗಿದ್ದ ಫೋರ್ಡ್ ಎಕೋಸ್ಪೋರ್ಟ್ ಕಾರನ್ನು ವಶಕ್ಕೆ ಪಡೆದಿದ್ದು, ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am