ಬ್ರೇಕಿಂಗ್ ನ್ಯೂಸ್
06-07-26 12:28 pm HK News Staffer ಕ್ರೈಂ
ಮಂಗಳೂರು, ಜುಲೈ 6: ಚಿನ್ನದ ವ್ಯಾಪಾರಿಯನ್ನು ದರೋಡೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಆರೋಪಿಗಳ ಗುರುತು ಪತ್ತೆಹಚ್ಚಿದ್ದು ಬಂಧನಕ್ಕಾಗಿ ಕೇರಳ ಮತ್ತು ಕೊಡಗಿನಲ್ಲಿ ಬಲೆ ಬೀಸಿದ್ದಾರೆ. ಇದೇ ವೇಳೆ, ಕೃತ್ಯದಲ್ಲಿ ಭಾಗಿಯಾದ ನಟೋರಿಯಸ್ ಆರೋಪಿಗಳ ಫೋಟೋ ಬಿಡುಗಡೆ ಮಾಡಿದ್ದು ಇವರ ಪತ್ತೆಗಾಗಿ ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ.
ಪಾಂಡಿಚೇರಿ ಮೂಲದ ಶಿಬಿನ್ ಗಂಗಾಧರನ್ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾಗಿದ್ದು ಆತನದ್ದು ಸೇರಿ ಒಟ್ಟು 14 ಮಂದಿ ಆರೋಪಿಗಳ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಕೇರಳದ ವಿವಿಧ ಜಿಲ್ಲೆಗಳಿಗೆ ಸೇರಿದ ಶ್ರೀರಾಗ್, ಅತುಲ್, ಮಿಥುನ್ಲಾಲ್, ಅಜೀರ್ ತರಾಯಿಲ್, ವೈಶಾಕ್, ಅಸೀರ್ ಪಯ್ಯನ್ನೂರ್, ಪ್ರಣವ್, ವಿಜಿಲ್ ಅಂಜರಕಂಡಿ, ಕೊಡಗಿನ ಉಬೈದ್, ಫಿರೋಜ್, ಮೊಯ್ದು ಅಬ್ಬಾಸ್, ಜಿಯಾದ್, ಜಮೀರ್ ಅಲಿಕಾ ಎಂಬವರು ಆರೋಪಿಗಳು ಎಂದು ಗುರುತಿಸಲಾಗಿದೆ.
ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ಕಾರಣ ಆರೋಪಿಗಳ ಬಂಧನಕ್ಕೆ ಸಹರಿಸುವಂತೆ ಮಂಗಳೂರು ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ, ಆರೋಪಿಗಳ ಬಗ್ಗೆ ಮಾಹಿತಿ ನೀಡುವವರಿಗೆ ಬಹುಮಾನ ನೀಡಲಾಗುವುದು. ಅವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದ್ದಾರೆ.


ಕರ್ನಾಟಕ ಹಾಗೂ ಕೇರಳದಲ್ಲಿ ಆರೋಪಿಗಳ ಫೋಟೋ ಹಾಗೂ ಹೆಸರನ್ನು ಬಿಡುಗಡೆ ಮಾಡಲಾಗಿದ್ದು ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಆರೋಪಿಗಳ ಫೋಸ್ಟರ್ ಅಂಟಿಸಲು ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳ ಬಂಧನಕ್ಕಾಗಿ ಮಂಗಳೂರು ಪೊಲೀಸರು ಕೇರಳ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು ಹಲವು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಆರೋಪಿಗಳ ಸುಳಿವು ಸಿಗದ ಕಾರಣ ಫೋಟೊ ಬಿಡುಗಡೆ ಮಾಡಿದ್ದಾರೆ.
ಜೂನ್ 29 ರ ನಸುಕಿನಲ್ಲಿ ಮಂಗಳೂರಿನ ಬೈಕಂಪಾಡಿ ಬಳಿಯ ಹೆದ್ದಾರಿ ಮಧ್ಯೆ ಕಾರಿನಲ್ಲಿ ಬರುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ದರೋಡೆ ಮಾಡಲಾಗಿತ್ತು. ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಿಗೆ ಸಹಕರಿಸಿದ ಮೂವರನ್ನು ಪಣಂಬೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ತಲಶ್ಶೇರಿ ಮೂಲದ ನಿಮಿಲ್, ಮಡಿಕೇರಿ ಮೂಲದ ಇರ್ಷಾದ್ ಮತ್ತು ಮುಸ್ತಾಫ ಎಂಬವರನ್ನು ಬಂಧಿಸಿದ್ದರು. ಕಾರಿನಲ್ಲಿ ಬರುತ್ತಿದ್ದ ಪಯ್ಯನ್ನೂರು ಮೂಲದ ಚಿನ್ನದ ವ್ಯಾಪಾರಿ ವಿಕಾಸ್ ಮೇಲೆ ಹಲ್ಲೆಗೈದು 180 ಗ್ರಾಂ ಚಿನ್ನ ಸಹಿತ 23 ಲಕ್ಷ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದರು.
Mangalore Police have released photographs of 14 accused allegedly involved in the robbery of a gold trader and appealed to the public to help trace the absconding suspects. Police said the gang has been identified, and teams have been deployed in Kerala and Kodagu to arrest them. According to investigators, Shibin Gangadharan, a native of Puducherry, is believed to be the mastermind behind the robbery.
06-07-26 04:40 pm
HK News Staffer
ಬೆಂಗಳೂರು ಕೆ.ಆರ್ ವೃತ್ತದಲ್ಲಿ ಬಿಎಂಟಿಸಿ ಬಸ್ಸುಗಳ ಡ...
04-07-26 02:51 pm
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
05-07-26 10:15 pm
HK News Desk
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
Kuloor Accident: ಕುಳೂರು ಬಳಿ ಸ್ಕೂಟರ್ ಗೆ ಟ್ಯಾಂಕ...
03-07-26 10:17 pm
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
06-07-26 04:49 pm
HK News Staffer
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm