ಬ್ರೇಕಿಂಗ್ ನ್ಯೂಸ್
03-07-26 04:22 pm HK News Staffer ಕ್ರೈಂ
ಕಾಸರಗೋಡು, ಜುಲೈ 3: ಇನ್ಸ್ಟಾ ಗ್ರಾಮ್ ಜಾಲತಾಣದಲ್ಲಿ ಹತ್ತು ಲಕ್ಷಕ್ಕೂ ಅಧಿಕ ಫಾಲೊವರ್ಸ್ ಹೊಂದಿರುವ ಸ್ಟಾರ್ ಇನ್ ಫ್ಲುಯೆನ್ಸರ್ ಧನ್ಯಾ ಎಸ್.ಆರ್ ಅಲಿಯಾಸ್ ‘ಸ್ಪಾರ್ಟಾದ ಹೆಲೆನ್’ (28) ವಿರುದ್ಧ ಮದ್ಯದ ಅಮಲಿನಲ್ಲಿ ಅಪಾಯಕಾರಿಯಾಗಿ ಕಾರು ಚಲಾಯಿಸಿದ ಆರೋಪದಲ್ಲಿ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತಪಾಸಣೆಗೆ ಮುಂದಾದ ವೇಳೆ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದು ಕಾರನ್ನು ಬಳಿಕ ಬರೋಬ್ಬರಿ 17 ಕಿಲೋಮೀಟರ್ ಬೆನ್ನಟ್ಟಿ ಹಿಡಿದಿದ್ದಾರೆ.
ಜುಲೈ 1ರ ನಸುಕಿನ ಜಾವ 2 ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 66ರ ಬಂದಿಯೋಡು ಎಂಬಲ್ಲಿ ಹೈಡ್ರಾಮಾ ನಡೆದಿದ್ದು, ಧನ್ಯಾ ಚಲಾಯಿಸುತ್ತಿದ್ದ ಟಾಟಾ ಪಂಚ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ಬೈಜು ಕೆ. ಜೋಸ್ ನೇತೃತ್ವದ ಗಸ್ತು ತಂಡವು ವಿದ್ಯಾನಗರ ಠಾಣೆಯ ಕಡೆಯಿಂದ ಕುಂಬಳೆಗೆ ಬರುತ್ತಿದ್ದಾಗ, ಅಣಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲಿ ಟಾಟಾ ಪಂಚ್ ಕಾರು ನಿಂತಿರುವುದನ್ನು ಗಮನಿಸಿದ್ದಾರೆ. ಪೊಲೀಸರು ವಾಹನವನ್ನು ಪರಿಶೀಲಿಸಲು ಹತ್ತಿರ ಬರುತ್ತಿದ್ದಂತೆ, ಚಾಲಕನ ಸೀಟಿನಲ್ಲಿದ್ದ ಧನ್ಯಾ ಪೊಲೀಸರ ಸೂಚನೆಗಳನ್ನು ನಿರ್ಲಕ್ಷಿಸಿ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದಾರೆ. ಅನುಮಾನಗೊಂಡ ಪೊಲೀಸರು ಜೀಪ್ನಲ್ಲಿ ಕಾರನ್ನು ಬೆನ್ನಟ್ಟಿದ್ದು, ಮಂಗಲ್ಪಾಡಿ ಭಗವತಿ ನಗರದ ಬಳಿ 17 ಕಿ.ಮೀ ದೂರದ ವರೆಗೆ ಚೇಸ್ ಮಾಡಿ ಕಾರನ್ನು ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ವೇಳೆ, ಕಾರು ಚಾಲಕಿ ಧನ್ಯಾ ಅವರ ಉಸಿರಾಟದಲ್ಲಿ ಮದ್ಯದ ವಾಸನೆ ಬಂದಿದೆ. ತಕ್ಷಣವೇ ಆಕೆಯನ್ನು ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ತೋರಿಸಿದೆ. ಮೋಟಾರು ವಾಹನ ಕಾಯ್ದೆಯಡಿ ನಿಗದಿಪಡಿಸಿದ ಮಿತಿಗಿಂತ (100 ಮಿಲಿಗೆ 30 ಮಿಗ್ರಾಂ) ಎರಡು ಪಟ್ಟು ಹೆಚ್ಚು ಇರುವುದು ದೃಢಪಟ್ಟಿದ್ದರಿಂದ ಕೇಸು ದಾಖಲಿಸಿದ್ದಾರೆ. ಕಾರಿನಲ್ಲಿ ಧನ್ಯಾ ಅವರೊಂದಿಗೆ ಪತಿ ರಾಜೇಶ್ ಕೆ.ಆರ್. ಕೂಡ ಪ್ರಯಾಣಿಸುತ್ತಿದ್ದರು. ಧನ್ಯಾ ವಿರುದ್ಧ ಬಿಎನ್ಎಸ್ ಸೆಕ್ಷನ್ 281 (ಅತಿವೇಗದ ಚಾಲನೆ) ಹಾಗೂ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 132(1), 179 ಮತ್ತು 185 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಧನ್ಯಾ, ಮದ್ಯ ಸೇವಿಸಿ ವಾಹನ ಚಲಾಯಿಸಿದ್ದು ನಿಜ. ಪೊಲೀಸರನ್ನು ನೋಡಿ ಗೊಂದಲಕ್ಕೀಡಾಗಿ ಕಾರು ಚಲಾಯಿಸಿದೆ ಅಷ್ಟೇ. ಪೊಲೀಸರು ಸಭ್ಯ ರೀತಿಯಲ್ಲೇ ನಡೆದುಕೊಂಡಿದ್ದಾರೆ. ಆದರೆ ಕೆಲವು ಮಾಧ್ಯಮಗಳು ನಾನು ಎಂಡಿಎಂಎ ಡ್ರಗ್ಸ್ ತಗೊಂಡಿದ್ದೆ ಅಂತ ಸುಳ್ಳು ವರದಿ ಮಾಡ್ತಿವೆ. ಇದಕ್ಕಾಗಿಯೇ ನಾನು ಮಿಮ್ಸ್ ಆಸ್ಪತ್ರೆಯಲ್ಲಿ ರಕ್ತದ ಮಾದರಿ ಪರೀಕ್ಷೆ ನೀಡಿದ್ದು, ರಿಪೋರ್ಟ್ ಬಂದ ತಕ್ಷಣ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡ್ತೀನಿ” ಎಂದು ಹೇಳಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am