ಬ್ರೇಕಿಂಗ್ ನ್ಯೂಸ್
03-07-26 12:25 pm HK News Staffer ಕ್ರೈಂ
ಮಂಗಳೂರು, ಜುಲೈ 3: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ ಎಸೆಯಲು ಯತ್ನಿಸಿದ ಖದೀಮನನ್ನು ಜೈಲಿನ ಭದ್ರತಾ ವಿಭಾಗದ ಕೆಎಸ್ಐಎಸ್ಎಫ್ ಸಿಬ್ಬಂದಿ ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯಿಂದ ಗಾಂಜಾ, ಲೈಟರ್ ಹಾಗೂ ಗಾಂಜಾ ಸೇದುವ ಪೇಪರ್ಗಳನ್ನು ವಶಪಡಿಸಲಾಗಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಕೊಳತ್ತಮಜಲು ಕೋಳಕೇರಿ ಮೂಲದ, ಪ್ರಸ್ತುತ ಉರ್ವದಲ್ಲಿ ವಾಸವಿರುವ ತಿಲಕ್ರಾಜ್ ಬಂಧಿತ ಆರೋಪಿ. ಈ ಕೃತ್ಯದ ಹಿಂದೆ ಮೂಡುಶೆಡ್ಡೆ ನಿವಾಸಿ ಕಿರಣ್ ಹಾಗೂ ಸದ್ಯ ಕಾರಾಗೃಹದಲ್ಲಿ ಬಂಧಿಯಾಗಿರುವ ಕೈದಿ ಲಾಯ್ ವೇಗಸ್ ಕೈವಾಡ ಇರುವುದು ಪೊಲೀಸರ ಪ್ರಾಥಮಿಕ ವಿಚಾರಣೆಯಿಂದ ಬೆಳಕಿಗೆ ಬಂದಿದೆ.
ಜುಲೈ 2ರಂದು ಮುಂಜಾನೆ 4:20ರ ಸುಮಾರಿಗೆ ಆರೋಪಿ ತಿಲಕ್ರಾಜ್ ಜೈಲಿನ ಕಾಂಪೌಂಡ್ ಗೋಡೆಯ ಹೊರಗೆ ಸಂಶಯಾಸ್ಪದವಾಗಿ ಓಡಾಡುತ್ತಾ, ಕಾರಾಗೃಹದ ಒಳಗಿರುವ ಅಡುಗೆ ಮನೆ ಪ್ರದೇಶಕ್ಕೆ ಪೊಟ್ಟಣವೊಂದನ್ನು ಎಸೆದಿದ್ದ. ಈ ಘಟನೆಯನ್ನು ಅಲ್ಲಿ ಕಾವಲು ನಿಂತಿದ್ದ ಕೆಎಸ್ಐಎಸ್ಎಫ್ ಆರ್ಪಿಸಿ ಕಿರಣ್ ತಕ್ಷಣವೇ ಗಮನಿಸಿದ್ದಾರೆ. ಕೂಡಲೇ ಅವರು ಎಎಸ್ಐ ಕಿರಣ್ ಅಂಬಿಗ ಅವರಿಗೆ ಅಲರ್ಟ್ ಸಂದೇಶ ರವಾನಿಸಿದ್ದಾರೆ. ಜೈಲು ಸಿಬ್ಬಂದಿ ತನ್ನನ್ನು ಹಿಡಿಯಲು ಬರುತ್ತಿರುವುದನ್ನು ಕಂಡ ಆರೋಪಿ ತಿಲಕ್ರಾಜ್ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಅಷ್ಟಕ್ಕೇ ಬಿಡದ ಸಿಬ್ಬಂದಿ ಸುಮಾರು 500 ಮೀಟರ್ನಷ್ಟು ದೂರ ಆತನನ್ನು ಬೆನ್ನಟ್ಟಿಕೊಂಡು ಹೋಗಿ ಬಂಧಿಸಿದ್ದಾರೆ.
ಬಳಿಕ ಕೆಎಸ್ಐಎಸ್ಎಫ್ ಸೂಚನೆಯಂತೆ ಬರ್ಕೆ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ಮಾಡಿದಾಗ ಜೈಲಿನೊಳಗೆ ಗಾಂಜಾ, ಡ್ರಗ್ಸ್ ತೂರುವ ಜಾಲ ಬಯಲಾಗಿದೆ. ಮೂಡುಶೆಡ್ಡೆ ನಿವಾಸಿ ಕಿರಣ್ ಎಂಬಾತ ತನಗೆ ಗಾಂಜಾ, ಲೈಟರ್ ಹಾಗೂ ರೋಲಿಂಗ್ ಪೇಪರ್ ನೀಡಿ, ಜೈಲಿನಲ್ಲಿರುವ ಲಾಯ್ ವೇಗಸ್ ಎಂಬಾತನ ಮೊಬೈಲ್ ನಂಬರ್ ಕೊಟ್ಟಿದ್ದ ಎಂದು ತಿಲಕ್ರಾಜ್ ಬಾಯಿಬಿಟ್ಟಿದ್ದಾನೆ. ಈ ಕೆಲಸಕ್ಕಾಗಿ ತನಗೆ ₹2,000 ಅಡ್ವಾನ್ಸ್ ನೀಡಲಾಗಿತ್ತು. ಜೈಲಿನೊಳಗಿದ್ದ ಕೈದಿ ಲಾಯ್ ವೇಗಸ್ ಫೋನ್ ಮಾಡಿ ಕರೆಕ್ಟಾಗಿ ಅಡುಗೆ ಮನೆ ಇರುವ ಜಾಗಕ್ಕೆ ಎಸೆಯುವಂತೆ ಹೇಳಿದ್ದ ಎಂದು ಆರೋಪಿ ತಿಳಿಸಿದ್ದಾನೆಂದು ವಿಚಾರಣೆ ನಡೆಸಿದ ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬರ್ಕೆ ಪೊಲೀಸರು ಆರೋಪಿಗಳಾದ ತಿಲಕ್ರಾಜ್ ಮತ್ತು ಲಾಯ್ ವೇಗಸ್ ವಿರುದ್ಧ ಎನ್ಡಿಪಿಎಸ್ ಕಾಯ್ದೆ ಹಾಗೂ ಕರ್ನಾಟಕ ಕಾರಾಗೃಹಗಳ ತಿದ್ದುಪಡಿ ಕಾಯ್ದೆ-2022ರ ಸೆಕ್ಷನ್ 42ರ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am