ಬ್ರೇಕಿಂಗ್ ನ್ಯೂಸ್
04-07-26 06:54 pm HK News Staffer ಕ್ರೈಂ
ಉಡುಪಿ, ಜುಲೈ 4: ಅಶ್ಲೀಲ ವಿಡಿಯೋಗಳಿವೆ ಎಂದು ಹೇಳಿ ಉದ್ಯಮಿಯೊಬ್ಬರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದಲ್ಲಿ ಪಡುಬಿದ್ರೆಯ ಮಹಿಳೆಯೊಬ್ಬಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಪಡುಬಿದ್ರೆ ಕಂಚಿನಡ್ಕ ಮಸೀದಿ ಸಮೀಪದ ನಿವಾಸಿ ಝೀನತ್ ಇಬ್ರಾಹೀಂ ಬಂಧಿತ ಆರೋಪಿ. ಉಡುಪಿ ಮೂಲದ ರಿಯಲ್ ಎಸ್ಟೆಟ್ ವ್ಯವಹಾರ ಮಾಡಿಕೊಂಡಿದ್ದ ಉದ್ಯಮಿಗೆ ಝೀನತ್ ಪರಿಚಯವಾಗಿದ್ದು, ಬಳಿಕ ಅವರಿಬ್ಬರು ಸೇರಿ ಜಂಟಿಯಾಗಿ ರಿಯಲ್ ಎಸ್ಟೇಟ್ ಕಚೇರಿ ಪ್ರಾರಂಭಿಸಿದ್ದರು. ಆ ವ್ಯಕ್ತಿ ಝೀನತ್ ಮಾತುಗಳನ್ನು ನಂಬಿ ಹೂಡಿಕೆ ಮಾಡುವ ಉದ್ದೇಶದಿಂದ 70 ಲಕ್ಷ ರೂ. ಆಕೆಗೆ ನೀಡಿದ್ದರು. ಈ ಹಣವನ್ನು ಝೀನತ್ ಜಮೀನು ಖರೀದಿಗೆ ಬಳಸದೇ ತನ್ನ ಸ್ವಂತ ಉದ್ದೇಶಗಳಿಗಾಗಿ ಬಳಸಿಕೊಂಡು ಮೋಸ ಮಾಡಿದ್ದಳು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಉದ್ಯಮಿ ಬಳಿಕ ತನ್ನ ಕಚೇರಿಯನ್ನು ಮುಚ್ಚುವ ಸಂದರ್ಭದಲ್ಲಿ ಅಲ್ಲಿದ್ದ ಕೆಲವು ರಹಸ್ಯ ಕಡತಗಳು ಮತ್ತು ಪೆನ್ ಡ್ರೈವ್ ಸಿಕ್ಕಿದ್ದು, ಅದರಲ್ಲಿ ಹಲವಾರು ಪ್ರಭಾವಿ ಗಣ್ಯ ವ್ಯಕ್ತಿಗಳ ಖಾಸಗಿ ಮತ್ತು ಅಶ್ಲೀಲ ಛಾಯಾಚಿತ್ರಗಳು ಹಾಗೂ ವಿಡಿಯೋಗಳು ಇರುವುದು ಕಂಡುಬಂದಿತ್ತು.
ಉದ್ಯಮಿ 70 ಲಕ್ಷ ರೂ. ವಾಪಸ್ ನೀಡುವಂತೆ ಝೀನತ್ ಳಲ್ಲಿ ಕೇಳಿದಾಗ, ಆಕೆ ಉದ್ಯಮಿಯ ಹೊಸ ಕಚೇರಿಗೆ ಬಂದು, ಮತ್ತಷ್ಟು ಹಣಕ್ಕೆ ಬೇಡಿಕೆ ಇಡಲು ಪ್ರಾರಂಭಿಸಿದಳು. ಹಣ ನೀಡದಿದ್ದರೆ ಉದ್ಯಮಿ ವಿರುದ್ದ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಳು. ಝೀನತ್ ತನ್ನ ಬಳಿ ಉದ್ಯಮಿಯ ಅಶ್ಲೀಲ ವಿಡಿಯೋಗಳಿವೆ ಎಂದು ಹೇಳಿ ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡತೊಡಗಿದ್ದಲ್ಲದೆ, ಅವರ ಪತ್ನಿ ಮಕ್ಕಳನ್ನು ಅಪಹರಿಸಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾಳೆ ಎಂದು ದೂರಲಾಗಿದೆ.
ಸಬೀನಾ ಇಲ್ಯಾಸ್ ಹಾಗೂ ಇತರರು ಝೀನತ್ ಳೊಂದಿಗೆ ಸೇರಿ ಬ್ಲ್ಯಾಕ್ ಮೇಲ್ ಮಾಡಿ ಅಕ್ರಮವಾಗಿ ಹಣ ವಸೂಲಿ ಮಾಡಿ ವಂಚನೆಯ ಜಾಲವನ್ನು ನಡೆಸುತ್ತಿರುವುದಾಗಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಉದ್ಯಮಿ ದೂರು ನೀಡಿದ್ದಾರೆ.
ನಗರ ಠಾಣೆಯ ಎಸ್ಐ ಭರತೇಶ್ ಕಂಕಣವಾಡಿ ನೇತೃತ್ವದ ತಂಡವು ಝೀನತ್ ಳನ್ನು ಪಡುಬಿದ್ರೆಯ ಕಂಚಿನಡ್ಕ ಎಂಬಲ್ಲಿ ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ಐದು ದಿನಗಳ ಕಸ್ಟಡಿಗೆ ಪಡೆಯಲಾಗಿದೆ. ಇದೇ ರೀತಿ ಆರೋಪಿ ಝೀನತ್ ಳಿಂದ ಯಾರಿಗಾದರೂ ಮೋಸ ಮತ್ತು ವಂಚನೆ ಆಗಿದ್ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am